Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ ಮನಸ್ಸು ಮಾಡಿದ್ರೆ ಸುಳ್ಯ ಭಾಗದಿಂದ ಮಡಿಕೇರಿಗೆ ಸಂಪರ್ಕ ಕಲ್ಪಿಸಬಹುದು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರ ಮನಸ್ಸು ಮಾಡಿದ್ರೆ ಸುಳ್ಯ ಭಾಗದಿಂದ ಮಡಿಕೇರಿಗೆ ಸಂಪರ್ಕ ಕಲ್ಪಿಸಬಹುದು!

Bengaluru City

ಸರ್ಕಾರ ಮನಸ್ಸು ಮಾಡಿದ್ರೆ ಸುಳ್ಯ ಭಾಗದಿಂದ ಮಡಿಕೇರಿಗೆ ಸಂಪರ್ಕ ಕಲ್ಪಿಸಬಹುದು!

Public TV
Last updated: August 22, 2018 5:20 pm
Public TV
Share
3 Min Read
sampaje ghat qqqqq
SHARE

ಬೆಂಗಳೂರು: ಕೊಡಗನ್ನು ಸಂಪರ್ಕಿಸುವ ಸಂಪಾಜೆ ಘಾಟಿ ರಸ್ತೆ ಬಂದ್ ಆದ ಪರಿಣಾಮ ಪ್ರತಿನಿತ್ಯ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಉದ್ಯೋಗಿಗಳು ಮುಂದೆ ಮಡಿಕೇರಿ ಹೋಗುವುದು ಹೇಗೆ ಎನ್ನುವ ಚಿಂತೆಯಲ್ಲಿದ್ದು, ಸರ್ಕಾರ ಮನಸ್ಸು ಮಾಡಿದರೆ ಮುಂದಿನ ದಿನಗಳಲ್ಲಿ ಈ ಸಮಸ್ಯೆಗೆ ಪರಿಹಾರ ಕಲ್ಪಿಸಬಹುದು.

ಕೊಡಗು- ದಕ್ಷಿಣ ಕನ್ನಡದ ಗಡಿಭಾಗದಲ್ಲಿ ಸುರಿದ ಭಾರೀ ಮಳೆಗೆ ಸಂಪಾಜೆ ಘಾಟಿ ರಸ್ತೆ ಕೊಚ್ಚಿ ಹೋಗಿದ್ದು ಅಲ್ಲಲ್ಲಿ ಗುಡ್ಡಗಳು ಜರಿದು ಬಿದ್ದ ಕಾರಣ ಬಂಟ್ವಾಳ – ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಬಂದ್ ಆಗಿದೆ. ಕೊಡಗಿನ ಗ್ರಾಮಗಳಾದ ಸಂಪಾಜೆ, ಚೆಂಬು, ಪೆರಾಜೆ ಗ್ರಾಮದವರಿಗೆ ವಾಣಿಜ್ಯ ವ್ಯವಹಾರಕ್ಕೆ ಸುಳ್ಯವೇ ಹತ್ತಿರವಾಗಿದ್ದರೂ ಉಳಿದ ಪ್ರತೀ ಕೆಲಸಕ್ಕೂ ತಾಲೂಕು ಮತ್ತು ಜಿಲ್ಲಾ ಕೇಂದ್ರವಾದ ಮಡಿಕೇರಿಗೆ ತೆರಳಬೇಕು. ಸಂಪಾಜೆಯಿಂದ ಮುಕ್ಕಾಲು ಗಂಟೆಯಲ್ಲಿ ತಲುಪಬಹುದಾಗಿದ್ದ ಈ ಸ್ಥಳಕ್ಕೆ ಈಗ ಮಾರ್ಗವೇ ಇಲ್ಲದೇ ಜನ ಕಂಗಾಲಾಗಿದ್ದಾರೆ.

sampaje ghat 2

 

ಸುಳ್ಯ, ಪುತ್ತೂರು ತಾಲೂಕಿನ ಹಲವು ಮಂದಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ. ಶಿರಾಡಿ ಘಾಟಿಯಲ್ಲಿ ಸಂಪರ್ಕ ಬಂದ್ ಆದ ಹಿನ್ನೆಲೆಯಲ್ಲಿ ಸಂಪಾಜೆ ಘಾಟಿ ಮೂಲಕವೇ ಮಡಿಕೇರಿ ತಲುಪಿ ಬೆಂಗಳೂರಿಗೆ ಬರುತ್ತಿದ್ದರು. ಆದರೆ ಈಗ ಎರಡು ಘಾಟಿ ರಸ್ತೆಗಳು ಬಂದ್ ಆದ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯ ಮೂಲಕವೇ ಬೆಂಗಳೂರು ತಲುಪಬೇಕಾದ ಅನಿವಾರ್ಯ ಪರಿಸ್ಥಿತಿ ಸೃಷ್ಟಿಯಾಗಿದೆ.

ಘಾಟಿ ರಸ್ತೆಗಳು ಬಂದ್ ಆಗಿದ್ದರೂ ಮುಂದೆ ಈ ರೀತಿ ಸಂಪರ್ಕ ಸಮಸ್ಯೆ ಆಗದೇ ಇರಲು ನಾವು ಈಗಲೇ ಪರಿಹಾರವನ್ನು ಕಂಡುಕೊಳ್ಳಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಸುಳ್ಯ ಕಡೆಯಿಂದ ಕೊಡಗನ್ನು ಸಂಪರ್ಕಿಸಲು ಕಚ್ಚಾ ರಸ್ತೆಗಳಿದೆ. ಈ ರಸ್ತೆಗಳನ್ನು ಸರ್ಕಾರ ಅಭಿವೃದ್ಧಿ ಪಡಿಸಿದರೆ ಕರಾವಳಿ ಭಾಗದ ಜನರು ಕೊಡಗನ್ನು ಸಂಪರ್ಕಿಸಲು ಸಹಾಯವಾಗುತ್ತದೆ.

MDK RAIN GUDDA KUSHITH AV 3

ಯಾವೆಲ್ಲ ರಸ್ತೆಗಳಿವೆ?
ಮಾರ್ಗ 1: ಕಲ್ಲುಗುಂಡಿ – ಬಾಲಂಬಿ- ದಬ್ಬಡ್ಕ- ಚೆಟ್ಟಿಮಾನಿ- ಮಡಿಕೇರಿ ರಸ್ತೆ
ಈ ರಸ್ತೆಯ ಮೂಲಕ ಸುಳ್ಯದಿಂದ ಮಡಿಕೇರಿಗೆ ಇರುವ ದೂರ ಕೇವಲ 72 ಕಿಲೋ ಮೀಟರ್. ಕಲ್ಲುಗುಂಡಿಯಿದ್ದ ದಬ್ಬಡ್ಕದವರೆಗೆ ಡಾಂಬರ್ ಹಾಕಲಾಗಿದ್ದು, ಕಾಂತಬೈಲು ಸಮೀಪ ಎರಡು ಕಡೆ ಸಣ್ಣ ಸೇತುವೆಗಳು ನಿರ್ಮಾಣವಾದರೆ ಸುಲಭವಾಗಿ ಚೆಟ್ಟಿಮಾನಿ ತಲುಪಬಹುದು. ಬೇಸಿಗೆ ಸಮಯದಲ್ಲಿ ಈ ರಸ್ತೆಯಲ್ಲಿ ದಬ್ಬಡ್ಕದವರೆಗೂ ಬಸ್ ಸಂಚಾರವಿದೆ. ಲೋಕೋಪಯೋಗಿ ಅಧಿಕಾರಿಗಳು ಮನಸ್ಸು ಮಾಡಿದರೆ ಸುಳ್ಯದಿಂದ ಮಡಿಕೇರಿಗೆ ಒಂದುವರೆ ಗಂಟೆಯಲ್ಲಿ ತಲುಪಬಹುದಾಗಿದೆ.

sampaje 1

ಮಾರ್ಗ 2: ಅರಂತೋಡು-ಮರ್ಕಂಜ- ಎಲಿಮಲೆ- ಸುಬ್ರಹ್ಮಣ್ಯ- ಕಡಮಕಲ್- ಗಾಳಿಬೀಡು- ಮಡಿಕೇರಿ ರಸ್ತೆ
ಅರಂತೋಡಿನಿಂದ ಕುಕ್ಕೆಸುಬ್ರಹ್ಮಣ್ಯದವರೆಗೆ ಯಾವುದೇ ಸಮಸ್ಯೆ ಇಲ್ಲ. ಸುಬ್ರಹ್ಮಣ್ಯದಿಂದ ಕಡಮಕಲ್ ಮತ್ತು ಗಾಳಿಬೀಡು ನಡುವೆ ಅರಣ್ಯ ಇಲಾಖೆ ಅಳವಡಿಸಿರುವ ಗೇಟ್ ತೆರವುಗೊಳಿಸಿ ಇರುವ ರಸ್ತೆಯನ್ನು ಕೊಂಚ ಅಗಲೀಕರಣ ಮಾಡಿದರೆ ಸುಬ್ರಹ್ಮಣ್ಯದಿಂದ ಮಡಿಕೇರಿಗೆ ಇರುವ 38 ಕಿ.ಮೀ ದೂರವನ್ನು ಮುಕ್ಕಾಲು ಗಂಟೆಯಲ್ಲಿ ಕ್ರಮಿಸಬಹುದು.

ಮಾರ್ಗ 3: ಸುಳ್ಯ- ಆಲೆಟ್ಟಿ- ಪಾಣತ್ತೂರು- ಕರಿಕೆ- ಭಾಗಮಂಡಲ- ಮಡಿಕೇರಿ ರಸ್ತೆ
ಸದ್ಯಕ್ಕೆ ಸುಳ್ಯ ಮತ್ತು ಕೊಡಗನ್ನು ಸಂಪರ್ಕಿಸಲು ಇರುವ ಏಕೈಕ ಮಾರ್ಗ. ಆಲೆಟ್ಟಿ ಪಾಣತ್ತೂರು ರಸ್ತೆಯ ಮೂಲಕ ಮಡಿಕೇರಿಗೆ ಪ್ರಯಾಣಿಸಬೇಕಾದರೆ ನೂರೈವತ್ತು ಕಿಲೋ ಮೀಟರ್ ಗಳಿಗೂ ಹೆಚ್ಚು ದೂರ ಪ್ರಯಾಣ ಮಾಡಬೇಕಾಗುತ್ತದೆ. ಲಘು ವಾಹನಗಳು ಮಾತ್ರ ಓಡಬಹುದಾಗಿರುವ ಈ ರಸ್ತೆಯಲ್ಲಿ ಘನ ವಾಹನಗಳ ಓಡಾಟ ಕಷ್ಟ.

sampaje ght 3

ಆಗುತ್ತಾ ರಸ್ತೆ?
ಸದ್ಯಕ್ಕೆ ಚಾರ್ಮಾಡಿ ಘಾಟಿಯೊಂದೇ ಕರಾವಳಿಯಿಂದ ಬೆಂಗಳೂರಿಗೆ ತೆರಳುವ ಸುಲಭದ ಮಾರ್ಗವಾಗಿದೆ. ಒಂದು ವೇಳೆ ಗುಡ್ಡ ಜರಿದರೆ ಅಥವಾ ವಾಹನಗಳು ಪಲ್ಟಿಯಾದರೆ ರಸ್ತೆ ಸಂಪರ್ಕ ಕಡಿದುಕೊಳ್ಳುತ್ತದೆ. ಈಗಾಗಲೇ ವಾಹನಗಳು ಸಂಚರಿಸಲು ಹರಸಾಹಸ ಪಡುತಿದ್ದು, ಈ ರಸ್ತೆಯೂ ಬಂದ್ ಆದರೆ ಜನರ ಬದುಕು ದುಸ್ತರವಾಗಲಿದೆ. ಹೀಗಾಗಿ ಸರ್ಕಾರ ಪರ್ಯಾಯ ಮಾರ್ಗವನ್ನು ಅಭಿವೃದ್ಧಿ ಪಡಿಸಿದರೆ ಮುಂದೆ ಅಗಲಿರುವ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿದಂತೆ ಆಗುತ್ತದೆ. ಅನಿವಾರ್ಯತೆ ಇರುವ ಕಾರಣ ಜನ ಪ್ರತಿನಿಧಿಗಳು ಮನಸ್ಸು ಮಾಡಿ ಈ ರಸ್ತೆ ನಿರ್ಮಾಣವಾಗಬಹುದು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:BangaloreKodaguKodagu neighborsmadikeriMadikeri GhatiPublic TVSampageSulyaಕೊಡಗುಕೊಡಗು ನೆರೆಪಬ್ಲಿಕ್ ಟಿವಿಬೆಂಗಳೂರುಮಡಿಕೇರಿಮಡಿಕೇರಿ ಘಾಟಿಸಂಪಾಜೆಸುಳ್ಯ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
5 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
5 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
5 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
5 hours ago
01 5
Big Bulletin

ಬಿಗ್‌ ಬುಲೆಟಿನ್‌ 06 April 2026 ಭಾಗ-1

Public TV
By Public TV
6 hours ago
02 5
Big Bulletin

ಬಿಗ್‌ ಬುಲೆಟಿನ್‌ 06 April 2026 ಭಾಗ-2

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?