ಸಂಚಾರಿ ವಿಜಯ್ ಹೆಸರಿನಲ್ಲಿ ರಕ್ತದಾನ ಮಾಡಿದ ಸ್ನೇಹಿತರು

Public TV
1 Min Read
ಸಂಚಾರಿ ವಿಜಯ್

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಹುಟ್ಟುಹಬ್ಬದ ನೆನಪಿಗೆ ವಿಜಯ್ ಅವರ ಗೆಳೆಯರ ಬಳಗ ಇಂದು ಬೆಂಗಳೂರಿನ ನಾಗರಭಾವಿ ಬಿ.ಡಿಎ ಕಾಂಪ್ಲೆಕ್ಸ್ ಬಳಿ ರಕ್ತದಾನ ಶಿಬಿರ ಆಯೋಜನೆ ಮಾಡಿದ್ದರು. ವಿಜಯ್‌ ಹುಟ್ಟುಹಬ್ಬದ ಸಂದರ್ಭದಲ್ಲಿ ವಿಜಯ್‌ ಸ್ನೇಹಿತರು ವಿಶೇಷ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ.

sanchari vijay 3ಸ್ವಾಮಿ ವಿವೇಕಾನಂದ ಸ್ವಯಂಪ್ರೇರಿತ ರಕ್ತ ನಿಧಿ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಐವತ್ತಕ್ಕೂ ಹೆಚ್ಚು ಗೆಳೆಯರು ಮತ್ತು ವಿಜಯ್ ಆತ್ಮಿಯರು ರಕ್ತದಾನ ಮಾಡಿದ್ದಾರೆ.ಸಮಾಜಮುಖಿ ಕೆಲಸಗಳಲ್ಲಿ ಸಂಚಾರಿ ವಿಜಯ್ ಯಾವತ್ತಿಗೂ ತೊಡಗಿಕೊಳ್ಳುತ್ತಿದ್ದರು. ಇದನ್ನೂ ಓದಿ:Exclusive-ಪುನೀತ್ ನಟನೆಯ ‘ಗಂಧದ ಗುಡಿ’ ಡಾಕ್ಯುಮೆಂಟರಿ ಅಲ್ಲ, ಸಿನಿಮಾ : ನಿರ್ದೇಶಕ ಅಮೋಘ ವರ್ಷ

sanchari vijayಕೋವಿಡ್ ಸಮಯದಲ್ಲಿ ಆಹಾರ ಕಿಟ್ ವಿತರಣೆ, ಅಸಕ್ತ ಕಲಾವಿದರಿಗೆ ಸಹಾಯ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸಹಾಯ ಸಹಕಾರವನ್ನು ವಿಜಯ್ ಮಾಡುತ್ತಿದ್ದರು. ಹಾಗಾಗಿ ಅವರ ಹುಟ್ಟು ಹಬ್ಬದ ದಿನಕ್ಕೆ ಇಂತಹ ಕೆಲಸಕ್ಕೆ ಮುಂದಾಗಿದ್ದೇವೆ ಅಂತಾರೆ ವಿಜಯ್ ಸ್ನೇಹಿತ ಅನಿಲ್ ಗೌಡ.ಇದನ್ನೂ ಓದಿ:ಮೊದಲ ಬಾರಿಗೆ ರೀಲ್ಸ್ ಮಾಡಿ, ಮಿಂಚಿದ ಗೋಲ್ಡನ್ ಕ್ವೀನ್ ಅಮೂಲ್ಯ

sanchari vijay 1

ವಿಜಯ್ ಅವರ ಹುಟ್ಟು ಹಬ್ಬದ ದಿನದಂದು ಇವತ್ತು ಅನೇಕ ಕಾರ‍್ಯಕ್ರಮಗಳನ್ನು ಆಯೋಜನೆ ಮಾಡಿದ್ದು ಅವರ ಹುಟ್ಟೂರಿನಲ್ಲಿ ಅವರ ಶಾಲೆಗೆ ಸುಣ್ಣಬಣ್ಣ ಬಳಿಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಚಾರಿ ಥಿಯೇಟರ್ ಕಡೆಯಿಂದ ನಾಟಕೋತ್ಸವ ಆಯೋಜನೆ ಮಾಡಲಾಗಿದೆ. ಅಲ್ಲದೇ ವಿಜಯ್ ಸಮಾಧಿ ಇರುವ ಪಂಚನಹಳ್ಳಿಯಲ್ಲೂ ಹಲವು ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *