ಮಂಗಳೂರು: ಕಾಂಗ್ರೆಸ್ ನಾಯಕ ಯು.ಟಿ ಖಾದರ್ ಪ್ರಭಾವ ಬಳಸಿ ಸ್ಥಳೀಯ ಕಾಂಗ್ರೆಸ್ ಮುಖಂಡನೊಬ್ಬ ಅಕ್ರಮ ಮರಳುಗಾರಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಈ ಅಕ್ರಮ ನಡೆಯುತ್ತಿದ್ದು, ಸ್ಥಳೀಯ ಕಾಂಗ್ರೆಸ್ ಮುಖಂಡ ಮಹೇಶ್ ಆಚಾರಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
- Advertisement 2
- Advertisement 3
ಮರಳುಗಾರಿಕೆ ನಡೆಯುತ್ತಿರುವ ಸ್ಥಳದ ಪಕ್ಕದಲ್ಲೇ ಎಚ್ಪಿ ಗ್ಯಾಸ್ ಲೈನ್ ಹಾದು ಹೋಗಿದ್ದು, ಮರಳುಗಾರಿಕೆಯಿಂದ ಗ್ಯಾಸ್ ಲೈನ್ಗೆ ತೊಂದರೆಯಾಗಿರೋ ಆತಂಕ ಸ್ಥಳೀಯರಲ್ಲಿ ಕಾಡುತ್ತಿದೆ. ಧರ್ಮಸ್ಥಳ ಗ್ರಾಮ ಪಂಚಾಯತ್ ಪಿಡಿಓ ಉಮೇಶ್ ರನ್ನು ಕಾಂಗ್ರೆಸ್ ಮುಖಂಡರು ತಮ್ಮ ಕೈಗೊಂಬೆಯನ್ನಾಗಿ ಮಾಡಿದ್ದು, ಅಧಿಕಾರಿಗಳ ಸಮ್ಮುಖದಲ್ಲೇ ಅಕ್ರಮ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
- Advertisement 4
ಸುಮಾರು 20 ಎಕರೆ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಪ್ರಶ್ನೆ ಎತ್ತಿದವರಿಗೆ ಜೀವಬೆದರಿಕೆ ಒಡ್ಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಆಪ್ತರ ಈ ಅಕ್ರಮ ನದಿಗೆ ಮಾರಕವಾಗಿದ್ದು, ಅಕ್ರಮಗಳನ್ನು ತಡೆಯಬೇಕಾದ ಅಧಿಕಾರಿಗಳೇ ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.