ಹಟ್ಟಿ ಚಿನ್ನದಗಣಿಯಲ್ಲಿ ಶ್ರೀಗಂಧದ ಮರ ಕಳ್ಳತನ

Public TV
1 Min Read
SANADL TREE

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಕಂಪನಿ ಆವರಣದಲ್ಲಿನ ಶ್ರೀಗಂಧದ ಮರವನ್ನು ರಾತ್ರೋರಾತ್ರಿ ಕಳ್ಳರು ಕಡಿದು ಕದ್ದೊಯ್ದಿದ್ದಾರೆ.

SANADAL TREE

ಕಂಪನಿಯ ವಿಲ್ಹೇಜ್ ಶಾಪ್‌ನೊಳಗೆ ನುಗ್ಗಿ ಮರವನ್ನು ಕಡಿದು ಕಳ್ಳತನ ಮಾಡಿದ್ದಾರೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಬೆಳಗಿನ ಜಾವ ಬೆಳಕಿಗೆ ಬಂದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಮರ ಕಳ್ಳತನವಾಗಿದೆ. ಇದನ್ನೂ ಓದಿ: ಶಿವ, ಪಾರ್ವತಿ ವೇಷ ಧರಿಸಿ ಹಣದುಬ್ಬರದ ಬಗ್ಗೆ ನಾಟಕ- ಶಿವ ವೇಷಧಾರಿಯ ಬಂಧನ

ಚಿನ್ನದಗಣಿ ಆವರಣದಲ್ಲಿ ಪದೇ ಪದೇ ಗಂಧದ ಮರಗಳ ಕಳ್ಳತನ ನಡೆಯುತ್ತಲೇ ಇದೆ. ಇಲ್ಲಿನ ಸಿಬ್ಬಂದಿ ಕ್ವಾಟ್ರಸ್‍ಗಳಲ್ಲಿ ಈಗಾಗಲೇ ನೂರಾರು ಮರಗಳು ಮಾಯವಾಗಿವೆ. ಅರಣ್ಯ ಇಲಾಖೆ ಹಾಗೂ ಕಂಪನಿ ಭದ್ರತಾ ಸಿಬ್ಬಂದಿ ವೈಫಲ್ಯವೇ ಮರಗಳ ಕಳ್ಳತನಕ್ಕೆ ಕಾರಣ ಎಂದು ಸ್ಥಳೀಯರು ಆರೋಪ ಹೊರಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *