ಸರಿಯಾದ ಹುಲಿ ಬಂದ್ರೆ ‘ಹೆಬ್ಬುಲಿ’ ಓಡಿ ಹೋಗ್ತಾರೆ – ವಿನಯ್ ಗುರೂಜಿ ವಿರುದ್ಧ ಸುದೀಪ್ ಅಭಿಮಾನಿಗಳು ಗರಂ

Public TV
1 Min Read
GURUJI SUDEEP

ಬೆಂಗಳೂರು: ಒಂದಿಲ್ಲೊಂದು ವಿಡಿಯೋ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುವ ಅವಧೂತ ವಿನಯ್ ಗುರೂಜಿ ಇದೀಗ ಸ್ಯಾಂಡಲ್‍ವುಡ್ ನಟರೊಬ್ಬರನ್ನು ಅಪಹಾಸ್ಯ ಮಾಡಿದ್ದಾರೆ.

ಹೌದು. ಚಿಕ್ಕಮಗಳೂರು ಮೂಲದ ವಿಜಯ್ ಗುರೂಜಿ ಈ ಬಾರಿ ಸ್ಯಾಂಡಲ್‍ವುಡ್‍ನ ಕಿಚ್ಚ ಸುದೀಪ್ ಅವರನ್ನು ಅಪಹಾಸ್ಯ ಮಾಡಿದ್ದಾರೆ. ಈ ಮೂಲಕ ಕಿಚ್ಚನ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

vinay

ಗುರೂಜಿ ಹೇಳಿದ್ದೇನು..?
ಸುದೀಪ್ ಸಿನಿಮಾ ನೋಡಿ ರೋಮ ಎಲ್ಲ ಎದ್ದು ನಿಲ್ಲುತ್ತೆ ಅಂತ ಹುಡುಗರು ಹೇಳುತ್ತಾರೆ. ಅವನು ಮಾಣಿಕ್ಯ- ಹೆಬ್ಬುಲಿ ಅಂತೆ. ಸರಿಯಾದ ಹುಲಿ ಬಂದ್ರೆ ಓಡಿಹೋಗುತ್ತಾರೆ ಎಂದು ಗುರೂಜಿ ಅಪಹಾಸ್ಯ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಸುದೀಪ್ ಅವರನ್ನು ಅಪಹಾಸ್ಯ ಮಾಡಿದ್ದಕ್ಕೆ ಕಿಚ್ಚ ಫ್ಯಾನ್ಸ್, ಗುರೂಜಿ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

ನಾಗಾರಾಧನೆ ಬಗ್ಗೆ ಅವಹೇಳನ:
ಈ ಹಿಂದೆ ವಿನಯ್ ಗುರೂಜಿ ಕರಾವಳಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿ, ಇನ್ನೊಬ್ಬರಿಗೆ ಅಡ್ಡ ಬೀಳಬೇಕಾದರೆ (ಕಾಲಿಗೆ ಬೀಳಬೇಕಾದರೆ) ಯಾಕೆ ಬೀಳಬೇಕು? ಅವನು ಏನು? ನಾನು ಏನು? ಎಂದು ಯೋಚನೆ ಮಾಡಿ. ಪೂಜೆ ಎಂದರೆ ಏನು? ಏಕೆ ಪೂಜೆ ಮಾಡಬೇಕು? ಅದರಿಂದ ಏನಾಗುತ್ತದೆ ಎಂದು ತಿಳಿದುಕೊಂಡು ಪೂಜೆ ಮಾಡಿ. ನಾಗಮಂಡಲಕ್ಕಾಗಿ ಕೆಲವರು 2- 3 ಕೋಟಿ ರೂ. ಖರ್ಚು ಮಾಡುತ್ತಾರೆ. ನಾಗಮಂಡಲಕ್ಕೆ ಮಾಡುವ ಕೋಟಿ ಕೋಟಿ ಖರ್ಚಿನಲ್ಲಿ ಒಳ್ಳೆಯ ರಸ್ತೆ ಮಾಡಬಹುದು ಎಂದು ಹೇಳಿದ್ದರು. ಹೀಗೆ ನಾಗಾರಾಧನೆ ಮತ್ತು ಭೂತಾರಾಧನೆಯನ್ನು ಅವಹೇಳನಗೈದಿರುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

vinaya

ಅಲ್ಲದೆ ತುಳುನಾಡಿನ ಭೂತಗಳು ಬ್ರಾಹ್ಮಣರ ಮನೆಯಲ್ಲಿ ಇಡ್ಲಿ ಸಾಂಬಾರ್ ಸ್ವೀಕರಿಸಿದರೆ, ಶೆಟ್ರ ಮನೆಯಲ್ಲಿ ಕೋಳಿ ಸ್ವೀಕಾರ ಮಾಡುತ್ತದೆ. ಇದೇನು ಭೂತಗಳಲ್ಲೂ ವೈರುಧ್ಯ, ತಾರತಮ್ಯ ಇದೆಯೇ? ದೇವರಿರುವುದು ನಮ್ಮಲ್ಲಿ ಶ್ರದ್ಧೆ ತರಿಸಲು ಹೊರತು ಅಂಧ ವಿಶ್ವಾಸಗಳಿಗಲ್ಲ ಎಂದು ವ್ಯಂಗ್ಯವಾಡಿದ್ದರು. ವಿನಯ್ ಗುರೂಜಿಯ ಈ ಮಾತುಗಳ ಬಗ್ಗೆ ಕರಾವಳಿಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *