ಬೆಂಗಳೂರು: ಇಂದು ತಮ್ಮ 43ನೇ ವರ್ಷದ ಹುಟ್ಟುಹಬ್ಬದ ಸಂಭ್ರದಲ್ಲಿರೋ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಮ್ಮನನ್ನು ನೆನೆದು ಭಾವುಕರಾಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಮ್ಮ ಪಾರ್ವತಮ್ಮ ಅವರನನ್ನು ನೆನೆದು ಬೇಸರ ವ್ಯಕ್ತಪಡಿಸಿದ್ರು. ಅಭಿಮಾನಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ತಿರೋದಕ್ಕೆ ಖುಷಿಯಾಗ್ತಿದೆ. ಆದ್ರೆ ಈ ಬಾರಿ ನನ್ನ ಹುಟ್ಟುಹಬ್ಬ ಆಚರಣೆಯಲ್ಲಿ ಅಮ್ಮ ಇಲ್ಲ ಅನ್ನೋದೇ ಬೇಜಾರಿನ ಸಂಗಂತಿಯಾಗಿದೆ ಅಂದ್ರು. ಇದನ್ನೂ ಓದಿ: ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಹ್ಯಾಟ್ರಿಕ್ ಹೀರೋ ವಿಶ್- ಅಪ್ಪು ನಂಗೆ ಮಗ ಇದ್ದಂಗೆ ಅಂದ್ರು ಶಿವಣ್ಣ
ಈ ಬಾರಿ ನನ್ನ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಅದು ಅವರ ಪ್ರೀತಿ, ವಿಶ್ವಾಸ ಹಾಗೂ ಅಭಿಮಾನ. ಆದ್ರೆ ಈ ಬಾರಿ ನಾನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಈ ಎರಡು ದಿನ ನಾನು ಅಭಿಮಾನಿಗಳಿಗೋಸ್ಕರ ಅಂತಾನೇ ಇಟ್ಟಿದ್ದೇನೆ. ಈ ಬಾರಿ ಅಮ್ಮನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಕಳೆದ ವರ್ಷ ಇದೇ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಬಾರಿ ಅವರು ನಮ್ಮ ಜೊತೆ ಇಲ್ಲ. ಜೀವನದಲ್ಲಿ ಏನೇ ಸಾಧಿಸಿದ್ರೂ, ಅದಕ್ಕೆ ಅವರೇ ಕಾರಣ. ಹೀಗಾಗಿ ತುಂಬಾ ವಿಚಾರಗಳಲ್ಲಿ ಅಪ್ಪ-ಅಮ್ಮನ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಅಪ್ಪ-ಅಮ್ಮ ನಮ್ಮ ಜೊತೆ ಇಲ್ಲ ಆದ್ರೆ ಅಭಿಮಾನಿಗಳು ಬೇರೆ ಬೇರೆ ಊರುಗಳಿಂದ ಬರುತ್ತಿದ್ದಾರೆ. ಹೀಗಾಗಿ ಅವರನ್ನು ನಿರಾಸೆ ಮಾಡಕ್ಕಾಗಲ್ಲ ಅಂತ ಹೇಳಿದ್ರು.
ರಾಜ್ ಕುಮಾರ್ ಅವರನ್ನು ಯಾರಿಗೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅವರಿಗೆ ಅವರೇ ಸಾಟಿ. ಅವರ ಮಗನಾಗಿರುವುದು ನನ್ನ ಪುಣ್ಯ. ಆ ಪ್ರೀತಿ, ವಿಶ್ವಾಸ, ಅಭಿಮಾನ ನಮ್ಮ ಕುಟುಂಬದಲ್ಲಿ ಎಲ್ಲರೂ ನೋಡುತ್ತಿದ್ದಾರೆ. ಅದಕ್ಕೆ ನಾವು ಅವರಿಗೆ ಯಾವತ್ತೂ ಚಿರಋಣಿ ಅಂದ್ರು.
ಅಭಿಮಾನಿಗಳು ರಾಜರತ್ಸೋತ್ಸವ ಹೆಸರಲ್ಲಿ ಅದ್ಧೂರಿಯಾಗಿಯೇ ನನ್ನ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ. ನಟಸಾರ್ವಭೌಮ ಅಂತ ಸಿನಿಮಾಗೆ ಹೆಸರಿಟ್ಟಿರೋದಕ್ಕೆ ಭಯ ಆಗ್ತಿದೆ. ಯಾಕಂದ್ರೆ ಈ ಹಿಂದೆ ರಾಜಕುಮಾರ ಅಂತ ಸಿನಿಮಾಗೆ ಹೆಸರಿಟ್ಟಾಗಲೂ ಭಯವಾಗಿತ್ತು ಅಂತ ಹೇಳಿದ್ರು. ಇದನ್ನೂ ಓದಿ: ದೊಡ್ಮನೆ ರಾಜಕುಮಾರನಿಗೆ ಹುಟ್ಟು ಹಬ್ಬದ ಸಂಭ್ರಮ- ನಟಸಾರ್ವಭೌಮ ತಂಡದಿಂದ ಫಸ್ಟ್ ಟೀಸರ್ ಗಿಫ್ಟ್
ಇದೇ ವೇಳೆ ತಮ್ಮ ಹೇರ್ ಸ್ಟೈಲ್ ಬಗ್ಗೆ ಮಾತನಾಡಿದ ಅವರು, ಹೇರ್ ಸ್ಟೈಲ್ ಸಿಕ್ಕಾಪಟ್ಟೆ ಟ್ರೆಂಡ್ ಆಗ್ತಿರೋದಕ್ಕೆ ಖುಷಿಯಿದೆ. ಜುಲೈಗೆ ಸಂತೋಷ್ ಆನಂದ್ ರಾಮ್ ನಿರ್ದೇಶನದ ಸಿನಿಮಾ ಅಧಿಕೃತವಾಗಿ ಅನೌನ್ಸ್ ಆಗಲಿದೆ ಅಂತ ತಿಳಿಸಿದ್ರು.