ಸ್ಯಾಂಡಲ್ವುಡ್ ಯುವ ನಟ ಸತೀಶ್ ವಜ್ರ ಅವರನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್ ನಗರದಲ್ಲಿ ನಡೆದಿದೆ. ಇದೀಗ ಆರ್.ಆರ್ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಂದಿಷ್ಟು ಶಾರ್ಟ್ ಮೂವಿಯಲ್ಲಿ ಕೆಲಸ ಮಾಡುತ್ತಾ, ಜೊತೆಗೆ `ಲಗೋರಿ’ ಎಂಬ ಚಿತ್ರದಲ್ಲಿ ನಟನಾಗಿ ಬಣ್ಣಹಚ್ಚಿದ ಸತೀಶ್ ವಜ್ರ, ಅವರ ಮನೆಯಲ್ಲಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಮನೆಯಲ್ಲಿರುವಾಗ ಕೊಲೆ ಮಾಡಿ ಹೋಗಿರುವ ದುಷ್ಕರ್ಮಿಗಳು, ಆರ್.ಆರ್ ನಗರದ ನಿವಾಸದಲ್ಲಿ ನಟನ ಹತ್ಯೆ ಮಾಡಲಾಗಿದೆ. ಇದೀಗ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ:ನಟಿ ಸಾಯಿ ಪಲ್ಲವಿ ಬಂಧಿಸಿ : ಬಿಜೆಪಿ ಶಾಸಕ ರಾಜಾ ಸಿಂಗ್ ಆಗ್ರಹ
ಕೆಲ ತಿಂಗಳ ಹಿಂದಷ್ಟೇ ಓರ್ವ ಯುವತಿಯನ್ನು ಪ್ರೀತಿಸಿ ಸತೀಶ್ ಮದುವೆಯಾಗಿದ್ದರು, ಆದರೆ ಮೂರು ತಿಂಗಳ ಹಿಂದಷ್ಟೇ ಸತೀಶ್ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಅಕ್ಕನಿಗೆ ಸಾವಿಗೆ ಸತೀಶ್ ಕಾರಣ ಎಂದು ಶಂಕಿಸಿ ಬಾಮೈದನಿಂದಲೇ ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗಿದೆ.
Live Tv