Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸರೋಜಾದೇವಿ ಅಗಲಿಕೆಗೆ ಕಂಬನಿ ಮಿಡಿದ ಸ್ಯಾಂಡಲ್‍ವುಡ್ ನಟ, ನಟಿಯರು

Public TV
Last updated: July 14, 2025 5:47 pm
Public TV
Share
4 Min Read
SAROJA DEVI PRAKASHRAJ
SHARE

ಅಗಲಿದ ಖ್ಯಾತ ಸಿನಿಮಾ ನಟಿ ಸರೋಜಾದೇವಿಯವರ (Saroja Devi) ಅಗಲಿಕೆಗೆ ಸ್ಯಾಂಡಲ್‍ವುಡ್ (Saroja Devi) ನಟ ನಟಿಯರು ಸೇರಿದಂತೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಸರೋಜಾದೇವಿಯವರ ಬಗ್ಗೆ ಮಾತಾಡಿರುವ ನಟ ಪ್ರಕಾಶ್ ರೈ (Prakash Raj ) ಭಾರತೀಯ ಚಿತ್ರರಂಗದ ಎಲ್ಲಾ ಭಾಷೆಯ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. 160ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸೋದು ಸಾಮಾನ್ಯವಾದ ಮಾತಲ್ಲ. ಅವರ ಜೊತೆ ನಾನು ನಟಿಸದೇ ಹೋದ್ರು, ಸಾಕಷ್ಟು ಬಾರಿ ಮಾತನಾಡಿದ್ದೆ. ಯಾವಾಗ ಸಿಕ್ಕರು ಆತ್ಮೀಯವಾಗಿ ಮಾತನಾಡುತ್ತಿದ್ದರು. ನನಗೆ ಅವಾರ್ಡ್ ಸಿಕ್ಕಾಗ ಕರೆ ಮಾಡಿ, ಮಾತನಾಡಿದ್ರು. ಗಂಭೀರವಾಗಿ ತುಂಬು ಜೀವನ ನಡೆಸಿದ್ದಾರೆ. ಅದ್ಬುತವಾದ ನಟಿ ಅವರು, ಅವರ ಅಗಲಿಕೆ ಚಿತ್ರರಂಗಕ್ಕೆ ಸಾಕಷ್ಟು ನಷ್ಟ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ. ಇದನ್ನೂ ಓದಿ: ಸರೋಜಾದೇವಿಯವ್ರು ತಲೆಮಾರುಗಳಲ್ಲಿ ಅಳಿಸಲಾಗದ ಗುರುತು ಬಿಟ್ಟು ಹೋಗಿದ್ದಾರೆ: ಮೋದಿ ಸಂತಾಪ

SarojaDEVI VATAL

ಸಂಗೀತ ನಿರ್ದೇಶಕ ಗುರುಕಿರಣ್ (Prakash Raj) ಪ್ರತಿಕ್ರಿಯಿಸಿ, ಕನ್ನಡ, ದಕ್ಷಿಣ ಭಾರತ ಕಂಡ ಅತ್ಯುತ್ತಮ ನಟಿ ಸರೋಜಾದೇವಿಯವರು. ಅಂತಹ ಸ್ಟಾರ್ ಇನ್ನೂ ಸಿಗಲ್ಲ. ದಕ್ಷಿಣ ಭಾರತ ಆಳಿದವರು. ಹೀರೋಗಳು ಕೂಡ ಇವರ ಡೇಟ್‍ಗಾಗಿ ಕಾಯುತ್ತಿದ್ದರು. ಅವರ ಅಗಲುವಿಕೆ ತುಂಬಲಾರದ ನಷ್ಟ ಎಂದಿದ್ದಾರೆ.

ಹಿರಿಯ ನಟ ಶ್ರೀನಿವಾಸ ಮೂರ್ತಿಯವರು ಮಾತನಾಡಿ, ಸರೋಜಾದೇವಿಯವರ ಅಗಲುವಿಕೆ ಕನ್ನಡ ಚಿತ್ರರಂಗ ಮಾತ್ರ ಅಲ್ಲ, ಭಾರತೀಯ ಚಿತ್ರರಂಗಕ್ಕೆ ದುಃಖದ ವಿಚಾರ. ಪಂಚಭಾಷೆ ತಾರೆ ಅಂತ ಹೆಸರು ಪಡೆದವರು. ಎಲ್ಲಾರ ಜೊತೆ ನಟಿಸಿದ್ದವರು. ಹೀರೋಗೆ ಕೊಟ್ಟಷ್ಟೇ ಪ್ರಾಮುಖ್ಯತೆ ಇವರಿಗೂ ಇತ್ತು. ನನ್ನ ಪುಣ್ಯ, ಅವರ ಜೊತೆ ಗಂಡನ ಪಾತ್ರ ಮಾಡಿದ್ದೆ. ಒಂದೂವರೆ ತಿಂಗಳ ಹಿಂದೆ ಮಾತನಾಡಿದ್ದೆ. ಈ ವೇಳೆ, ಅವರ ದಿನಚರಿ ಬಗ್ಗೆಯೂ ಹೇಳಿಕೊಂಡಿದ್ದರು. ಪೂಜೆ, ಸಿನಿಮಾ ನೋಡೋದು. ಕಲಾವಿದರಿಗೆ ಪ್ರೋತ್ಸಾಹ ಮಾಡುತ್ತಿದ್ದರು. ಕನ್ನಡದಷ್ಟೇ ಒಳ್ಳೇಯ ಪಾತ್ರಗಳನ್ನ ಬೇರೆ ಭಾಷೆಯಲ್ಲಿ ಮಾಡಿ ಸಾಧನೆ ಮಾಡಿದ್ದರು. ಹುಟ್ಟಿದ ಮೇಲೆ ಸಾವು ಇರುತ್ತೆ. ಬೆಳಗ್ಗೆ ಪೂಜೆ ಮಾಡಿ ತಿಂಡಿ ಮಾಡಿದ ಕೂಡಲೇ ಸಾವಾಗಿದೆ. ಅವರನ್ನು ಕಳೆದುಕೊಂಡಿದ್ದೇವೆ ದುಃಖವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಹಿರಿಯ ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಪ್ರತಿಕ್ರಿಯಿಸಿ, ಸರೋಜಾದೇವಿಯವರು ಅವರು, ನಮ್ಮ ಕುಟುಂಬಕ್ಕೆ ತುಂಬಾ ಆತ್ಮೀಯವಾಗಿದ್ದರು. ಆಕೆ ಒಬ್ಬ ಮಹಾನ್ ನಟಿ, ಅಚ್ಚಕನ್ನಡ ಮಾತನಾಡುವಂತಹ ಹಿರೋಯಿನ್. ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರವನ್ನು ಅವರಂತೆ ಯಾರು ಮಾಡಲು ಸಾಧ್ಯವಿಲ್ಲ. ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬರಬೇಕು ಅಂತಾ ಪತ್ರ ಬರೆದಿದ್ದೆ. ಪಂಚಭಾಷೆಯಲ್ಲಿ ಅವರು ನಟನೆ ಮಾಡಿದ್ದಾರೆ. ಅವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಎಂದಿದ್ದಾರೆ.

ನಿರ್ಮಾಪಕ ಬಾ.ಮಾ ಹರೀಶ್ ಮಾತನಾಡಿ, ಯಾವುದೇ ಭಾಷೆಯಲ್ಲೂ ಅವರು ನಟನೆ ಮಾಡಿದ್ರೂ ಕನ್ನಡ ಭಾಷೆಗೆ ತುಂಬಾ ಗೌರವ ಕೊಡ್ತಿದ್ರು. ಈ ಹನ್ನೊಂದನೇ ಕ್ರಾಸ್‍ಗೆ ಬಿ ಸರೋಜಾ ದೇವಿ ಹೆಸ್ರು ಇಡಬೇಕು ಅಂತಾ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ವಿ. ಅವರ ನಿಧನದ ನಂತರ ಹೆಸ್ರು ಇಡೋದಾಗಿ ಅಧಿಕಾರಿಗಳು ಹೇಳಿದ್ರು. ಈಗಿನ ಸರ್ಕಾರ ಈ ರಸ್ತೆಗೆ ಅವರ ಹೆಸರು ಇಡಬೇಕು ಎಂದು ಮನವಿ ಮಾಡ್ತೀನಿ ಎಂದಿದ್ದಾರೆ.

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿ, ಸರೋಜಾ ದೇವಿಯವರು ಕರ್ನಾಟಕದವರು, ಕನ್ನಡಿಗರು, ಕನ್ನಡ ಚಿತ್ರಕ್ಕಿಂತ ಹೆಚ್ಚಾಗಿ ತಮಿಳು ಚಿತ್ರಗಳಲ್ಲಿ ಭಾರಿ ಪಾತ್ರ ಮಾಡಿದ್ದಾರೆ. ಚಿತ್ರರಂಗಕ್ಕೆ ಬರುವ ಮುನ್ನ ರಾಜ್ಯ ಕಂಡತಂಹ ಸಂಗೀತಗಾರ ಹೊನ್ನಪ್ಪ ಭಾಗವತರ್ ಬಳಿ ಸಂಗೀತ ಕಲಿತಿದ್ದರು. ಹೊನ್ನಪ್ಪ ಭಾಗವತರ್ ಅವರನ್ನು ಸಿನಿಮಾಕ್ಕೆ ಕರೆದುಕೊಂಡು ಬಂದರು. ತಮಿಳಿನಲ್ಲಿ ಎಂ.ಜಿ ರಾಮಚಂದ್ರನ್ ಜೊತೆ ಸಾಕಷ್ಟು ಸಿನಿಮಾ ಮಾಡಿದ್ದಾರೆ. ಇವರು ತಮಿಳುನಾಡಿನ ಮುಖ್ಯಮಂತ್ರಿ ಆಗಬೇಕಿತ್ತು. ಅಷ್ಟೋತ್ತಿಗೆ ಜಯಲಲಿತಾ ಬಂದ್ರು. ಇವರ ನಿಧನದಿಂದ ನಮ್ಮ ನಾಡಿಗೆ ಅಪಾರವಾದ ನೋವಾಗಿದೆ. ಸುಮಾರು 3 ವರ್ಷದ ಹಿಂದೆ ನನ್ನ ಜೊತೆ ಮಾತನಾಡಿದ್ದರು ಎಂದು ಹೇಳಿಕೊಂಡಿದ್ದಾರೆ.

ನಟಿ ಹರ್ಷಿಕಾ ಪೂಣಚ್ಚ ಮಾತನಾಡಿ, ಸರೋಜ ದೇವಿಯವರು ಸಿನಿಮಾ ಲೆಜೇಂಡ್. ಅವರ ಜೊತೆ ಹಲವು ಕಾರ್ಯಕ್ರಮದಲ್ಲಿ ಹೆಜ್ಜೆ ಹಾಕಿದ್ದೇನೆ. ಅವರನ್ನ ಈಗ ಮುಟ್ಟಿದಾಗಲೂ ಮೈ ರೋಮಾಂಚನ ಆಯ್ತು. ಇವರಿಗೆಲ್ಲ ಸಾವು ಬರಬಾರದು ಅಂತ ಅನ್ನಿಸುತ್ತೆ. ನಾವೆಲ್ಲ ಸಿನಿಮಾ ರಂಗಕ್ಕೆ ಬರಲು ಇವರೇ ಸ್ಫೂರ್ತಿ. ರಾಣಿ ಹಾಗೇ ಬದುಕಿ ಸಿನಿಮಾ ಮಾಡಿ ಬಿಟ್ಟು ಹೋಗಿದ್ದೀರಾ. ಜಯಮಾಲರ ಮಗಳ ಮದುವೆಯಲ್ಲಿ ಭೇಟಿಯಾಗಿದ್ದೆವು. ಈಗಲೂ ಅವರು ಹಂಸ ನಡಿಗೆಯಲ್ಲೇ ನಡೆಯುತ್ತಿದ್ದರು ಎಂದು ಹೇಳಿದ್ದಾರೆ.

ನಟಿ ಅನುಪ್ರಭಾಕರ್ ಮಾತನಾಡಿ, ಚಿತ್ರರಂಗ ಹಿರಿಯರನ್ನ ಕಳೆದುಕೊಳ್ಳುತ್ತಿದೆ ಅನ್ನೋದು ಬೇಸರದ ವಿಷಯ. ಅವರು ಬಹಳ ಸ್ಟ್ರಾಂಗ್ ಲೇಡಿ. ಇತ್ತೀಚೆಗೆ ಅವರನ್ನು ಭೇಟಿಯಾಗೋಕೆ ಆಗಿರಲಿಲ್ಲ. ಅವರು ಕನ್ನಡಿಗರಷ್ಟೇ ಅಲ್ಲ ಭಾರತೀಯ ಕಲಾವಿದರಿಗೆ ಮಾದರಿ. ನಮ್ಮ ಕನ್ನಡಿಗರಿಗೆ ಕಿತ್ತೂರು ರಾಣಿ ಚೆನ್ನಮ್ಮ ಅಂದ್ರೆ ಸರೋಜಮ್ಮ ಎಂದಿದ್ದಾರೆ.

ಉದ್ಯಮಿ ಹಾಗೂ ಮಾಜಿ ಶಾಸಕ ಅಶೋಕ್ ಖೇಣಿ ಮಾತನಾಡಿ, ಸರೋಜದೇವಿ ಮತ್ತು ನಮ್ಮ ತಾಯಿಯ ಸ್ನೇಹಿತರು. ಅವರ ಅಗಲುವಿಕೆ ಬಹಳ ದೊಡ್ಡ ನಷ್ಟ. ನಮ್ಮ ತಾಯಿ ಕೂಡ ಸ್ವರ್ಗದಲ್ಲಿದ್ದಾರೆ. ಮತ್ತೆ ಅವರೆಲ್ಲ ಅಲ್ಲಿ ಒಟ್ಟಿಗೆ ಸೇರುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿನಿಮಾದ ಸುವರ್ಣ ಯುಗವೊಂದು ಅಂತ್ಯವಾಗಿದೆ – ಸರೋಜಾದೇವಿ ನಿಧನಕ್ಕೆ ಕಂಬನಿ ಮಿಡಿದ ರಜನಿಕಾಂತ್‌, ಖುಷ್ಬು

TAGGED:Guru KiranPrakash RaisandalwoodSaroja Devi
Share This Article
Facebook Whatsapp Whatsapp Telegram

Cinema Updates

The girl Friend
ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಸಾಂಗ್ ರಿಲೀಸ್
Cinema Latest Top Stories
Actor Darshan At Bengaluru Airpor
ಏರ್‌ಪೋರ್ಟ್‌ನಲ್ಲಿ ದರ್ಶನ್ ಫೋಟೋ ರಿವೀಲ್
Bengaluru City Cinema Latest Sandalwood Top Stories
Yogaraj Bhat Jayant Kaikini
ಯೋಗರಾಜ್ ಭಟ್ ಗೀತ ಗುಚ್ಛಕ್ಕೆ ಕಾಯ್ಕಿಣಿ ಸಾಥ್
Bengaluru City Cinema Latest Sandalwood
31 Days
ಜಾಲಿಡೇಸ್ ಹುಡುಗನ ಚಿತ್ರಕ್ಕೆ ಮನೋಹರ್ ಸಂಗೀತ : ಇದು 150ನೇ ಸಿನಿಮಾ
Cinema Latest Sandalwood Top Stories
K Manju and Style Shrinu
ಸದ್ಯದಲ್ಲೇ ಕೆ.ಮಂಜು ಮತ್ತು ಸ್ಮೈಲ್ ಶ್ರೀನು ಕಾಂಬಿನೇಶನ್ ಚಿತ್ರ
Cinema Latest Sandalwood Top Stories

You Might Also Like

Ranya Rao
Bengaluru City

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ನಟಿಗೆ ಒಂದು ವರ್ಷ ಜೈಲೇ ಗತಿ!

Public TV
By Public TV
15 minutes ago
Sunil Kumar 2
Bengaluru City

ತೆಲಂಗಾಣ ಮಾಡೆಲ್ ಜಾತಿ ಜನಗಣತಿಗೆ ಕಾಂಗ್ರೆಸ್ ಮಣೆ- ಸಿದ್ದರಾಮಯ್ಯ ವರದಿ ಕಸದ ಬುಟ್ಟಿಗೆ: ಶಾಸಕ ಸುನಿಲ್ ಕುಮಾರ್ ವ್ಯಂಗ್ಯ

Public TV
By Public TV
38 minutes ago
Prahlad Joshi
Dharwad

RE ಸಂಶೋಧನೆ, ನಾವೀನ್ಯತೆ; 1.27 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಅಸ್ತು: ಪ್ರಹ್ಲಾದ್ ಜೋಶಿ

Public TV
By Public TV
45 minutes ago
Siddaramaiah 6
Bengaluru City

50% ಒಟ್ಟಾರೆ ಮೀಸಲಾತಿ ಮಿತಿ ತೆಗೆದು, 75%ಗೆ ಹೆಚ್ಚಿಸಬೇಕು: ಸಿದ್ದರಾಮಯ್ಯ ಪ್ರಸ್ತಾಪ

Public TV
By Public TV
47 minutes ago
Gadag Love Jihad
Districts

ಗದಗ | ವಿಚಿತ್ರ ಲವ್‌ಜಿಹಾದ್ ಪ್ರಕರಣ – ಬಲವಂತವಾಗಿ ಹಿಂದೂ ಯುವಕನ ಮತಾಂತರ ಮಾಡಿಸಿರೋ ಆರೋಪ

Public TV
By Public TV
48 minutes ago
Basavaraj Horatti
Bengaluru City

ಆ.4 ರಿಂದ ಅಮೆರಿಕದಲ್ಲಿ ಶಾಸಕಾಂಗ ಶೃಂಗಸಭೆ – ಸಭಾಪತಿ ಹೊರಟ್ಟಿ ನೇತೃತ್ವದಲ್ಲಿ MLCಗಳ ನಿಯೋಗ ಭಾಗಿ

Public TV
By Public TV
55 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?