ಕೊಲ್ಲೂರು ಮೂಕಾಂಬಿಕೆಯಲ್ಲಿ ವರ ಬೇಡಿಕೊಂಡ ರಚಿತಾ ರಾಮ್

Public TV
1 Min Read
UDP Rachita ram

ಉಡುಪಿ: ಸ್ಯಾಂಡಲ್‍ವುಡ್ ನಟಿ ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ಮುಂದೆ ನಿಂತು ವರವೊಂದನ್ನು ಬೇಡಿಕೊಂಡಿದ್ದಾರಂತೆ.

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಬಳಿಕ ರಚಿತಾ ರಾಮ್ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದರು. ಮೂಕಾಂಬಿಕೆಗೆ ವಿಶೇಷ ಸೇವೆ ಸಲ್ಲಿಸಿದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ರಚಿತಾ ರಾಮ್ ಅವರಿಗೆ ಫಲ ಪ್ರಸಾದಗಳನ್ನು ನೀಡಿ ಗೌರವ ಸಲ್ಲಿಸಿತು.

UDP Rachita ram A

ರಚಿತಾ ರಾಮ್ ಅವರು ಗರ್ಭಗುಡಿಯ ಮುಂದೆ ದೇವಿಯಲ್ಲಿ ಕೆಲಕಾಲ ನಿಂತು ಬೇಡಿಕೊಂಡಿದ್ದಾರಂತೆ. ಅದೇನು ಬೇಡಿಕೆ ಅಂತ ಅರ್ಚಕರಲ್ಲೂ ಹೇಳದ ರಚಿತಾ, ನನ್ನ ಮನಸ್ಸಿನ ಇಚ್ಛೆ ಪೂರೈಸಮ್ಮಾ ಕೊಲ್ಲೂರಮ್ಮಾ ಅಂತ ಕೋರಿಕೊಂಡಿದ್ದಾರೆ. ನಿಮ್ಮ ಆಕಾಂಕ್ಷೆ ಈಡೇರಲಿ ಎಂದು ಕೊಲ್ಲೂರಿನ ಅರ್ಚಕರು ಪ್ರಸಾದ ಕೊಟ್ಟಿದ್ದಾರೆ. ಇದನ್ನೂ ಓದಿ: ಟಿ ರಚಿತಾ ರಾಮ್ ಶೃಂಗೇರಿಗೆ ಭೇಟಿ

Share This Article
Leave a Comment

Leave a Reply

Your email address will not be published. Required fields are marked *