ಬೆಂಗಳೂರು: ನಿರ್ಮಾಪಕ ಭಾ.ಮಾ.ಹರೀಶ್ (Ba.Ma.Harish) ಅವರ ಪುತ್ರ ಉಲ್ಲಾಸ್ಗೌಡ (Ullas Gowda) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾ.ಮಾ.ಹರೀಶ್ ಪುತ್ರ ಉಲ್ಲಾಸ್ಗೌಡ ಅವರು ಶಿವಮೊಗ್ಗದ ಕೊಡಚಾದ್ರಿಗೆ ಟ್ರೆಕ್ಕಿಂಗ್ಗೆ ಹೋಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ನಟಿ ಕೃಷಿ ತಾಪಂಡ ಜೊತೆ ನನ್ನ ಪತಿಗೆ ಸಂಬಂಧ ಇತ್ತು – ವೈಶಾಕ್ ಪತ್ನಿ ಮೇಘನಾ ಕೊಟ್ಟ ದೂರಿನಲ್ಲೇನಿದೆ?
ಉಲ್ಲಾಸ್ಗೌಡ ಅವರಿಗೆ ಮದುವೆ ನಿಶ್ಚಯವಾಗಿತ್ತು. ದೀಪ ಶಾಸ್ತ್ರ ಕೂಡ ನಡೆದಿತ್ತು. ಇದೇ ಆಗಸ್ಟ್ನಲ್ಲಿ ನಿಶ್ಚಿತಾರ್ಥ ಆಗಬೇಕಿತ್ತು. ಡಿಸೆಂಬರ್ನಲ್ಲಿ ಮದುವೆ ನಿಶ್ಚಯವಾಗಿತ್ತು. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.
ಉಲ್ಲಾಸ ಕೂಡ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ನಿರ್ಮಲಾ ಹೆಸರಿನ ಮಕ್ಕಳ ಚಿತ್ರದ ಮೂಲಕ ಸಿನಿಮಾ ರಂಗಪ್ರವೇಶ ಮಾಡಿದ್ದರು. ಉಲ್ಲಾಸ್ ಕ್ಲಾಸ್ ಆಫ್ ಸಿನಿಮಾಸ್ ಹೆಸರಿನ ಸಂಸ್ಥೆಯನ್ನು ಹುಟ್ಟುಹಾಕಿ, ಸಿನಿಮಾ ಸಂಬಂಧಿ ತರಬೇತಿ ನೀಡುತ್ತಿದ್ದರು.
ಬೆಂಗಳೂರಿನ ವಿಜಯನಗರದ ಭಾ.ಮಾ.ಹರೀಶ್ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಉಲ್ಲಾಸ್ ತಂದೆ, ತಾಯಿ, ತಂಗಿ ಮನೆಯಲ್ಲಿದ್ದಾರೆ. ಸದ್ಯ ಮೃತದೇಹ ಶಿವಮೊಗ್ಗ ಸಮೀಪದ ಹೊಸನಗರದ ಆಸ್ಪತ್ರೆಯಲ್ಲಿದೆ. ಇದನ್ನೂ ಓದಿ: ‘ಕಾಕ್ಟೇಲ್ 2’ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಮಾಲ್; ಮೊದಲ ವಾರದಲ್ಲೇ 109 ಕೋಟಿ ಕಲೆಕ್ಷನ್

