Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಟ್ಟವ ಕೋಡಂಗಿ ಇಸ್ಕೊಂಡವ ವೀರಭದ್ರ- ದ್ವಾರಕೀಶ್-ನಿರ್ಮಾಪಕರ ಜಗಳಕ್ಕೆ ಜಗ್ಗೇಶ್ ಎಂಟ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊಟ್ಟವ ಕೋಡಂಗಿ ಇಸ್ಕೊಂಡವ ವೀರಭದ್ರ- ದ್ವಾರಕೀಶ್-ನಿರ್ಮಾಪಕರ ಜಗಳಕ್ಕೆ ಜಗ್ಗೇಶ್ ಎಂಟ್ರಿ

Bengaluru City

ಕೊಟ್ಟವ ಕೋಡಂಗಿ ಇಸ್ಕೊಂಡವ ವೀರಭದ್ರ- ದ್ವಾರಕೀಶ್-ನಿರ್ಮಾಪಕರ ಜಗಳಕ್ಕೆ ಜಗ್ಗೇಶ್ ಎಂಟ್ರಿ

Public TV
Last updated: February 2, 2020 8:35 pm
Public TV
Share
3 Min Read
jaggesh 3
SHARE

ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಟ ದ್ವಾರಕೀಶ್ ಹಾಗೂ ನಿರ್ಮಾಪಕ, ಫೈನಾನ್ಶಿಯರ್ ರಮೇಶ್ ಜಗಳಕ್ಕೆ ನವರಸ ನಾಯಕ ಜಗ್ಗೇಶ್ ಎಂಟ್ರಿ ಕೊಟ್ಟಿದ್ದು, ಸರಣಿ ಟ್ವೀಟ್ ಮೂಲಕ ಪರೋಕ್ಷವಾಗಿ  ಅಸಮಾಧಾನ ಹೊರ ಹಾಕಿದ್ದಾರೆ.

ಪಬ್ಲಿಕ್ ಟಿವಿ ಸುದ್ದಿಯನ್ನು ರಿಟ್ವೀಟ್ ಮಾಡಿದ  ನಟ ಜಗ್ಗೇಶ್, ಪರೋಕ್ಷವಾಗಿ ನಟ, ನಿರ್ಮಾಪಕ ದ್ವಾರಕೀಶ್ ವಿರುದ್ಧ ಹರಿಹಾಯ್ದಿದ್ದಾರೆ. ‘ನನ್ನ 1 ಕೋಟಿ ರೂ. ಕೇಳಿದರೂ ಹೀಗೆ ಆಗಬಹುದು. ಕೊಟ್ಟವ ಸ್ನೇಹಿತ, ಬಳಸಿಕೊಂಡವರು ಸ್ನೇಹಿತರು, ಇದು ಹಣದ ವಿಷಯ ಮಾತನಾಡುವುದು ಕಷ್ಟ. ನನಗೆ ಬರಬೇಕಾದ 1 ಕೋಟಿ ರೂ. ಹಣಕ್ಕೆ ಬಾಯಿ ತೆಗೆದರೆ ನನ್ನ ವಿಷಯವು ಹೀಗೆ ಬರುವುದು. ಹಣ ಬೇಕಾದಾಗ ಪ್ರಾಮಾಣಿಕ ವ್ಯವಹಾರಸ್ಥರು. ವಾಪಸ್ ಕೊಡುವಾಗ ಮಾಧ್ಯಮ, ಪೊಲೀಸ್, ಮಾನಹಾನಿ ಎಂಥ ದೌರ್ಭಾಗ್ಯ ವ್ಯವಹಾರ. ಬರುವ ಹಣಕ್ಕಾಗಿ ನಾನು ತಾಳ್ಮೆಯಿಂದ ಕಾಯುತ್ತಿರುವ ಮೂರ್ಖ ಎಂದು ಜಗ್ಗೇಶ್ ಮೊದಲ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸಿನಿಮಾ, ಸಿನಿಮಾ, ಸಿನಿಮಾದಲ್ಲೇ ಸತ್ತಿದ್ದೇನೆ ನಾನು: ದ್ವಾರಕೀಶ್ ಕಣ್ಣೀರು

ಕೊಟ್ಟವ ಸ್ನೇಹಿತ!ಬಳಸಿಕೊಂಡವರು ಸ್ನೇಹಿತರು!
ಇದು ಹಣದ ವಿಷಯ ಮಾತಾಡುವುದು ಕಷ್ಟ!
ನನಗೆ ಬರಬೇಕಾದ್ದ 1ಕೋಟಿ ಹಣಕ್ಕೆ ಬಾಯಿ ತೆಗೆದರೆ ನನ್ನವಿಷಯವು ಹೀಗೆ ಬರುವುದು!
ಹಣ ಬೇಕಾದಾಗ ಪ್ರಾಮಾಣಿಕ ವ್ಯೆವಹಾರಸ್ಥರು!
ವಾಪಸ್ ಕೊಡುವಾಗ ಮಾಧ್ಯಮ ಪೋಲಿಸ್ ಮಾನಹಾನಿ ಎಂಥದೌರ್ಭಾಗ್ಯ
ವ್ಯೆವಹಾರ!
ಬರುವ ಹಣಕ್ಕಾಗಿ ನಾನು ತಾಲ್ಮೆಯಿಂದ
ಕಾಯುತ್ತಿರುವ ಮೂರ್ಕ! https://t.co/KhY1de2th2

— ನವರಸನಾಯಕ ಜಗ್ಗೇಶ್ (@Jaggesh2) February 2, 2020

ಜಗ್ಗೇಶ್ ಎರಡನೇ ಟ್ವೀಟ್‍ನಲ್ಲಿ ಸಹ ದ್ವಾರಕೀಶ್ ಹೆಸರನ್ನು ಉಲ್ಲೇಖಿಸದೇ ಪರೋಕ್ಷವಾಗಿ ಕಿಡಿಕಾರಿದ್ದಾರೆ. ರಮೇಶ್ ಹಾಗೂ ಜಯಣ್ಣ ಗೌರವಸ್ಥ ವ್ಯವಹಾರಿಗಳು. ಕೊಟ್ಟವ ಕೋಡಂಗಿ, ಇಸ್ಕೊಂಡವ ವೀರಭದ್ರ, ಇದು ಗಾಂಧಿನಗರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನಾನೂ ಗಾಂಧಿನಗರದ ವ್ಯವಹಾರದಲ್ಲಿ ಭಾಗಿಯಾಗಿದ್ದೇನೆ. ಗಾಂಧಿನಗರದ ಬಿಲ್ಡಪ್ ರಾತ್ರಿ ನೆನೆದರೂ ನಿದ್ದೆ ಬರುವುದಿಲ್ಲ. ಮಾಧ್ಯಮದಲ್ಲಿ ಎಲ್ಲರೂ ಸ್ಟಾರ್‍ಗಳು, ನಿರ್ಮಾಪಕರು ಮಾತ್ರ ಫುಟ್‍ಪಾತ್. ಇದು ನಿಜ ಗಾಂಧಿನಗರ ದುನಿಯಾ, ನೇರನುಡಿ ನಿಷ್ಟೂರವಾದಿ ವ್ಯಾಖ್ಯಾನ ಎಂದು ಟೀಕಿಸಿದ್ದಾರೆ.

ಕೆಲ ಅಮಾಯಕರಿಗೆ ಸಮುದ್ರದ ಅಲೆ ಗೊತ್ತು. ನನಗೆ ಸಿನಿಮಾ ರಂಗದ ಅಲೆಗಳ ಆಳದಲ್ಲಿರುವ ಅಗೋಚರ ಕ್ರಿಮಿ ಕೀಟಗಳ ಬಗ್ಗೆ ಗೊತ್ತು. ಕಾರಣ ಆ ಮಾಯಾವಿ ಸಮುದ್ರದಲ್ಲಿ 38 ವರ್ಷಗಳ ವಾಸ ಎಂದು ತಮ್ಮ ಮೂರನೇ ಟ್ವೀಟ್‍ನಲ್ಲಿ ಮಾರ್ಮಿಕವಾಗಿ ಬರೆದುಕೊಂಡಿದ್ದಾರೆ.

ರಮೇಶ್ ಹಾಗು ಜಯಣ್ಣ ಗೌರವಸ್ತ ವ್ಯವಹಾರಿಗಳು!
ಕೊಟ್ಟವ ಕೋಡಂಗಿ!ಇಸ್ಕೊಂಡವ ಇರ್ಭಧ್ರ!
ಇದು ಗಾಂಧಿನಗರ!
Even I am fedup with gandhinagar business!
ಗಾಂಧಿನಗರ buildup ರಾತ್ರಿ ನೆನೆದರು ನಿದ್ರೆಬಾರದು ನನಗೆ!
ಎಲ್ಲರು stars In media!producersಮಾತ್ರ footpath!ನಿಜ ಗಾಂಧಿನಗರ ದುನಿಯ!
ನೇರನುಡಿ ನಿಷ್ಟೂರವಾಧಿ ವ್ಯಾಖ್ಯಾನ! https://t.co/fJ6LhGf9fk

— ನವರಸನಾಯಕ ಜಗ್ಗೇಶ್ (@Jaggesh2) February 2, 2020

ಹೀಗೆ ಸಾಲು ಟ್ವೀಟ್‍ಗಳ ಮೂಲಕ ಜಗ್ಗೇಶ್ ಅವರು ಪರೋಕ್ಷವಾಗಿ ದ್ವಾರಕೀಶ್ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೆ ತಮಗೂ ಒಂದು ಕೋಟಿ ರೂ. ಬರಬೇಕು. ನಾಜೂಕಾಗಿ ಮಾತನಾಡಿ ಇನ್ನೂ ಹಣ ನೀಡಿಲ್ಲ ಎಂಬರ್ಥದಲ್ಲಿ ಹರಿಹಾಯ್ದಿದ್ದಾರೆ. ಈ ಮೂಲಕ ನಿರ್ಮಾಪಕರ ಹಣಕಾಸು ವ್ಯವಹಾರದ ಕುರಿತು ಗಾಂಧಿನಗರದಲ್ಲಿ ವಾದ ವಿವಾದ ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ.

ಏನಿದು ಪ್ರಕರಣ?:
ದ್ವಾರಕೀಶ್ ಅವರ ಮನೆಗೆ ಫೈನಾನ್ಶಿಯರ್, ನಿರ್ಮಾಪಕ ರಮೇಶ್ ಅವರು ಫೆಬ್ರವರಿ 2ರಂದು ನುಗ್ಗಿ ದಾಂಧಲೆ ಮಾಡಿದ್ದಾರೆ. ದ್ವಾರಕೀಶ್ ಆಯುಷ್ಮಾನ್ ಭವ ಚಿತ್ರದ ನಿರ್ಮಾಪಕರಾಗಿದ್ದರು. ಈ ವೇಳೆ ಫೈನಾನ್ಶಿಯರ್ ರಮೇಶ್ ಅವರಿಂದ ಹಣ ಪಡೆದಿದ್ದರು. ಆದರೆ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಹಣ ಗಳಿಸುವಲ್ಲಿ ವಿಫಲ ಆಗಿತ್ತು. ಹೀಗಾಗಿ ಹಣ ವಾಪಸ್ ನೀಡಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

ಕೆಲ ಅಮಾಯಕರಿಗೆ ಸಮುದ್ರದ ಅಲೆ ಗೊತ್ತು!ನನಗೆ ಸಿನಿಮಾರಂಗದ ಅಲೆಗಳ ಆಳದಲ್ಲಿ ಇರುವ ಅಗೋಚರ ಕ್ರಿಮಿ ಕೀಟಗಳ ಬಗ್ಗೆ ಗೊತ್ತು!ಕಾರಣ ನನ್ನ ವಾಸ ಆ ಮಾಯಾವಿ ಸಮುದ್ರದಲ್ಲಿ 38ವರ್ಷದ ವಾಸ! https://t.co/gEOLuUQI7p

— ನವರಸನಾಯಕ ಜಗ್ಗೇಶ್ (@Jaggesh2) February 2, 2020

ನಂತರ ಫೈನಾನ್ಸ್ ಮಾಡಿದ್ದ ರಮೇಶ್ ಹಣವನ್ನು ವಾಪಸ್ ಕೊಡುವಂತೆ ಪದೇ ಪದೇ ಕೇಳಿದ್ದಾರೆ. ದ್ವಾರಕೀಶ್ ನೀಡಿಲ್ಲ, ನಂತರ ಶುಕ್ರವಾರ ರಮೇಶ್ ಹಾಗೂ ನಿರ್ಮಾಪಕ ಜಯಣ್ಣ ಅವರು ದ್ವಾರಕೀಶ್ ಮನೆಗೆ ಹೋಗಿ ಹಣ ಕೇಳಿದ್ದರು. ಆಗ ದ್ವಾರಕೀಶ್ ಅವರು, ಕಷ್ಟದಲ್ಲಿದ್ದೇನೆ, ಸ್ವಲ್ಪ ಕಾಲಾವಕಾಶ ಕೊಡುವಂತೆ ಮನವಿ ಮಾಡಿದ್ದಾರೆ. ಆದರೆ ಹಣವನ್ನು ಬಿಡುವುದಕ್ಕೆ ಸಾಧ್ಯವಿಲ್ಲ. ನೀವು ಹೇಳಿದ ಗಡುವು ಮುಗಿಯಿತು. ಗಡುವು ಮುಗಿದ ಬಳಿಕವೂ ಹಣವನ್ನು ಬಿಡುವುದಕ್ಕೆ ಆಗುವುದಿಲ್ಲ ಎಂದು ರಮೇಶ್ ಪಟ್ಟು ಹಿಡಿದಿದ್ದರು ಎನ್ನಲಾಗಿದೆ.

ಆಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದು, ಗಲಾಟೆ ನಡೆದಿದೆ. ಇದರಿಂದ ಕೋಪಗೊಂಡ ದ್ವಾರಕೀಶ್, ಒಂದೂವರೆ ವರ್ಷ ಆದರೂ ನಿನಗೆ ನಾನು ಹಣ ಕೊಡೋದಿಲ್ಲ ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿದೆ ಎಂದು ತಿಳಿದು ಬಂದಿದೆ.

TAGGED:DwarakishFinancierjaggeshproducerPublic TVsandalwoodಜಗ್ಗೇಶ್ಟ್ವೀಟ್ದ್ವಾರಕೀಶ್ನಿರ್ಮಾಪಕಪಬ್ಲಿಕ್ ಟಿವಿಪೈನಾನ್ಶಿಯರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

d.k.shivakumar KPCC
Bengaluru City

ಶೃಂಗೇರಿ ಮತ ಮರು ಎಣಿಕೆಯಲ್ಲಿ ವ್ಯವಸ್ಥಿತ ಪಿತೂರಿ ನಡೆದಿದೆ: ಡಿಕೆಶಿ

Public TV
By Public TV
2 minutes ago
Rajegowda
Chikkamagaluru

ಸ್ಟ್ರಾಂಗ್‌ ರೂಂ ಓಪನ್‌ ಆದಾಗ ಟ್ರಂಕ್‌ನ ಲಾಕ್‌ ಒಡೆದಿದ್ರು, ಸೀಲ್‌ ಇರಲಿಲ್ಲ: ರಾಜೇಗೌಡ ಗಂಭೀರ ಆರೋಪ

Public TV
By Public TV
11 minutes ago
Delhi Building Fire
Latest

ದೆಹಲಿಯ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ; 9 ಮಂದಿ ಸಾವು

Public TV
By Public TV
23 minutes ago
R Ashok
Bengaluru City

ಶೃಂಗೇರಿಯಲ್ಲಿ ಸತ್ಯಕ್ಕೆ ಜಯ – ವೋಟ್ ಚೋರ್ ಕೌನ್ ಹೈ? ರಾಹುಲ್ ಗಾಂಧಿ ಹೈ: ಆರ್‌. ಅಶೋಕ್‌

Public TV
By Public TV
34 minutes ago
Heart Attack
Districts

ಜೋಯಿಡಾದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

Public TV
By Public TV
44 minutes ago
railway track copy
Crime

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ – ಗಂಭೀರ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?