Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಟ್ಟವ ಕೋಡಂಗಿ ಇಸ್ಕೊಂಡವ ವೀರಭದ್ರ- ದ್ವಾರಕೀಶ್-ನಿರ್ಮಾಪಕರ ಜಗಳಕ್ಕೆ ಜಗ್ಗೇಶ್ ಎಂಟ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊಟ್ಟವ ಕೋಡಂಗಿ ಇಸ್ಕೊಂಡವ ವೀರಭದ್ರ- ದ್ವಾರಕೀಶ್-ನಿರ್ಮಾಪಕರ ಜಗಳಕ್ಕೆ ಜಗ್ಗೇಶ್ ಎಂಟ್ರಿ

Bengaluru City

ಕೊಟ್ಟವ ಕೋಡಂಗಿ ಇಸ್ಕೊಂಡವ ವೀರಭದ್ರ- ದ್ವಾರಕೀಶ್-ನಿರ್ಮಾಪಕರ ಜಗಳಕ್ಕೆ ಜಗ್ಗೇಶ್ ಎಂಟ್ರಿ

Public TV
Last updated: February 2, 2020 8:35 pm
Public TV
Share
3 Min Read
jaggesh 3
SHARE

ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಟ ದ್ವಾರಕೀಶ್ ಹಾಗೂ ನಿರ್ಮಾಪಕ, ಫೈನಾನ್ಶಿಯರ್ ರಮೇಶ್ ಜಗಳಕ್ಕೆ ನವರಸ ನಾಯಕ ಜಗ್ಗೇಶ್ ಎಂಟ್ರಿ ಕೊಟ್ಟಿದ್ದು, ಸರಣಿ ಟ್ವೀಟ್ ಮೂಲಕ ಪರೋಕ್ಷವಾಗಿ  ಅಸಮಾಧಾನ ಹೊರ ಹಾಕಿದ್ದಾರೆ.

ಪಬ್ಲಿಕ್ ಟಿವಿ ಸುದ್ದಿಯನ್ನು ರಿಟ್ವೀಟ್ ಮಾಡಿದ  ನಟ ಜಗ್ಗೇಶ್, ಪರೋಕ್ಷವಾಗಿ ನಟ, ನಿರ್ಮಾಪಕ ದ್ವಾರಕೀಶ್ ವಿರುದ್ಧ ಹರಿಹಾಯ್ದಿದ್ದಾರೆ. ‘ನನ್ನ 1 ಕೋಟಿ ರೂ. ಕೇಳಿದರೂ ಹೀಗೆ ಆಗಬಹುದು. ಕೊಟ್ಟವ ಸ್ನೇಹಿತ, ಬಳಸಿಕೊಂಡವರು ಸ್ನೇಹಿತರು, ಇದು ಹಣದ ವಿಷಯ ಮಾತನಾಡುವುದು ಕಷ್ಟ. ನನಗೆ ಬರಬೇಕಾದ 1 ಕೋಟಿ ರೂ. ಹಣಕ್ಕೆ ಬಾಯಿ ತೆಗೆದರೆ ನನ್ನ ವಿಷಯವು ಹೀಗೆ ಬರುವುದು. ಹಣ ಬೇಕಾದಾಗ ಪ್ರಾಮಾಣಿಕ ವ್ಯವಹಾರಸ್ಥರು. ವಾಪಸ್ ಕೊಡುವಾಗ ಮಾಧ್ಯಮ, ಪೊಲೀಸ್, ಮಾನಹಾನಿ ಎಂಥ ದೌರ್ಭಾಗ್ಯ ವ್ಯವಹಾರ. ಬರುವ ಹಣಕ್ಕಾಗಿ ನಾನು ತಾಳ್ಮೆಯಿಂದ ಕಾಯುತ್ತಿರುವ ಮೂರ್ಖ ಎಂದು ಜಗ್ಗೇಶ್ ಮೊದಲ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸಿನಿಮಾ, ಸಿನಿಮಾ, ಸಿನಿಮಾದಲ್ಲೇ ಸತ್ತಿದ್ದೇನೆ ನಾನು: ದ್ವಾರಕೀಶ್ ಕಣ್ಣೀರು

ಕೊಟ್ಟವ ಸ್ನೇಹಿತ!ಬಳಸಿಕೊಂಡವರು ಸ್ನೇಹಿತರು!
ಇದು ಹಣದ ವಿಷಯ ಮಾತಾಡುವುದು ಕಷ್ಟ!
ನನಗೆ ಬರಬೇಕಾದ್ದ 1ಕೋಟಿ ಹಣಕ್ಕೆ ಬಾಯಿ ತೆಗೆದರೆ ನನ್ನವಿಷಯವು ಹೀಗೆ ಬರುವುದು!
ಹಣ ಬೇಕಾದಾಗ ಪ್ರಾಮಾಣಿಕ ವ್ಯೆವಹಾರಸ್ಥರು!
ವಾಪಸ್ ಕೊಡುವಾಗ ಮಾಧ್ಯಮ ಪೋಲಿಸ್ ಮಾನಹಾನಿ ಎಂಥದೌರ್ಭಾಗ್ಯ
ವ್ಯೆವಹಾರ!
ಬರುವ ಹಣಕ್ಕಾಗಿ ನಾನು ತಾಲ್ಮೆಯಿಂದ
ಕಾಯುತ್ತಿರುವ ಮೂರ್ಕ! https://t.co/KhY1de2th2

— ನವರಸನಾಯಕ ಜಗ್ಗೇಶ್ (@Jaggesh2) February 2, 2020

ಜಗ್ಗೇಶ್ ಎರಡನೇ ಟ್ವೀಟ್‍ನಲ್ಲಿ ಸಹ ದ್ವಾರಕೀಶ್ ಹೆಸರನ್ನು ಉಲ್ಲೇಖಿಸದೇ ಪರೋಕ್ಷವಾಗಿ ಕಿಡಿಕಾರಿದ್ದಾರೆ. ರಮೇಶ್ ಹಾಗೂ ಜಯಣ್ಣ ಗೌರವಸ್ಥ ವ್ಯವಹಾರಿಗಳು. ಕೊಟ್ಟವ ಕೋಡಂಗಿ, ಇಸ್ಕೊಂಡವ ವೀರಭದ್ರ, ಇದು ಗಾಂಧಿನಗರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನಾನೂ ಗಾಂಧಿನಗರದ ವ್ಯವಹಾರದಲ್ಲಿ ಭಾಗಿಯಾಗಿದ್ದೇನೆ. ಗಾಂಧಿನಗರದ ಬಿಲ್ಡಪ್ ರಾತ್ರಿ ನೆನೆದರೂ ನಿದ್ದೆ ಬರುವುದಿಲ್ಲ. ಮಾಧ್ಯಮದಲ್ಲಿ ಎಲ್ಲರೂ ಸ್ಟಾರ್‍ಗಳು, ನಿರ್ಮಾಪಕರು ಮಾತ್ರ ಫುಟ್‍ಪಾತ್. ಇದು ನಿಜ ಗಾಂಧಿನಗರ ದುನಿಯಾ, ನೇರನುಡಿ ನಿಷ್ಟೂರವಾದಿ ವ್ಯಾಖ್ಯಾನ ಎಂದು ಟೀಕಿಸಿದ್ದಾರೆ.

ಕೆಲ ಅಮಾಯಕರಿಗೆ ಸಮುದ್ರದ ಅಲೆ ಗೊತ್ತು. ನನಗೆ ಸಿನಿಮಾ ರಂಗದ ಅಲೆಗಳ ಆಳದಲ್ಲಿರುವ ಅಗೋಚರ ಕ್ರಿಮಿ ಕೀಟಗಳ ಬಗ್ಗೆ ಗೊತ್ತು. ಕಾರಣ ಆ ಮಾಯಾವಿ ಸಮುದ್ರದಲ್ಲಿ 38 ವರ್ಷಗಳ ವಾಸ ಎಂದು ತಮ್ಮ ಮೂರನೇ ಟ್ವೀಟ್‍ನಲ್ಲಿ ಮಾರ್ಮಿಕವಾಗಿ ಬರೆದುಕೊಂಡಿದ್ದಾರೆ.

ರಮೇಶ್ ಹಾಗು ಜಯಣ್ಣ ಗೌರವಸ್ತ ವ್ಯವಹಾರಿಗಳು!
ಕೊಟ್ಟವ ಕೋಡಂಗಿ!ಇಸ್ಕೊಂಡವ ಇರ್ಭಧ್ರ!
ಇದು ಗಾಂಧಿನಗರ!
Even I am fedup with gandhinagar business!
ಗಾಂಧಿನಗರ buildup ರಾತ್ರಿ ನೆನೆದರು ನಿದ್ರೆಬಾರದು ನನಗೆ!
ಎಲ್ಲರು stars In media!producersಮಾತ್ರ footpath!ನಿಜ ಗಾಂಧಿನಗರ ದುನಿಯ!
ನೇರನುಡಿ ನಿಷ್ಟೂರವಾಧಿ ವ್ಯಾಖ್ಯಾನ! https://t.co/fJ6LhGf9fk

— ನವರಸನಾಯಕ ಜಗ್ಗೇಶ್ (@Jaggesh2) February 2, 2020

ಹೀಗೆ ಸಾಲು ಟ್ವೀಟ್‍ಗಳ ಮೂಲಕ ಜಗ್ಗೇಶ್ ಅವರು ಪರೋಕ್ಷವಾಗಿ ದ್ವಾರಕೀಶ್ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೆ ತಮಗೂ ಒಂದು ಕೋಟಿ ರೂ. ಬರಬೇಕು. ನಾಜೂಕಾಗಿ ಮಾತನಾಡಿ ಇನ್ನೂ ಹಣ ನೀಡಿಲ್ಲ ಎಂಬರ್ಥದಲ್ಲಿ ಹರಿಹಾಯ್ದಿದ್ದಾರೆ. ಈ ಮೂಲಕ ನಿರ್ಮಾಪಕರ ಹಣಕಾಸು ವ್ಯವಹಾರದ ಕುರಿತು ಗಾಂಧಿನಗರದಲ್ಲಿ ವಾದ ವಿವಾದ ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ.

ಏನಿದು ಪ್ರಕರಣ?:
ದ್ವಾರಕೀಶ್ ಅವರ ಮನೆಗೆ ಫೈನಾನ್ಶಿಯರ್, ನಿರ್ಮಾಪಕ ರಮೇಶ್ ಅವರು ಫೆಬ್ರವರಿ 2ರಂದು ನುಗ್ಗಿ ದಾಂಧಲೆ ಮಾಡಿದ್ದಾರೆ. ದ್ವಾರಕೀಶ್ ಆಯುಷ್ಮಾನ್ ಭವ ಚಿತ್ರದ ನಿರ್ಮಾಪಕರಾಗಿದ್ದರು. ಈ ವೇಳೆ ಫೈನಾನ್ಶಿಯರ್ ರಮೇಶ್ ಅವರಿಂದ ಹಣ ಪಡೆದಿದ್ದರು. ಆದರೆ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಹಣ ಗಳಿಸುವಲ್ಲಿ ವಿಫಲ ಆಗಿತ್ತು. ಹೀಗಾಗಿ ಹಣ ವಾಪಸ್ ನೀಡಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

ಕೆಲ ಅಮಾಯಕರಿಗೆ ಸಮುದ್ರದ ಅಲೆ ಗೊತ್ತು!ನನಗೆ ಸಿನಿಮಾರಂಗದ ಅಲೆಗಳ ಆಳದಲ್ಲಿ ಇರುವ ಅಗೋಚರ ಕ್ರಿಮಿ ಕೀಟಗಳ ಬಗ್ಗೆ ಗೊತ್ತು!ಕಾರಣ ನನ್ನ ವಾಸ ಆ ಮಾಯಾವಿ ಸಮುದ್ರದಲ್ಲಿ 38ವರ್ಷದ ವಾಸ! https://t.co/gEOLuUQI7p

— ನವರಸನಾಯಕ ಜಗ್ಗೇಶ್ (@Jaggesh2) February 2, 2020

ನಂತರ ಫೈನಾನ್ಸ್ ಮಾಡಿದ್ದ ರಮೇಶ್ ಹಣವನ್ನು ವಾಪಸ್ ಕೊಡುವಂತೆ ಪದೇ ಪದೇ ಕೇಳಿದ್ದಾರೆ. ದ್ವಾರಕೀಶ್ ನೀಡಿಲ್ಲ, ನಂತರ ಶುಕ್ರವಾರ ರಮೇಶ್ ಹಾಗೂ ನಿರ್ಮಾಪಕ ಜಯಣ್ಣ ಅವರು ದ್ವಾರಕೀಶ್ ಮನೆಗೆ ಹೋಗಿ ಹಣ ಕೇಳಿದ್ದರು. ಆಗ ದ್ವಾರಕೀಶ್ ಅವರು, ಕಷ್ಟದಲ್ಲಿದ್ದೇನೆ, ಸ್ವಲ್ಪ ಕಾಲಾವಕಾಶ ಕೊಡುವಂತೆ ಮನವಿ ಮಾಡಿದ್ದಾರೆ. ಆದರೆ ಹಣವನ್ನು ಬಿಡುವುದಕ್ಕೆ ಸಾಧ್ಯವಿಲ್ಲ. ನೀವು ಹೇಳಿದ ಗಡುವು ಮುಗಿಯಿತು. ಗಡುವು ಮುಗಿದ ಬಳಿಕವೂ ಹಣವನ್ನು ಬಿಡುವುದಕ್ಕೆ ಆಗುವುದಿಲ್ಲ ಎಂದು ರಮೇಶ್ ಪಟ್ಟು ಹಿಡಿದಿದ್ದರು ಎನ್ನಲಾಗಿದೆ.

ಆಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದು, ಗಲಾಟೆ ನಡೆದಿದೆ. ಇದರಿಂದ ಕೋಪಗೊಂಡ ದ್ವಾರಕೀಶ್, ಒಂದೂವರೆ ವರ್ಷ ಆದರೂ ನಿನಗೆ ನಾನು ಹಣ ಕೊಡೋದಿಲ್ಲ ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿದೆ ಎಂದು ತಿಳಿದು ಬಂದಿದೆ.

TAGGED:DwarakishFinancierjaggeshproducerPublic TVsandalwoodಜಗ್ಗೇಶ್ಟ್ವೀಟ್ದ್ವಾರಕೀಶ್ನಿರ್ಮಾಪಕಪಬ್ಲಿಕ್ ಟಿವಿಪೈನಾನ್ಶಿಯರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
3 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
12 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
47 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?