Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ಶಿವರಾಂ

Public TV
Last updated: December 5, 2021 1:54 pm
Public TV
Share
1 Min Read
SHIVARAM 2
SHARE

ಬೆಂಗಳೂರು: ನಿನ್ನೆ ನಿಧನರಾಗಿರುವ ಸ್ಯಾಂಡಲ್‍ವುಡ್‍ನ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು.

SHIVARAM 2

ಗುರುಸ್ವಾಮಿಯಾಗಿದ್ದ ಶಿವರಾಂಗೆ ಪಂಚಾಮೃತ ಅಭಿಷೇಕ ಮತ್ತು ಕೇಸರಿ ವಸ್ತ್ರ ಸಮರ್ಪಿಸಿ ಚಿತಾಗಾರಾದಲ್ಲಿ ಬ್ರಾಹ್ಮಣ ಸ್ಮಾರ್ತ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಅಯ್ಯಪ್ಪ ಭಕ್ತರು ಭಜನೆ ಮಾಡಿ ಅಯ್ಯಪ್ಪನಿಗೆ ಇಷ್ಟವಾದ ಕರ್ಪೂರವನ್ನು ಸಮರ್ಪಿಸಿದರು. ಶಿವರಾಂ ಪುತ್ರರಾದ ಹಿರಿಯ ಮಗ ರವಿಶಂಕರ್‌ ಮತ್ತು ಲಕ್ಷ್ಮೀಶ್ ಅಗ್ನಿ ಸ್ಪರ್ಶ ಮಾಡಿದರು.  ಈ ಮೊದಲು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಶಿವರಾಂ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಚಿತ್ರರಂಗದ ಹಲವು ಮಂದಿ ಹಿರಿಯ ನಟನ ದರ್ಶನ ಪಡೆದು ಕಂಬನಿ ಮಿಡಿದರು.ಇದನ್ನೂ ಓದಿ: ಸಾಮಾನ್ಯ ವ್ಯಕ್ತಿಯಲ್ಲ ಶಿವರಾಂ, ಅವರಂತೆ ಯಾರು ಮತ್ತೆ ಹುಟ್ಟಿ ಬರಲು ಸಾಧ್ಯವಿಲ್ಲ: ದ್ವಾರಕೀಶ್

SHIVARAM 1 2

ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದ ಶಿವರಾಂ ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ  ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಬಳಿಕ ಬ್ರೈನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು.  ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದರು. ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನದ ಬಳಿಕ ಬನಶಂಕರಿ ಚಿತಾಗಾರದಲ್ಲಿ ಸಕಲ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಸಚಿವ ಆರ್. ಅಶೋಕ್ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು. ಇದನ್ನೂ ಓದಿ: ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ

R ASHOK SHIVARAM

ಶಿವರಾಂ ಅವರಿಗೆ 84 ವರ್ಷ ವಯಸ್ಸಾಗಿತ್ತು. ಆರು ದಶಕಗಳಿಂದ ಕನ್ನಡ ಸಿನಿಮಾ ರಂಗದ ನಂಟುಹೊಂದಿದ್ದಾರೆ. ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಪಳಗಿದ ಶಿವರಾಂ ನಾಯಕ ನಟರಾಗಿ, ಹಾಸ್ಯನಟ, ಪೋಷಕ ನಟ, ನಿರ್ಮಾಪಕರಾಗಿಯೂ ಹೆಸರು ಮಾಡಿದವರು. `ಶರಪಂಜರ’ ಶಿವರಾಂ ಎಂದೇ ಹೆಸರುವಾಸಿಯಾಗಿದ್ದರು `ಡ್ರೈವರ್ ಹನುಮಂತು’ ಸಿನಿಮಾದಲ್ಲಿ ನಾಯಕ ನಟರಾಗಿ ಹೆಚ್ಚು ಜನಪ್ರಿಯರಾಗಿದ್ದರು. ಡಾ.ರಾಜ್‍ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಪ್ರಣಯರಾಜ ಶ್ರೀನಾಥ್ ಅವರ ಜೊತೆಯಲ್ಲಿ ನಟಿಸಿದ್ದರು.

TAGGED:bengalurusandalwoodshivaramಬೆಂಗಳೂರುಶಿವರಾಂಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 hour ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
2 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
3 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
4 hours ago

You Might Also Like

Ahmedabad Plane Crash
Latest

ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ

Public TV
By Public TV
14 seconds ago
Vijay Rupani 3
Latest

ಪತನಗೊಂಡ ಏರ್‌ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ

Public TV
By Public TV
6 minutes ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
10 minutes ago
Yadhuveer Wodeyar
Districts

ಕೆಆರ್‌ಎಸ್ ಅಮ್ಯೂಸ್ಮೆಂಟ್ ಪಾರ್ಕ್‌ಗೆ ನನ್ನ ವಿರೋಧವಿದೆ: ಯದುವೀರ್ ಒಡೆಯರ್

Public TV
By Public TV
37 minutes ago
r ashok
Districts

ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

Public TV
By Public TV
1 hour ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?