ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸುದೀಪ್‌ ದಂಪತಿ ಭೇಟಿ

Public TV
1 Min Read
sudeep 2

`ವಿಕ್ರಾಂತ್‌ರೋಣ’ (Vikranthrona) ಚಿತ್ರದ ಸಕ್ಸಸ್ ನಂತರ ಕಿಚ್ಚ ಸುದೀಪ್ (Kiccha Sudeep) ಸದ್ಯ ಬಿಗ್ ಬಾಸ್ (Bigg Boss) ಕಾರ್ಯಕ್ರಮದ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣಕ್ಕೆ ಬ್ರೇಕ್ ಹಾಕಿ, ಕುಟುಂಬದ ಜೊತೆ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ(Shirdi) ಸುದೀಪ್ ಭೇಟಿ ಕೊಟ್ಟಿದ್ದಾರೆ.

sudeep

ಚಂದನವನದ ಪ್ರತಿಭಾನ್ವಿತ ನಟ ಕಿಚ್ಚ ಸುದೀಪ್, ವಿಕ್ರಾಂತ್ ರೋಣ ಚಿತ್ರದ ನಂತರ ಒಂದೊಳ್ಳೆ ಕಥೆಯ ಮೂಲಕ ಬರಲು ರೆಡಿಯಾಗಿದ್ದಾರೆ. ಚಿತ್ರದ ಆಯ್ಕೆ ಮತ್ತಷ್ಟು ಸೆಲೆಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಬಿಗ್ ಬಾಸ್ ಶೋ ಶೂಟಿಂಗ್ ನಡುವೆ ಪತ್ನಿ ಜೊತೆ ವಿದೇಶಕ್ಕೆ ಹೋಗಿ, ಕ್ರಿಕೆಟ್ ಮ್ಯಾಚ್ ವೀಕ್ಷಿಸಿದ್ದರು. ಈ ಬೆನ್ನಲ್ಲೇ ಈಗ ಪತ್ನಿ ಪ್ರಿಯಾ ಜೊತೆ ಶಿರಡಿ ಸನ್ನಿಧಿಗೆ ಸುದೀಪ್ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ರಣ್ವೀರ್ ಸಿಂಗ್ ಗೂ ಕಾಸ್ಟಿಂಗ್ ಕೌಚ್ ಅನುಭವ : ನಟ ಬಿಚ್ಚಿಟ್ಟ ಕರಾಳ ಸತ್ಯ

sudeep 1

ತಮ್ಮ ಎಲ್ಲಾ ಕೆಲಸಕ್ಕೂ ಬ್ರೇಕ್ ಹಾಕಿ, ಪತ್ನಿ ಪ್ರಿಯಾ(Priya Sudeep) ಜೊತೆ ಶಿರಡಿಗೆ ಸುದೀಪ್ ತೆರಳಿದ್ದಾರೆ. ಸಾಯಿಬಾಬಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಕೂಡ ಮಾಡಿಸಿದ್ದಾರೆ. ಈಗ ಶಿರಡಿಗೆ ಭೇಟಿ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

sudeep

ಇನ್ನೂ ಸುದೀಪ್, ಬಿಗ್ ಬಾಸ್ ಶೋ ಮುಕ್ತಾಯದ ನಂತರ ಡೈರೆಕ್ಟರ್ ನಂದಕಿಶೋರ್ ಜೊತೆ ಸಿನಿಮಾ ಮಾಡಲಿದ್ದಾರೆ. ಬಳಿಕ ರಮ್ಯಾ ಜೊತೆ ಕೂಡ ಕಿಚ್ಚ ನಟಿಸಲಿದ್ದಾರೆ ಎಂಬ ಸುದ್ದಿ ಸದ್ದು ಮಾಡುತ್ತಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *