ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಎಡಿಸಿ(ಮಿಲಿಟರಿ) ಆಗಿ ಸಂದೀಪ್ ಶರ್ಮಾ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಜಭವನದಲ್ಲಿ ಇಂದು ಅವರು ಎಡಿಸಿ( ಮಿಲಿಟರಿ) ಯಾಗಿ ವಹಿಸಿಕೊಂಡಿದ್ದಾರೆ. ವಾಯುಪಡೆಯ ಸ್ಕ್ವಾಡ್ರನ್ ಲೀಡರ್ ಆಗಿರುವ ಸಂದೀಪ್ ಶರ್ಮಾ, ರಾಜ್ಯಪಾಲರು ಇಬ್ಬರು ಎಡಿಸಿ ಗಳ ಪೈಕಿ ಮಿಲಿಟರಿ ಪ್ರತಿನಿಧಿಯಾಗಿರುತ್ತಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಂದೀಪ್ ಶರ್ಮಾ ಅವರಿಗೆ ಕರ್ತವ್ಯಕ್ಕೆ ನಿಯೋಜಿಸಿ ಶುಭಹಾರೈಸಿದ್ದಾರೆ. ಇದನ್ನೂ ಓದಿ: ಧರ್ಮ ಒಡೆಯುವುದು ನನ್ನ ಉದ್ದೇಶವಲ್ಲ, ಕೆಲವರು ನನ್ನನ್ನ ದಾರಿ ತಪ್ಪಿಸಿದ್ರು: ಸಿದ್ದರಾಮಯ್ಯ
ರಾಜ್ಯಪಾಲರ ಭದ್ರತೆ, ಎಲ್ಲ ಚಲನವಲನ ಮತ್ತು ಕಾರ್ಯಕ್ರಮಗಳನ್ನು ರೂಪಿಸುವ ಹೊಣೆಗಾರಿಕೆ ಸಂದೀಪ್ ಅವರದ್ದಾಗಿದೆ. ಇಂದಿನಿಂದ ಅವರು ರಾಜ್ಯಪಾಲರ ಎಡಿಸಿ(ಮಿಲಿಟರಿ) ಯಾಗಿ ಕಾರ್ಯಭಾರ ನಿರ್ವಹಿಸಲಿದ್ದಾರೆ.
ರಾಜ್ಯಪಾಲರ ಭದ್ರತೆ, ಎಲ್ಲಾ ಚಲನವಲನ ಮತ್ತು ಕಾರ್ಯಕ್ರಮಗಳನ್ನು ರೂಪಿಸುವ ಹೊಣೆಗಾರಿಕೆ ಇವರದ್ದಾಗಿದೆ. ಇಂದಿನಿಂದ ಸಂದೀಪ್ ಶರ್ಮಾ ರಾಜ್ಯಪಾಲರ ಎಡಿಸಿ(ಮಿಲಿಟರಿ) ಯಾಗಿ ಕಾರ್ಯಭಾರ ನಿರ್ವಹಿಸಲಿದ್ದಾರೆ.