ಬಳ್ಳಾರಿ: ಸಂಡೂರು ಉಪಚುನಾವಣೆ (Sandur By Election) ರಾಜಕೀಯ ಕೂಡ ಜೋರಾಗಿದೆ. ಸಂಸದ ತುಕಾರಾಂ (Tukaram) ಕುಟುಂಬಕ್ಕೆ ಟಿಕೆಟ್ ನೀಡೋದಕ್ಕೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ಇದು ರಾಜ್ಯ ಕಾಂಗ್ರೆಸ್ ನಾಯಕರ ತಲೆಬಿಸಿಗೆ ಕಾರಣವಾಗಿದೆ.
ಗುರುವಾರ ಸಂಡೂರಲ್ಲಿ ಸಭೆ ನಡೆಸಿದ್ದ ಅತೃಪ್ತರು ಬೆಂಗಳೂರು ಕಡೆ ಮುಖ ಮಾಡಿದ್ದಾರೆ. ಉಪಸಮರವನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಜನಾರ್ದನ ರೆಡ್ಡಿ (Janardhana Reddy) ಇಂದು ಸಂಡೂರಲ್ಲಿ ಹೊಸಮನೆಯ ಗೃಹಪ್ರವೇಶ ಮಾಡಿದ್ದಾರೆ. ಅಷ್ಟೇ ಅಲ್ಲದೇ ತುಕಾರಾಮ್ ಸಹೋದರಿ ಪುಷ್ಪಾವತಿ ನಾಗರಾಜ್ ಮನೆಗೆ ಭೇಟಿ ನೀಡಿ ಬೆಂಬಲ ಯಾಚಿಸಿದ್ದಾರೆ. ಇದನ್ನೂ ಓದಿ: ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ
ಈ ಸಂದರ್ಭದಲ್ಲಿ ನಾನು ಸಂಡೂರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ರಾಮುಲು (Sriramulu) ಘೋಷಿಸಿದ್ದಾರೆ.