ಸಂತೋಷ್ ಆನಂದ್ ರಾಮ್ (Santhosh Anand Ram) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಯುವ (Yuva) ಸಿನಿಮಾದಲ್ಲಿ ಸಪ್ತಮಿ ಗೌಡ (Saptami Gowda) ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಹಿಂದೆಯೇ ತಮ್ಮ ಚಿತ್ರಕ್ಕೆ ಸಪ್ತಮಿ ನಾಯಕಿ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಆದರೆ, ಅವರದ್ದು ಯಾವ ರೀತಿಯ ಪಾತ್ರ ಮತ್ತು ಪಾತ್ರದ ಹೆಸರೇನು ಎನ್ನುವುದನ್ನು ರಿವೀಲ್ ಮಾಡಿರಲಿಲ್ಲ. ಸಪ್ತಮಿ ಹುಟ್ಟು ಹಬ್ಬದ ಸಂದರ್ಭದಲ್ಲಿ ಪಾತ್ರದ ಬಗ್ಗೆ ಕೆಲ ಮಾಹಿತಿ ಮತ್ತು ಫೋಟೋವನ್ನು ರಿಲೀಸ್ ಮಾಡಿದೆ ಚಿತ್ರತಂಡ.
ಈ ಸಿನಿಮಾದಲ್ಲಿ ಯುವರಾಜಕುಮಾರ್ (Yuvraj Kumar) ನಾಯಕನಾಗಿ ನಟಿಸುತ್ತಿದ್ದಾರೆ. ಸಪ್ತಮಿ ಗೌಡ ಅವರು ಸಿರಿ ಎನ್ನುವ ಪಾತ್ರ ಮಾಡುತ್ತಿದ್ದಾರೆ. ಅದೊಂದು ಡಿಗ್ಲಾಮರ್ ಪಾತ್ರ ಎಂದು ಹೇಳಲಾಗುತ್ತಿದೆ. ಕಾಲೇಜು ಹುಡುಗಿಯಾಗಿ ಈ ಸಿನಿಮಾದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾರೆ ಸಪ್ತಮಿ. ಯುವರಾಜ್ ಕುಮಾರ್ ಈ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಲಾಂಚ್ ಆಗುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರುತ್ತಿದೆ.
ಯುವ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದೇ ಒಂದು ರೋಚಕ. ಶನಿವಾರ (ಫೆ.4)ರಂದು ಸಂಜೆ ಕೆಸಿಸಿ ಕಾರ್ಯಕ್ರಮಕ್ಕೆ ತನ್ನ ತಾಯಿಯೊಂದಿಗೆ ನಟಿ ಸಪ್ತಮಿ ತೆರಳುತ್ತಿದ್ದರು. ಈ ವೇಳೆ ಹೊಂಬಾಳೆ ಸಂಸ್ಥೆ ಟೀಂ ಕಡೆಯಿಂದ ನಟಿಗೆ ಕಾಲ್ ಬಂದಿದೆ. ಆಫೀಸ್ಗೆ ಬನ್ನಿ ಎಂದಷ್ಟೇ ಹೇಳಲಾಗಿದೆ. ಬಳಿದ ಚಿತ್ರತಂಡಕ್ಕೆ ಸಪ್ತಮಿ ಭೇಟಿ ನೀಡಿದ್ದಾರೆ. ಬಳಿಕ ಯುವ ರಾಜ್ಕುಮಾರ್ (Yuva Rajkumar) ಅವರ ಪಕ್ಕ ನಿಲ್ಲಿಸಿ ಫೋಟೋ ಕ್ಲಿಕ್ಕಿಸಲಾಗಿದೆ. ನಂತರ `ಯುವ’ ಚಿತ್ರಕ್ಕೆ ನೀವೇ ಹೀರೋಯಿನ್ ಎಂದು ಸರ್ಪ್ರೈಸ್ ನೀಡಿದ್ದಾರೆ.
ಪಾಪ್ ಕಾರ್ನ್ ಮಂಕಿ ಟೈಗರ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ರು. ಡಾಲಿಗೆ ನಾಯಕಿಯಾಗಿ ಮೊದಲ ಸಿನಿಮಾದಲ್ಲೇ ಸೈ ಎನಿಸಿಕೊಂಡರು. ಬಳಿಕ `ಕಾಂತಾರ’ (Kantara) ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ಜೋಡಿಯಾಗುವ ಮೂಲಕ ಸಿನಿಪ್ರೇಕ್ಷಕರ ಗಮನ ಸೆಳೆದ ಬಳಿಕೆ ಅವರ ಕೈಯಲ್ಲಿ ಸಾಕಷ್ಟು ಚಿತ್ರಗಳಿವೆ. ಇದನ್ನೂ ಓದಿ:ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ
ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ `ದಿ ವಾಕ್ಸಿನ್ ವಾರ್’ ಚಿತ್ರದಲ್ಲಿ ಕೂಡ ಸಪ್ತಮಿ (Saptami Gowda) ಮೇಜರ್ ರೋಲ್ ಪ್ಲೈ ಮಾಡ್ತಿದ್ದಾರೆ. ಈ ಮೂಲಕ ಬಿಟೌನ್ ಅಂಗಳಕ್ಕೂ ನಟಿ ಲಗ್ಗೆ ಇಟ್ಟಿದ್ದಾರೆ. ಈಗಾಗಲೇ ಹಲವು ಹಂತದ ಚಿತ್ರೀಕರಣದಲ್ಲೂ ಅವರು ಭಾಗಿಯಾಗಿದ್ದಾರೆ. ಅದೊಂದು ಮಹತ್ವದ ಪಾತ್ರವೆಂದು ಹೇಳಿಕೊಂಡಿದ್ದಾರೆ.
ಪೈಲ್ವಾನ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಕೃಷ್ಣ ಇದೀಗ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಅವರಿಗೆ ಸಿನಿಮಾವೊಂದು ಮಾಡುತ್ತಿದ್ದು, ಈಗಾಗಲೇ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದೆ. ಈ ಸಿನಿಮಾಗೂ ಸಪ್ತಮಿಯೇ ನಾಯಕಿ. ಇನ್ನಷ್ಟೇ ಶೂಟಿಂಗ್ ಆರಂಭವಾಗಬೇಕು.