ಕಿರುತೆರೆಯ ಜನಪ್ರಿಯ ‘ಕನ್ನಡತಿ’ (Kannadati) ಸೀರಿಯಲ್ ಮೂಲಕ ಗಮನ ಸೆಳೆದ ನಟಿ ಸಾರಾ ಅಣ್ಣಯ್ಯ (Sara Annaiah) ಅವರು ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ, ರಾಯರ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ:ಮೈಸೂರಿಗೆ ಬಂದಿಳಿದ ನಟ ಉಸ್ತಾದ್ ರಾಮ್ ಪೋತಿನೇನಿ
View this post on Instagram
‘ಕನ್ನಡತಿ’ ಸೀರಿಯಲ್ನ ವರುಧಿನಿ ಆಗಿ ಸೈ ಎನಿಸಿಕೊಂಡಿದ್ದ ನಟಿ ಸಾರಾ ಅವರು ಇತ್ತೀಚಿಗೆ ‘ನಮ್ಮ ಲಚ್ಚಿ’ (Namma Lacchi) ಎಂಬ ಸೀರಿಯಲ್ನಲ್ಲಿ ಖಳನಾಯಕಿಯಾಗಿ ನಟಿಸುತ್ತಿದ್ದರು. ಆದರೆ ಸಡನ್ ಆಗಿ ಈ ಸೀರಿಯಲ್ನಿಂದ ಹೊರಬಂದರು. ಈ ಬೆನ್ನಲ್ಲೇ ಹೊಸ ಧಾರಾವಾಹಿ ‘ಅಮೃತಧಾರೆ’ಯ (Amruthadaare) ಮಹಿಮ ಪಾತ್ರಕ್ಕೆ ಸಾರಾ ಜೀವ ತುಂಬುತ್ತಿದ್ದಾರೆ.
View this post on Instagram
ಸದ್ಯ ವೆಸ್ಟರ್ನ್ ಉಡುಗೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೂರ್ಗ್ ಬ್ಯೂಟಿ ಸಾರಾ ಅಣ್ಣಯ್ಯ ಅವರು ಇದೀಗ ಟ್ರೆಡಿಷನಲ್ ಆಗಿ ಸೀರೆಯುಟ್ಟು ಮಂತ್ರಾಲಯಕ್ಕೆ ಭೇಟಿ ನೀಡಿ, ರಾಯರ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸದಾ ತುಂಡು ಬಟ್ಟೆಗಳನ್ನ ತೊಡುತ್ತಿದ್ದ ನಟಿ ಸಾರಾ ಈಗೀನ ಲುಕ್ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಹೀಗೆ ಟ್ರೆಡಿಷನಲ್ ಬಟ್ಟೆಗಳನ್ನ ಧರಿಸಿ ಎಷ್ಟು ಚೆಂದ ಕಾಣ್ತೀರಾ ಅಂತಾ ಮನವಿ ಮಾಡಿದ್ದಾರೆ.