Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕದ ಲಿಬರ್ಟಿ ಪ್ರತಿಮೆಯನ್ನು ಹಿಂದಿಕ್ಕಿದ ಏಕತಾ ಪ್ರತಿಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮೆರಿಕದ ಲಿಬರ್ಟಿ ಪ್ರತಿಮೆಯನ್ನು ಹಿಂದಿಕ್ಕಿದ ಏಕತಾ ಪ್ರತಿಮೆ

Latest

ಅಮೆರಿಕದ ಲಿಬರ್ಟಿ ಪ್ರತಿಮೆಯನ್ನು ಹಿಂದಿಕ್ಕಿದ ಏಕತಾ ಪ್ರತಿಮೆ

Public TV
Last updated: December 7, 2019 9:43 am
Public TV
Share
3 Min Read
statue of unity collage
SHARE

ಅಹ್ಮದಾಬಾದ್: ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಏಕತಾ ಪ್ರತಿಮೆ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಮೂಲಕ ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿಯನ್ನು ಹಿಂದಿಕ್ಕಿದೆ.

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಾಯ್ ಪಟೇಲ್ ಅವರ ಏಕತಾ ಪ್ರತಿಮೆ ವಿಶ್ವಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಸುಮಾರು 133 ವರ್ಷ ಹಳೆಯದಾದ ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿಯನ್ನು ಹಿಂದಿಕ್ಕಿದೆ. ಏಕತಾ ಪ್ರತಿಮೆಯನ್ನು ಕಣ್ತುಂಬಿಕೊಳ್ಳಲು ಪ್ರತಿನಿತ್ಯ ಸರಾಸರಿ 15 ಸಾವಿರ ಜನ ಭೇಟಿ ನೀಡುತ್ತಿದ್ದಾರೆ. ಈ ಮೂಲಕ ಸ್ಥಾಪನೆಯಾದ ಪ್ರಥಮ ವರ್ಷದಲ್ಲೇ ಏಕತಾ ಪ್ರತಿಮೆ ಅತಿ ಹೆಚ್ಚು ಜನರನ್ನು ಆಕರ್ಷಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

Statue of Unity sardar patel 13 1

ಪ್ರತಿನಿತ್ಯ ಭೇಟಿ ನೀಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನವೆಂಬರ್ 1, 2018ರಿಂದ ಅಕ್ಟೋಬರ್ 31, 2019ರ ವರೆಗೆ ಪ್ರವಾಸಿಗರ ಭೇಟಿಯಲ್ಲಿ ಸರಾಸರಿ ಶೇ.74 ರಷ್ಟು ಹೆಚ್ಚಿದೆ. ಇದೀಗ ಎರಡನೇ ವರ್ಷದ ಮೊದಲ ತಿಂಗಳಲ್ಲಿ ಪ್ರತಿದಿನ ಸರಾಸರಿ 15,036 ಜನ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೆ ವಾರಾಂತ್ಯದ ದಿನಗಳಲ್ಲಿ ಇದು ಸುಮಾರು 22,430ಕ್ಕೆ ಏರುತ್ತದೆ. ಅಮೆರಿಕದ ನ್ಯೂಯಾರ್ಕ್‍ನ ಸ್ಟ್ಯಾಚು ಆಫ್ ಲಿಬರ್ಟಿ ಪ್ರತಿಮೆಯು ನಿತ್ಯ 10 ಸಾವಿರ ಪ್ರವಾಸಿಗರನ್ನು ಮಾತ್ರ ಆಕರ್ಷಿಸುತ್ತಿದೆ ಎಂದು ಸರ್ದಾರ್ ಸರೋವರ ನಿಗಮ ಲಿ. ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಏಕತೆಯ ಪ್ರತೀಕವಾಗಿ ಭಾರತದ ಮೊದಲ ಗೃಹ ಸಚಿವರಾಗಿದ್ದ ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭಾಯ್ ಪಟೇಲ್ ಅವರ ಪುತ್ಥಳಿಯನ್ನು ನರ್ಮದಾ ನದಿಯ ತಟದಲ್ಲಿ ಸ್ಥಾಪಿಸಲಾಗಿದೆ. ಇದು 182 ಮೀಟರ್ ಎತ್ತರವಿದ್ದು, ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದು ನರ್ಮದಾ ನದಿಯ ತಟದ ಸರ್ದಾರ್ ಸರೋವರ ಡ್ಯಾಂ ಬಳಿ ಇದ್ದು, ಗುಜರಾತ್‍ನ ಕೇವಾಡಿಯಾ ಕಾಲೋನಿ ಬಳಿ ಸ್ಥಾಪಿತವಾಗಿದೆ.

Statue of Unity sardar patel 6

ಪ್ರವಾಸಿಗರ ಭೇಟಿಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಅದರಲ್ಲೂ ನವೆಂಬರ್ 2019ರಲ್ಲಿ ಹೆಚ್ಚು ಜನ ಭೇಟಿ ನೀಡಿದ್ದಾರೆ. ಈ ವರ್ಷ ನವೆಂಬರ್ 30ರ ವರೆಗೆ ಒಟ್ಟು 30.91 ಲಕ್ಷ ಪ್ರವಾಸಿಗರು ಕೆವಾಡಿಯಾಗೆ ಭೇಟಿ ನೀಡಿದ್ದಾರೆ. ಒಟ್ಟು 85.57 ಕೋಟಿ ರೂ.ಗಳ ಆದಾಯ ದಾಖಲಾಗಿದೆ ಎಂದು ಸರ್ದಾರ್ ಸರೋವರ ನಿಗಮ ಲಿ. ತಿಳಿಸಿದೆ.

ಅಲ್ಲದೆ ಪ್ರವಾಸಿಗರನ್ನು ಆಕರ್ಷಿಸಲು ಜಂಗಲ್ ಸಫಾರಿ, ಮಕ್ಕಳ ನ್ಯೂಟ್ರಿಷನ್ ಪಾರ್ಕ್, ಕ್ಯಾಕ್ಟಸ್ ಗಾರ್ಡನ್, ಚಿಟ್ಟೆಗಳ ಗಾರ್ಡನ್, ಎಕತಾ ನರ್ಸರಿ, ದಿನೋ ಟ್ರೈಯಲ್, ರಿವರ್ ರ್ಯಾಫ್ಟಿಂಗ್, ಬೋಟಿಂಗ್ ಅಲ್ಲದೆ ವಿವಿಧ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ.

ಏಕತಾ ಪ್ರತಿಮೆ ಅಹಮದಾಬಾದ್ ನಿಂದ 200 ಕಿ.ಮೀ ದೂರದಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟಿನ ಬಳಿ ನಿರ್ಮಾಣವಾಗಿದೆ. ನರ್ಮದಾ ಜಿಲ್ಲೆಯ ನರ್ಮದಾ ಡ್ಯಾಮ್‍ನಿಂದ 3.2 ಕಿ.ಮೀ ದೂರದಲ್ಲಿರುವ `ಸಾಧು ಬೆಟ್’ ದ್ವೀಪದಲ್ಲಿ ಯೋಜನಾ ಸ್ಥಳವಿದೆ. ಅಕ್ಟೋಬರ್ 31ರಂದು ಸರ್ದಾರ್ ವಲ್ಲಭ್‍ಭಾಯಿ ಪಟೇಲ್ ಅವರ ಜನ್ಮದಿನ. ಹೀಗಾಗಿ ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಮೆಯನ್ನು ಅನಾವರಣ ಮಾಡಿದ್ದರು.

Statue of Unity sardar patel 5

ಈ ಏಕತಾ ಪ್ರತಿಮೆ 182 ಮೀಟರ್ ಎತ್ತರವಿದ್ದು, ನಿರ್ಮಾಣಕ್ಕೆ 2 ಸಾವಿರದ 300 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. 25 ಸಾವಿರ ಟನ್ ಕಬ್ಬಿಣ ಬಳಕೆ ಮಾಡಲಾಗಿದ್ದು, 90 ಸಾವಿರ ಟನ್ ಸಿಮೆಂಟ್ ಬಳಕೆ ಮಾಡಲಾಗಿದೆ. ಇದಕ್ಕಾಗಿ 250 ಎಂಜಿನಿಯರ್ಸ್, 3,400 ಕಾರ್ಮಿಕರು ಬರೋಬ್ಬರಿ 33 ತಿಂಗಳ ಕಾಲ ಶ್ರಮವಹಿಸಿದ್ದಾರೆ. ಲೋಹ ಅಭಿಯಾನದ ಮೂಲಕ 1.69 ಲಕ್ಷ ಲೋಹದ ತುಣುಕುಗಳನ್ನು ದೇಶದೆಲ್ಲೆಡೆಯಿಂದ ಸಂಗ್ರಹಿಸಲಾಗಿತ್ತು. ಏಕತಾ ಪ್ರತಿಮೆ ಭಾರತದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ತನ್ನ ವಿಶೇಷತೆಯಿಂದ ಇಂದು ಬ್ರಿಟನ್‍ನ ಪ್ರತಿಷ್ಠ ಪ್ರಶಸ್ತಿಯ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

TAGGED:americagujaratPublic TVSardar Vallabhbhai PatelStatue of Libertystatue of unityಅಮೆರಿಕಾಏಕತಾ ಪ್ರತಿಮೆಗುಜರಾತ್ಪಬ್ಲಿಕ್ ಟಿವಿಸರ್ದಾರ್ ವಲ್ಲಭಾಯ್ ಪಟೇಲ್ಸ್ಟ್ಯಾಚು ಆಫ್ ಲಿಬರ್ಟಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

NAMMA METRO 4
Bengaluru City

ಏ.5ರಂದು 2 ಗಂಟೆಗಳ ಕಾಲ `ನಮ್ಮ ಮೆಟ್ರೋ’ ಸೇವೆ ಸ್ಥಗಿತ

Public TV
By Public TV
14 minutes ago
Raghav Chadha
Latest

ರಾಘವ್‌ ಚಡ್ಡಾಗೆ AAP ಶಾಕ್‌ – ರಾಜ್ಯಸಭೆಯಲ್ಲಿ ಉಪನಾಯಕ ಸ್ಥಾನದಿಂದ ವಜಾ

Public TV
By Public TV
26 minutes ago
CRIME
Crime

ಮಗನ ರೋಗ ವಾಸಿಯಾಗಲು 12 ವರ್ಷದ ಮಗಳನ್ನೇ ಬಲಿಕೊಟ್ಟ ತಾಯಿ – ಬಳಿಕ ರೇಪ್ ಅಂತ ದೂರು

Public TV
By Public TV
39 minutes ago
religious waste
Dakshina Kannada

ಮಂಗಳೂರಿನಲ್ಲಿ 5.5 ಟನ್ ಧಾರ್ಮಿಕ ತ್ಯಾಜ್ಯ ಸಂಗ್ರಹ

Public TV
By Public TV
1 hour ago
lovers suicide chamarajanagara
Chamarajanagar

ನೇಣು ಬಿಗಿದುಕೊಂಡು ಆದಿವಾಸಿ ಸಮುದಾಯದ ಪ್ರೇಮಿಗಳು ಆತ್ಮಹತ್ಯೆ

Public TV
By Public TV
2 hours ago
jain premier league goes big 12 teams auctioned for rs 31 crore
Cricket

ಜೈನ್ ಪ್ರೀಮಿಯರ್ ಲೀಗ್ – ಕೋಟಿ ಕೋಟಿಗೆ ಹರಾಜಾದ ತಂಡಗಳು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?