ಚಾಲೆಂಜಿಂಗ್ ಸ್ಟಾರ್ ಚಿತ್ರಕ್ಕೆ ಹನುಮಂತನ ಗಾನಾಭಿಷೇಕ..!

Public TV
1 Min Read
HANUMATHA

ಬೆಂಗಳೂರು: ಕುರಿಗಾಯಿ ಅಂತಾನೇ ಖ್ಯಾತಿ ಪಡೆದಿರುವ ಸರಿಗಮಪ ಕಾರ್ಯಕ್ರಮದ ಸ್ಪರ್ಧಿ ಹನುಮಂತನಿಗೆ ಈಗಾಗಲೇ ಸಿನಿಮಾದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಇದರ ಬೆನ್ನಲ್ಲೆ ಮತ್ತೊಂದು ಸಿನಿಮಾದಲ್ಲಿ ಹಾಡುವ ಅವಕಾಶ ದೊರೆತಿದೆ.

ಹನುಮಂತನಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಈ ಮೂಲಕ ಮತ್ತೊಮ್ಮೆ ಹನುಮಂತನಿಗೆ ಅದೃಷ್ಟ ಒಲಿದು ಬಂದಿದೆ. ಈ ಹಿಂದೆ ಸರಿಗಮಪ ವೇದಿಕೆಯಲ್ಲಿಯೇ ಯೋಗರಾಜ್ ಭಟ್ರು ಸಿನಿಮಾದಲ್ಲಿ ಹಾಡುವಂತೆ ಅವಕಾಶ ಕೊಟ್ಟಿದ್ದರು. ಭಟ್ರು ಹಾಡಿಗೆ ಟ್ಯೂನ್ ಮಾಡೋದಾಗಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರು ಹೇಳಿದ್ದರು. ಈ ಹಾಡಿಗೆ ಧ್ವನಿಯಾಗಿ ಹನುಮಂತ ಹಾಡಲಿದ್ದಾರೆ. ಹನುಮಂತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಮುಂದಿನ ಚಿತ್ರದಲ್ಲಿ ಹಾಡುತ್ತಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸರಿಗಮಪ ಕಾರ್ಯಕ್ರಮದಲ್ಲಿ ದಾಖಲೆ ಬರೆದ ಹನುಮಂತ!

darshan 1525498868

ನಟ ದರ್ಶನ್ ಮುಂದಿನ ಚಿತ್ರ ‘ರಾಬರ್ಟ್’ ಗಾಗಿ ಅರ್ಜುನ್ ಜನ್ಯಾ ಟ್ಯೂನ್ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಾಡಿಗೆ ಯೋಗರಾಜ್ ಭಟ್ರು ಹಾಡು ಬರೆಯಲಿದ್ದಾರೆ ಎನ್ನಲಾಗುತ್ತಿದೆ. ಇದೇ ಹಾಡನ್ನ ಹನುಮಂತನ ಕೈಯಿಂದಲೇ ಹಾಡಿಸಬೇಕು ಎಂದು ಅರ್ಜುನ್ ಜನ್ಯಾ ತೀರ್ಮಾನ ಮಾಡಿದ್ದಾರಂತೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಚರ್ಚೆಯಾಗುತ್ತಿದೆ.

1 1538629516

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ `ಸರಿಗಮಪ’ ಕಾರ್ಯಕ್ರಮದ ಸ್ಪರ್ಧಿ ಆಗಿರುವ ಕುರಿಗಾಹಿ ಹನುಮಂತ ದಾಖಲೆ ಮಾಡಿದ್ದರು. ಸರಿಗಮಪ ಕಾರ್ಯಕ್ರಮದ ಎಲ್ಲಾ ಸ್ಪರ್ಧಿಗಳಿಗೆ ವಾರಕ್ಕೆ ಇಂತಿಷ್ಟು ಹಣವನ್ನು ಸಂಭಾವನೆಯಾಗಿ ನೀಡುತ್ತಾರೆ. ಅದೇ ರೀತಿ ಹನುಮಂತ ಅವರಿಗೆ 10 ಸಾವಿರ ರೂ.ಯನ್ನು ಸಂಭಾವನೆಯಾಗಿ ಪಡೆಯುತ್ತಿದ್ದರು ಎಂದು ಹೇಳಲಾಗಿತ್ತು. ಆದರೆ ಈಗ ಅವರ ಸಂಭಾವನೆ 25 ರಿಂದ 30 ಸಾವಿರಕ್ಕೆ ಏರಿಕೆಯಾಗಿದೆ ಎಂಬ ಸುದ್ದಿ ಕೇಳಿ ಬಂದಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *