ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಜಗಳ ಇರಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕೀಹೊಳಿ ಹೇಳಿದ್ದಾರೆ.
ನಗರದ ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆಶಿ, ಸಿದ್ದರಾಮಯ್ಯ ನಡುವೆ ಜಗಳ ಇರಬಹುದು, ಅದನ್ನು ನಾನು ಇಲ್ಲ ಎಂದು ಹೇಳುವುದಿಲ್ಲ. ಜಗಳ ಇದ್ದರೂ ಕೂಡ ನಮ್ಮ ಕಾರ್ಯಕರ್ತರು ನಮ್ಮ ಪಕ್ಷದ ಚಿಹ್ನೆಗೆ ಮತ ಹಾಕುವುದು. ಇದರಿಂದ ಪಕ್ಷಕ್ಕೆ ಯಾವುದೇ ನಷ್ಟ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಅಪ್ಪು ಸಮಾಧಿ ಮುಂದೆ ಕಣ್ಣೀರಿಟ್ಟ ಶಕ್ತಿಧಾಮದ ಮಕ್ಕಳು
- Advertisement 2
- Advertisement 3
ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಎಲ್ಲಾ ಪಕ್ಷಗಳಲ್ಲೂ ಗುಂಪುಗಳಿವೆ. ಒಳ ಜಗಳಗಳಿವೆ. ಬಿಜೆಪಿಯಲ್ಲಿ ಬಿ.ಎಸ್ವೈ, ಆರ್.ಎಸ್.ಎಸ್ ಗುಂಪುಗಳಿವೆ. ಜೆಡಿಎಸ್ ಪಕ್ಷದಲ್ಲೂ ಗುಂಪುಗಾರಿಕೆ ಇದೆ ಹೀಗಾಗಿ ಬಣಗಳ ಸಮಸ್ಯೆ ಇದ್ದರೆ ಹೈಕಮಾಂಡ್ ಬಗೆಹರಿಸಲಿದೆ. ನಮ್ಮಲ್ಲಿ ಗುಂಪುಗಾರಿಕೆಯಿಲ್ಲ, ಇಬ್ಬರ ಅಧೀನದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿಯವರು ದೇವರ ಸ್ವರೂಪ: ಶಿವರಾಜ್ ಸಿಂಗ್ ಚೌಹಾಣ್
- Advertisement 4
ಮುಖ್ಯಮಂತ್ರಿ ಯಾರು ಆಗಬೇಕು ಎಂದು ನಮ್ಮ ಶಾಸಕರು ಹಾಗೂ ಹೈಕಮಾಂಡ್ ತೀರ್ಮಾನ ಮಾಡಲಿದ್ದಾರೆ. ಕಾಂಗ್ರೆಸ್ ಅಧಿಕಾರ ಹಿಡಿಯುವುದು ಹಗಲು ಗನಸಲ್ಲ, ರಿಯಲ್ ಕನಸು. ಸಿದ್ಧರಾಮಯ್ಯ ಕಾಂಗ್ರೆಸ್ ತೊರೆಯಬಹುದೆಂದು ಹೇಳಿರುವ ಸಚಿವ ಬಿ.ಸಿ.ಪಾಟೀಲ್ಗೆ ಟಾಂಗ್ ನೀಡಿದ ಸತೀಶ್ ಜಾರಕೀಹೊಳಿ, ನಮ್ಮ ಪಕ್ಷದ ಆಂತರಿಕ ವಿಚಾರ ಅವರಿಗೇಕೆ ಬೇಕು. ಬಿ.ಸಿ.ಪಾಟೀಲ್ ಎಲ್ಲಿ ಇರುತ್ತಾರೆಂಬುದನ್ನು ಮೊದಲು ನೋಡಿಕೊಳ್ಳಲಿ ಎಂದು ವಾಗ್ದಾಳಿ ಮಾಡಿದರು.
ಕಾಂಗ್ರೆಸ್ ನಲ್ಲಿ ಅಗ್ರಗಣ್ಯ ನಾಯಕ ಸಿದ್ದರಾಮಯ್ಯ ಸೇವೆ ಪಕ್ಷಕ್ಕೆ ಅವಶ್ಯಕತೆಯಿದೆ. ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜಂಟಿಯಾಗಿ ಕೆಲಸ ಮಾಡುತ್ತಾರೆ. ಇದರಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಸಾಮಾಜಿಕ ನ್ಯಾಯ ನೀಡಲು ಬದ್ಧವಾಗಿದೆ ನಾವು ಬದ್ದರಾಗಿದ್ದೇವೆ. ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆಂದು ರಮೇಶ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾತನಾಡಿದ ಸತೀಶ್ ಜಾರಕೀಹೊಳಿ ಬಿಜೆಪಿಗೆ ಈಗ ಶಾಸಕರ ಅವಶ್ಯಕತೆ ಇಲ್ಲವಲ್ಲ. ಇನ್ನು 15 ಶಾಸಕರನ್ನು ತೆಗೆದುಕೊಂಡು ಎಲ್ಲಿ ಕೂರಿಸುತ್ತಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದ ಶಾಸಕರು ಯಾರೂ ಸಹ ಪಕ್ಷ ಬಿಟ್ಟು ಹೋಗುವುದೂ ಇಲ್ಲ. ಬೇರೆ ಪಕ್ಷದ ಶಾಸಕರು ಡಿಕೆಶಿ, ಸಿದ್ದರಾಮಯ್ಯ ಸಂಪರ್ಕದಲ್ಲಿದ್ದಾರೆ. ಕೆಲವರು ಕಾಂಗ್ರೆಸ್ ಪಕ್ಷಕ್ಕೆ ಬಂದೇ ಬರುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು. ಈ ವೇಳೆ ಶಾಸಕ ರಘು ಮೂರ್ತಿ, ಮಾಜಿ ಸಂಸದ ಚಂದ್ರಪ್ಪ, ತಾಜ್ ಪೀರ್ ಸೇರಿದಂತೆ ಇತರರು ಇದ್ದರು.