ರಾಯಚೂರು: ಟಾಪ್ ಲೀಡರ್ಗಳಿಗೆ ಟಾರ್ಗೆಟ್ ಮಾಡುವುದು ರಾಜಕೀಯದಲ್ಲಿ ಸ್ವಾಭಾವಿಕ, ಒಂದು ಪಕ್ಷದವರು ಇನ್ನೊಂದು ಪಕ್ಷದವರನ್ನು ಟಾರ್ಗೆಟ್ ಮಾಡುತ್ತಾರೆ. ನಾವು ಬಿಜೆಪಿಯವರಿಗೆ (BJP) ಟಾರ್ಗೆಟ್ ಮಾಡುತ್ತಿರುತ್ತೇವೆ, ಅವರು ನಮಗೆ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದರು.
ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳು ಬಹಳ ಇದ್ದಾರೆ. ಭಿನ್ನಮತ ಆಗದ ಹಾಗೆ ಜಿಲ್ಲಾವಾರು ಸಭೆ ಮಾಡುತ್ತೇವೆ. ಈ ತಿಂಗಳು ಅರ್ಧದಷ್ಟು ಟಿಕೆಟ್ ಘೋಷಣೆ ಮಾಡಲೇಬೇಕಿದೆ ಎಂದ ಅವರು, ರಮೇಶ್ ಜಾರಕಿಹೊಳಿ (Ramesh Jarkiholi) ಸಿಡಿ ವಿಚಾರದ ಕುರಿತು ಪ್ರತಿಕ್ರಿಯಿಸಿ, ಅದು ಅವರ ವೈಯಕ್ತಿಕ ವಿಚಾರ ವೈಯಕ್ತಿಕವಾಗಿಯೇ ಇರುತ್ತದೆ ಎಂದು ತಿಳಿದರು.
ಸಿದ್ದರಾಮಯ್ಯ (Siddaramaiah) ಸರ್ಕಾರವಿದ್ದಾಗಲೇ ಹೆಚ್ಚು ಹಿಂದೂಗಳ ಕೊಲೆಯಾಗಿದೆ ಎನ್ನುವ ಕಟೀಲ್ ಹೇಳಿಕೆ ತಿರುಗೇಟು ನೀಡಿದ ಅವರು, ನಳಿನ್ ಕುಮಾರ್ ಕಟೀಲ್ (Nalin Kumar Kateel) ಮಾತಿಗೆ ಹೆಚ್ಚು ಮಹತ್ವ ಕೊಡುವ ಅವಶ್ಯಕತೆಯಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗಲೇ ಹಿಂದೂಗಳಿಗೆ ಹೆಚ್ಚು ರಕ್ಷಣೆ ಸಿಕ್ಕಿದೆ. ಮಂಗಳೂರು, ಉಡುಪಿ, ಕಾರವಾರದಲ್ಲಿ ನಮ್ಮ ಅವಧಿಯಲ್ಲೇ ಹೆಚ್ಚು ರಕ್ಷಣೆ ಸಿಕ್ಕಿದೆ ಆಗ ಶಾಂತವಾಗಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಸಮಸ್ಯೆಯಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಜೆಡಿಎಸ್ ಶಾಸಕ ಶಿವಲಿಂಗೇಗೌಡ 100% ಕಾಂಗ್ರೆಸ್ ಸೇರ್ಪಡೆಯಾಗ್ತಾರೆ: ಸಿದ್ದರಾಮಯ್ಯ
ಪೇಶ್ವೆ ವಂಶದವರಿಂದ ಶಿವಾಜಿ ಹತ್ಯೆ ಕುರಿತ ಹೆಚ್ಡಿಕೆ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಸಮಗ್ರ ತನಿಖೆ ಹಾಗೂ ಚರ್ಚೆಯಾಗಬೇಕು. ಯಾರೋ ಹೇಳಿದ ಕೂಡಲೇ ಒಂದು ನಿರ್ಧಾರಕ್ಕೆ ಬರಲು ಆಗುವುದಿಲ್ಲ. ಚರ್ಚೆ ಮಾಡಲು ಸಾಕಷ್ಟು ಅವಕಾಶಗಳಿವೆ ಚರ್ಚೆಯಾಗಬೇಕು ಎಂದರು. ಇದನ್ನೂ ಓದಿ: ಅನಾರೋಗ್ಯ ಪೀಡಿತ ತಂದೆಯನ್ನು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ 6ರ ಬಾಲಕ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k