Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರದೇಶಿ ಟಿಪ್ಪುವನ್ನು ಹೊಗಳಿ, ಸಾವರ್ಕರ್ ಫೋಟೋ ಕಂಡರೂ ಉರಿದು ಬೀಳುವವರು ದೇಶ ವಿರೋಧಿಗಳು: ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪರದೇಶಿ ಟಿಪ್ಪುವನ್ನು ಹೊಗಳಿ, ಸಾವರ್ಕರ್ ಫೋಟೋ ಕಂಡರೂ ಉರಿದು ಬೀಳುವವರು ದೇಶ ವಿರೋಧಿಗಳು: ಬಿಜೆಪಿ

Bengaluru City

ಪರದೇಶಿ ಟಿಪ್ಪುವನ್ನು ಹೊಗಳಿ, ಸಾವರ್ಕರ್ ಫೋಟೋ ಕಂಡರೂ ಉರಿದು ಬೀಳುವವರು ದೇಶ ವಿರೋಧಿಗಳು: ಬಿಜೆಪಿ

Public TV
Last updated: December 19, 2022 5:11 pm
Public TV
Share
3 Min Read
Savarkar Photo 1
SHARE

ಬೆಂಗಳೂರು: ಅರ್ಜುನನನ್ನು ಶಂಕಿಸಬಹುದು. ಆದರೆ ಗಾಂಢೀವವನ್ನು ಶಂಕಿಸಬಹುದೇ? ಸಾವರ್ಕರ್ ಎಂದರೆ ಗಾಂಢೀವ! ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕಾಂಗ್ರೆಸ್‍ಗೆ (Congress) ಜನರಿಗಿಂತ ನಿಮ್ಹಾನ್ಸ್ ಆಸ್ಪತ್ರೆಯ ನುರಿತ ಮನೋವೈದ್ಯರ ಅವಶ್ಯಕತೆ ಹೆಚ್ಚಾಗಿದೆ. ಪರದೇಶಿ ಟಿಪ್ಪುವನ್ನು (Tippu) ಹೊಗಳುವವರು, ದೇಶಪ್ರೇಮಿ ಸಾವರ್ಕರ್ (Savarkar) ಫೋಟೋ ಕಂಡರೂ ಉರಿದು ಬೀಳುವವರು ಒಂದೋ ದೇಶ ವಿರೋಧಿಯಾಗಿರಬೇಕು ಅಥವಾ ಮಾನಸಿಕ ಅಸ್ವಸ್ಥರಾಗಿರಬೇಕು ಎಂದು ಬಿಜೆಪಿ (BJP) ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.

BJP

ಟ್ವೀಟ್‍ನಲ್ಲಿ ಏನಿದೆ?
1970ರಲ್ಲಿ ಇಂದಿರಾ ಗಾಂಧಿ (Indira Gandhi) ಸರ್ಕಾರ ವೀರ ಸಾವರ್ಕರ್ ಅಂಚೆ ಚೀಟಿ ಬಿಡುಗಡೆ ಮಾಡಿತ್ತು. ಸಾವರ್ಕರ್ ಕುರಿತು ಡಾಕ್ಯುಮೆಂಟರಿ ನಿರ್ಮಾಣಕ್ಕಾಗಿ ಸಾವರ್ಕರ್ ಸ್ಮಾರಕ ಸಮಿತಿಗೆ ಸ್ವತಃ ಇಂದಿರಾ ಗಾಂಧಿ ದೇಣಿಗೆ ನೀಡಿದ್ದರು. ಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನಮಂತ್ರಿ ಬದಲಾದಂತೆ ಬದಲಾಗುವುದೇ? ಸಾವರ್ಕರ್ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಖುದ್ದು ಸಾವರ್ಕರ್ ಹೋರಾಟವನ್ನು ಕೊಂಡಾಡಿ ಅವರೊಬ್ಬ ಅದ್ಭುತ ಸ್ವಾತಂತ್ರ್ಯ ಹೋರಾಟಗಾರ ಎಂದು ಶ್ಲಾಘಿಸಿ ಪತ್ರ ಬರೆದಿದ್ದರು. ಇದನ್ನೂ ಓದಿ: ಬೆಳಗಾವಿ ಅಧಿವೇಶನ: ಸಾವರ್ಕರ್‌ ಸೇರಿ 7 ಮಂದಿ ಫೋಟೋ ಅನಾವರಣ

CONGRESS 4

ಇದರ ಜೊತೆಗೆ ವೀರ ಸಾವರ್ಕರ್ ಸ್ಮಾರಕ ನಿಧಿಗೆ ವೈಯುಕ್ತಿಕವಾಗಿ 11,000 ರೂಪಾಯಿ ದೇಣಿಗೆ ಕೂಡಾ ನೀಡಿದ್ದರು. ಸಾವರ್ಕರ್ ಅಸ್ಪೃಶ್ಯತಾ ನಿವಾರಣೋಪಾಯಗಳು ಅಂಬೇಡ್ಕರ್ ಅವರಿಗೆ ಪ್ರೇರಣೆಯಾಗಿತ್ತು, ಆದರೆ ಕಾಂಗ್ರೆಸ್ಸಿಗರಿಗೆ ಆಗಲೇ ಇಲ್ಲ! ‘ಅಸ್ಪೃಶ್ಯತೆ ನಿವಾರಿಸಲು ನನ್ನ ಆಶಯಕ್ಕನುಗುಣವಾಗಿ ಸಮಾಜದೊಳಗಿದ್ದು ಶ್ರಮಿಸುತ್ತಿರುವ ಕೆಲವೇ ಕೆಲವು ಮಂದಿಯಲ್ಲಿ ಸಾವರ್ಕರ್ ಕೂಡಾ ಒಬ್ಬರು’ ಎಂದು ಅಂಬೇಡ್ಕರ್ ಕೊಂಡಾಡಿದ್ದರು. ತಾಯಿ ಭಾರತಿಗೆ ಕನ್ನಡದಾರತಿ ಎತ್ತುವೆ ಎಂದ ಆಲೂರು ವೆಂಕಟರಾಯರಿಗೆ, ಭಾರತ ಜನನಿಯ ತನುಜಾತೆ ಎಂದ ಕುವೆಂಪುರವರಿಗೆ, ಭಾಷೆಯಲ್ಲ, ಕಾವ್ಯವೇ ನವಮೇಘರೂಪ ಎಂದ ಬೇಂದ್ರೆಯವರಿಗೆ ಪ್ರೇರಣೆಯಾದವರು ಸಾವರ್ಕರ್. ಅಂಥಹ ವೀರ ಸಾವರ್ಕರ್ ಅವರು ಕಾಂಗ್ರೆಸ್ಸಿಗೆ ಮಾತ್ರ ವಿರೋಧಿಸುವುದೇಕೆ? ಸಿಂಗಾಪುರದ “ಫ್ರೀ ಇಂಡಿಯಾ ರೇಡಿಯೋ” ಭಾಷಣದಲ್ಲಿ ನೇತಾಜಿ, “ರಾಜಕೀಯ ಪ್ರಬುದ್ಧತೆಯಿಲ್ಲದ ಕಾಂಗ್ರೆಸ್ ಸೈನಿಕರನ್ನು ಹಣಕ್ಕಾಗಿ ಮಾರಿಕೊಂಡವರು ಎಂದು ಹೀಯಾಳಿಸುತ್ತಿರುವಾಗ ಸಾವರ್ಕರ್ ಸೇನೆಗೆ ಸೇರಿ ಎನ್ನುತ್ತಿರುವುದು ಸ್ಫೂರ್ತಿದಾಯಕ” ಎಂದಿದ್ದರು.

ಸಾವರ್ಕರ್ ನಿಂದಕರೆಲ್ಲರೂ ನೇತಾಜಿ ನಿಂದಕರೂ ಆಗಿದ್ದಾರೇಕೆಂದು ಈಗ ತಿಳಿಯಿತೇ? ಕಾಂಗ್ರೆಸ್ ಇಂದು ಸಾವರ್ಕರ್‌ರನ್ನು ವಿರೋಧಿಸಬಹುದು. ಆದರೆ ಸಾವರ್ಕರ್‌ರನ್ನು ಅಪಾರವಾಗಿ ಪ್ರೀತಿಸುವವರು, ಗೌರವಿಸುವವರ ಸಾಲಲ್ಲಿ ಗಾಂಧೀಜಿಯೂ ನಿಲ್ಲುತ್ತಾರೆ. ಗಾಂಧೀಜಿ ಪತ್ರಗಳಲ್ಲಿ ಸಾವರ್ಕರ್‌ರನ್ನು ಪ್ರೀತಿಯಿಂದ ‘ಭಾಯ್’ ಎಂದು ಸಂಬೋಧಿಸುತ್ತಿದ್ದರು. ಕಾಂಗ್ರೆಸ್ ಗಾಂಧೀಜಿಯನ್ನೂ ವಿರೋಧಿಸುವುದೇ? ಒಂದು ಸಮುದಾಯದ ಓಲೈಕೆಯಲ್ಲೇ ನಿರತರಾಗಿರುವ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್‍ಗೆ ಟಿಪ್ಪು, ಶಾರಿಕ್‍ನಂಥವರೇ ದೇವರಾಗಿದ್ದಾರೆಯೇ ವಿನಾ, ದಲಿತರಿಗೂ ಪತಿತ ಪಾವನ ಮಂದಿರ ಕೊಟ್ಟ ಸಾವರ್ಕರ್ ದೇವರಾಗಲಿಲ್ಲ. ಇದನ್ನೂ ಓದಿ: ನಾವು ಹಿಂದೂಗಳೇ – ಹುಟ್ಟಿದ್ದು ಹಿಂದೂವಾಗಿ ಸಾಯುವುದು ಹಿಂದೂವಾಗಿಯೇ: ಡಿಕೆಶಿ

ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ @INCKarnataka ಕ್ಕೆ ಜನರಿಗಿಂತ ನಿಮ್ಹಾನ್ಸ್‌ ಆಸ್ಪತ್ರೆಯ ನುರಿತ ಮನೋವೈದ್ಯರ ಅವಶ್ಯಕತೆ ಹೆಚ್ಚಾಗಿದೆ.

ಪರದೇಶಿ ಟಿಪ್ಪುವನ್ನು ಹೊಗಳುವವರು, ದೇಶಪ್ರೇಮಿ ಸಾವರ್ಕರ್‌ ಫೋಟೊ ಕಂಡರೂ ಉರಿದು‌ ಬೀಳುವವರು ಒಂದೋ ದೇಶವಿರೋಧಿಯಾಗಿರಬೇಕು ಅಥವಾ ಮಾನಸಿಕ ಅಸ್ವಸ್ಥರಾಗಿರಬೇಕು!

11/11#AntiNationalCongress

— BJP Karnataka (@BJP4Karnataka) December 19, 2022

ಸಮಾಜವಾದಿ ಸಿದ್ದರಾಮಯ್ಯ ಈಗೆಲ್ಲಿ ಹೋದರು? ಮಾನ್ಯ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೇ, ಸಾವರ್ಕರ್ ಅವರನ್ನು ಓದುವುದು ಬೇಡ. ಕೇವಲ ನಿಮ್ಮ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಮಾತನ್ನು ನೀವು ಅರ್ಥ ಮಾಡಿಕೊಂಡಿದ್ದರೂ, ಸಾವರ್ಕರ್ ಅವರ ಭಾವಚಿತ್ರಕ್ಕೆ ನೀವೇ ಹಾರ ಹಾಕುತ್ತಿದ್ದಿರೇನೋ! ಮಸ್ತಕದಲ್ಲೂ ಏನಿಲ್ಲ, ಪುಸ್ತಕವೂ ಓದಲ್ಲ ಎನ್ನುವವರಿಗೆ ಏನೆನ್ನೋಣ? ಅಂಡಮಾನಿನ ಕತ್ತಲ ಕೋಣೆಯಲ್ಲಿ ವೀರ ಸಾವರ್ಕರ್ ಕಾಲ ಕಳೆಯದಿರುತ್ತಿದ್ದರೆ, ಅವರ ಚಿಂತನೆಗಳು ರಾಷ್ಟ್ರದಲ್ಲಿ ಹರಿಯದಿರುತ್ತಿದ್ದರೆ ಭಾರತ 1947 ರಲ್ಲಿ ಸ್ವತಂತ್ರವಾಗುತ್ತಲೂ ಇರಲಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿ ಇರುತ್ತಲೂ ಇರಲಿಲ್ಲ! ಅಂದು ವೀರ ಸಾವರ್ಕರ್ ಕತ್ತಲ ಕೋಣೆಯಲ್ಲಿ ಕಾಲ ಕಳೆಯದಿರುತ್ತಿದ್ದರೆ, ಇಂದು ವಿರೋಧಿಸುವವರಿಗೆ ಧ್ವನಿಯೇ ಇರುತ್ತಿರಲಿಲ್ಲ. ಇಂದಿನ ಆಡಳಿತದ ಯಾವ ಸಂಕೇತಗಳೂ ಇರುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಸುಳ್ಳಿನ ರಾಜ – ನಮ್ಮ ಒತ್ತಾಯದಿಂದ ಅಧಿವೇಶನ ನಡೆಯುತ್ತಿದೆ: ಡಿಕೆಶಿ ಕಿಡಿ

Live Tv
[brid partner=56869869 player=32851 video=960834 autoplay=true]

TAGGED:belagavibjpcongressKarnataka Assembly Winter Sessionsavarkar photoಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿಸಾವರ್ಕರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Tim David 03
Cricket

18 ವರ್ಷಗಳ ಇತಿಹಾಸ ಬದಲಿಸಿದ ಆರ್‌ಸಿಬಿ ಬಾಯ್ಸ್‌ – ಒಂದೇ ಮ್ಯಾಚ್‌ ಹಲವು ದಾಖಲೆ ನುಚ್ಚುನೂರು

Public TV
By Public TV
9 minutes ago
Tim David
Cricket

ಆರ್‌ಸಿಬಿ ಬ್ಯಾಟರ್‌ಗಳ ಆರ್ಭಟಕ್ಕೆ ಸಿಎಸ್‌ಕೆ ಸುಸ್ತು – 106 ಮೀಟರ್‌ ಸಿಕ್ಸರ್‌ ಬಾರಿಸಿ ಬೈಬೈ ಹೇಳಿದ ಡೇವಿಡ್‌

Public TV
By Public TV
24 minutes ago
Auto Gas Problem
Bengaluru City

ಸರ್ಕಾರದ ನಡೆಗೆ ಆಟೋ ಸಂಘಟನೆಗಳ ಆಕ್ರೋಶ – ಇದೇ ವಾರ ಸಿಎಂ, ಸಚಿವರ ಭೇಟಿಗೆ ನಿರ್ಧಾರ

Public TV
By Public TV
30 minutes ago
Manuscripts
Latest

ಸಾವಿರಾರು ವರ್ಷಗಳ ಇತಿಹಾಸವಿರುವ ಹಸ್ತಪ್ರತಿ ರಕ್ಷಣೆಗೆ ʻಜ್ಞಾನ ಭಾರತಮ್‌ʼ ಅಭಿಯಾನ

Public TV
By Public TV
8 hours ago
Alexander Leonov
Latest

ಬ್ರಹ್ಮೋಸ್ ಕ್ಷಿಪಣಿ ಅಭಿವೃದ್ಧಿಪಡಿಸಿದ್ದ ರಷ್ಯಾದ ಅಲೆಕ್ಸಾಂಡರ್ ಲಿಯೊನೊವ್ ನಿಧನ

Public TV
By Public TV
8 hours ago
rcb
Bengaluru City

ತವರಲ್ಲಿ ಅಬ್ಬರಿಸಿ ಬೊಬ್ಬಿರಿದ RCB – ಚೆನ್ನೈ ವಿರುದ್ಧ 43 ರನ್‌ಗಳ ಭರ್ಜರಿ ಜಯ – ಪಾಯಿಂಟ್‌ ಪಟ್ಟಿಯಲ್ಲಿ ನಂ.1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?