Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಂಡೀಪುರ ಉಳಿಸಿ – ಅಭಿಮಾನಿಗಳಲ್ಲಿ ‘ದಚ್ಚು’ ಮನವಿ

Public TV
Last updated: February 24, 2019 6:50 pm
Public TV
Share
2 Min Read
darshan bandipura copy
SHARE

ಬೆಂಗಳೂರು/ಚಾಮರಾಜನಗರ: ಬಂಡೀಪುರ ಹುಲಿರಕ್ಷಿತಾರಣ್ಯ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನ್ಯಜೀವಿ ಸಂಕುಲಕ್ಕೆ ತೊಂದರೆಯಾಗಿದ್ದು, ಬೆಂಕಿ ನಂದಿಸಲು ಸ್ವಯಂ ಸೇವಕರು ಸರ್ಕಾರದ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ನಟ ದರ್ಶನ್ ಅಭಿಮಾನಿಗಳಲ್ಲಿ ವಿನಂತಿ ಮಾಡಿದ್ದಾರೆ.

ಕಳೆದ 5 ದಿನಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಅಗ್ನಿಶಾಮಕ ಇಲಾಖೆ ಸೇರಿದಂತೆ ಹಲವು ಸ್ವಯಂ ಸೇವಕರು ಈಗಾಗಲೇ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಸತತ ಪ್ರಯತ್ನ ನಡುವೆಯೂ ಬೆಂಕಿ ನರ್ತನ ಮುಂದುವರಿದಿದ್ದು, ಅನೇಕ ಪ್ರಾಣಿಗಳು ಬೆಂಕಿಯಲ್ಲಿ ಸಿಕ್ಕಿ ಭಸ್ಮವಾಗಿದೆ. ಈ ಕುರಿತಂತೆ ದರ್ಶನ ಅವರು ಕೂಡ ಫೋಟೋ ಟ್ವೀಟ್ ಮಾಡಿದ್ದು, ಮೊಲವೊಂದು ಸುಟ್ಟು ಕರಕಲಾಗಿರುವ ದೃಶ್ಯವನ್ನು ಕಾಣಬಹುದಾಗಿದೆ.

ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ pic.twitter.com/ES0ZsB6Eap

— Darshan Thoogudeepa (@dasadarshan) February 24, 2019

ಸಫಾರಿ ಬಂದ್:
ಇಂದು ಬೆಳಗಿನ ವೇಳೆ ನಿಯಂತ್ರಣಕ್ಕೆ ಬಂದಿದ್ದ ಬೆಂಕಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ಕಳೆದ ಐದು ದಿನಗಳಿಂದ ಬಂಡೀಪುರದ ಗೋಪಾಲಸ್ವಾಮಿ ಬೆಟ್ಟ ಮತ್ತು ಕುಂದಕೆರೆ ವಲಯದ ಸಾವಿರಾರು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ. ಇದೀಗ ಮತ್ತೆ ಗೋಪಾಲಸ್ವಾಮಿ ಬೆಟ್ಟದ ವಲಯದಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಅನಾಹುತವನ್ನೇ ಸೃಷ್ಟಿಸಿದೆ. ಪರಿಣಾಮ ಅರಣ್ಯದಲ್ಲಿ ಒಂದು ವಾರದ ಕಾಲ ಸಫಾರಿಯನ್ನು ಸ್ಥಗಿತಗೊಳಿಸಲಾಗಿದೆ.

bandipur national park

ಹಸಿರಿನಿಂದ ಕಂಗೊಳಿಸುತ್ತಿದ್ದ ಬಂಡೀಪುರ ಹುಲಿರಕ್ಷಿತಾರಣ್ಯ ಇದೀಗ ಬೆಂದ ಕಾಡಾಗಿದ್ದು, ಹುಲಿ, ಕರಡಿ, ಚಿರತೆ, ಆನೆ, ಜಿಂಕೆ ಮೊದಲಾದ ವನ್ಯಪ್ರಾಣಿಗಳ ಆವಾಸ ಸ್ಥಾನವಾದ ಬಂಡೀಪುರ ಇದೀಗ ಅಕ್ಷರಶ: ಸ್ಮಶಾನದಂತೆ ಗೋಚರಿಸುತ್ತಿದೆ. ಸ್ಥಳೀಯರ ಪ್ರಕಾರ ಸುಮಾರು ಹತ್ತು ಸಾವಿರ ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದ್ದಾರೆ, ಅಪರೂಪದ ಸರಿಸೃಪಗಳು ಕೂಡ ಬೆಂಕಿಯ ಕೆನ್ನಾಲಿಗೆ ಭಸ್ಮವಾಗಿದೆ.

ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ pic.twitter.com/3fjUpWJWM4

— Darshan Thoogudeepa (@dasadarshan) February 24, 2019

ಕಳೆದ ಐದು ದಿನಗಳಿಂದ ನೂರಾರು ಅರಣ್ಯ ಸಿಬ್ಬಂದಿ, ಅಗ್ನಿಶಾಮಕದಳ ಹಾಗು ಸ್ವಯಂ ಸೇವಕರ ಸತತ ಕಾರ್ಯಾಚರಣೆ ಫಲವಾಗಿ ಬೆಂಕಿ ಹತೋಟಿ ಪ್ರಯತ್ನಿಸುತ್ತಿದ್ದಾರೆ. ಆದರೆ ಗಾಳಿಯ ರಭಸಕ್ಕೆ ವ್ಯಾಪಕವಾಗಿ ಹರಡುತ್ತಿದೆ.

ಅಧಿಕ ನಷ್ಟ: ಬೆಂಕಿಯ ನರ್ತನಕ್ಕೆ ಆಪಾರ ಪ್ರಮಾಣದ ವನ್ಯ ಸಂಪತ್ತು ನಾಶವಾಗಿ ನಷ್ಟ ಅನುಭವಿಸಿದೆ. ಇದರೊಂದಿಗೆ ಸಫಾರಿಗೆ ಆಗಮಿಸುತ್ತ ಸಾವಿರಾರು ಪ್ರವಾಸಿಗರಿಗೂ ನಿರಾಸೆಯಾಗಿದ್ದು, ಸಫಾರಿ ನಿಷೇಧ ಮಾಡಿರುವುದರಿಂದ ಅರಣ್ಯ ಇಲಾಖೆಗೆ ಲಕ್ಷಾಂತರ ರೂಪಾಯಿ ಆದಾಯ ಕೂಡ ನಷ್ಟವಾಗಿದೆ.

bandipur national park 1

ಕಳೆದ ವರ್ಷ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಯಾವುದೇ ಬೆಂಕಿ ಅವಘಡ ಸಂಭವಿಸಿರಲಿಲ್ಲ. ಆದರೆ ಈ ವರ್ಷದ ಬೇಸಿಗೆ ಆರಂಭದಲ್ಲೇ ಕಾಡ್ಗಿಚ್ಚಿಗೆ ಸಾವಿರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿರುವುದು ಆತಂಕ ಮೂಡಿಸಿದೆ.

 

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:actor DarshanBandipur National ParkbandipurafireForestryPublic TVTiger reservetwitterಕಾಡ್ಗಿಚ್ಚುಟ್ವಿಟ್ಟರ್ನಟ ದರ್ಶನ್ಪಬ್ಲಿಕ್ ಟಿವಿಬಂಡೀಪುರಬೆಂಕಿಹುಲಿರಕ್ಷಿತಾರಣ್ಯ
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
37 minutes ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
16 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
16 minutes ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
18 minutes ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
39 minutes ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
1 hour ago
weather
Chikkamagaluru

ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

Public TV
By Public TV
2 hours ago
Electronic City Flyover Accident copy
Bengaluru City

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?