ನವದೆಹಲಿ: ಜಿಬಿಎ ಚುನಾವಣೆಗೆ (GBA Election) ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ (Supreme Court) ಇಂದು ನಡೆಯಲಿದೆ.
ಜೂನ್ ತಿಂಗಳೊಳಗೆ ಜಿಬಿಎ ಪಂಚ ಪಾಲಿಕೆಗೆ ಚುನಾವಣೆ ನಡೆಸಬೇಕು ಎಂದು ಜನವರಿಯಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ, ಕರ್ನಾಟಕದಲ್ಲಿ ಜನಗಣತಿ ಮತ್ತು ಎಸ್ಐಆರ್ ಕಾರ್ಯ ನಡೆಯುತ್ತಿದೆ. ಸರ್ಕಾರಿ ನೌಕರರು ಕರ್ತವ್ಯದಲ್ಲಿ ತೊಡಗಿದ್ದಾರೆ. ಇದರಿಂದ ಚುನಾವಣೆ ನಡೆಸಲು ಕಷ್ಟವಾಗುತ್ತದೆ. ಹೀಗಾಗಿ, ಚುನಾವಣೆ ಮುಂದೂಡಿಕೆ ಮಾಡುವಂತೆ ರಾಜ್ಯ ಸರ್ಕಾರ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಇದನ್ನೂ ಓದಿ: ವೆಲ್ಕಮ್ ಮೈ ಫ್ರೆಂಡ್: ರೋಮ್ಗೆ ಭೇಟಿ ಕೊಟ್ಟ ಮೋದಿ ಜೊತೆಗಿನ ಸೆಲ್ಫಿ ಹಂಚಿಕೊಂಡ ಮೆಲೋನಿ
ಚುನಾವಣೆ ನಡೆಸಲು ಹೆಚ್ಚುವರಿ ಮೂರು ತಿಂಗಳ ಸಮಯಕ್ಕೆ ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ ಮನವಿ ಮಾಡಿತ್ತು. ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠ ಈ ಸಂಬಂಧ ವಿಚಾರಣೆ ನಡೆಸಲಿದೆ.

