Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಲ್ಮೀಕಿ ನಿಗಮದಂತೆ ಪ್ರವಾಸೋದ್ಯಮ ಇಲಾಖೆಯಲ್ಲೂ ಗೋಲ್ಮಾಲ್‌ – 2.47 ಕೋಟಿ ರೂ. ಅಕ್ರಮ ಹಣ ವರ್ಗಾವಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ವಾಲ್ಮೀಕಿ ನಿಗಮದಂತೆ ಪ್ರವಾಸೋದ್ಯಮ ಇಲಾಖೆಯಲ್ಲೂ ಗೋಲ್ಮಾಲ್‌ – 2.47 ಕೋಟಿ ರೂ. ಅಕ್ರಮ ಹಣ ವರ್ಗಾವಣೆ

Bagalkot

ವಾಲ್ಮೀಕಿ ನಿಗಮದಂತೆ ಪ್ರವಾಸೋದ್ಯಮ ಇಲಾಖೆಯಲ್ಲೂ ಗೋಲ್ಮಾಲ್‌ – 2.47 ಕೋಟಿ ರೂ. ಅಕ್ರಮ ಹಣ ವರ್ಗಾವಣೆ

Public TV
Last updated: July 13, 2024 10:02 pm
Public TV
Share
3 Min Read
Scam in Bagalkot tourism department 1
SHARE

– ಕಳೆದ ಅಕ್ಟೋಬರ್‌ 28 ರಿಂದ ಈ ಫೆಬ್ರವರಿ 22 ರವರೆಗೆ ವರ್ಗಾವಣೆ
– 3 ಖಾತೆಯಿಂದ ಒಟ್ಟು 54 ಬಾರಿ ವರ್ಗಾವಣೆ
– ನಿರ್ಮಿತಿ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಗೂ ದುಡ್ಡು

ಬಾಗಲಕೋಟೆ: ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣ (Valmiki Scam) ಸರ್ಕಾರದ ಕೊರಳಿಗೆ ಕುಣಿಕೆಯಾಗುತ್ತಿದೆ. ಈಗಾಗಲೇ ಸಚಿವ ಬಿ. ನಾಗೇಂದ್ರ (Nagendra) ತಲೆದಂಡ ಕೂಡ ಆಗಿದ್ದು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ ಮಧ್ಯೆ ಅದೇ ಮಾದರಿಯಲ್ಲಿ ಮತ್ತೊಂದು ಇಲಾಖೆಗೆ ಸಂಬಂಧಿಸಿದ ಬ್ಯಾಂಕ್ ಖಾತೆಯಲ್ಲಿ ವಂಚನೆ ಆಗಿರುವುದು ಬೆಳಕಿಗೆ ಬಂದಿದೆ.

ಬಾಗಲಕೋಟೆ (Bagalkot) ಜಿಲ್ಲಾ ಪ್ರವಾಸೋದ್ಯಮ (Tourism Department) ಇಲಾಖೆಯಲ್ಲಿ 2,47,73,999 ರೂ. ವಂಚನೆಯಾಗಿದ್ದು, ಬಾಗಲಕೋಟೆ ಐಡಿಬಿಐ ಬ್ಯಾಂಕ್‌ ಖಾತೆಗಳ ಮೂಲಕ ಹಣ ವಿವಿಧ ಖಾತೆಗೆ ಅಕ್ರಮವಾಗಿ ವರ್ಗಾವಣೆಯಾಗಿದೆ. ಅಕ್ರಮ ಬೆಳಕಿಗೆ ಬರುತ್ತಿದಂತೆ ಜುಲೈ 11 ರಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಗೋಪಾಲ ಹಿತ್ತಲಮನಿ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಬಾಗಲಕೋಟೆ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.

Scam in Bagalkot tourism department 3

ವಂಚನೆ ಹೇಗೆ?
ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು ಮೂರು ಖಾತೆಗಳನ್ನು ಬಾಗಲಕೋಟೆ ಐಡಿಬಿಐ ಬ್ಯಾಂಕ್‌ನಲ್ಲಿ (IDBI) ನಿರ್ವಹಣೆ ಮಾಡಲಾಗುತ್ತಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರ (ಹೆಡ್‌) ಹೆಸರಲ್ಲಿ ಐಡಿಬಿಐ ಬ್ಯಾಂಕ್ ನಲ್ಲಿ ಖಾತೆ ತೆರೆಯಲಾಗಿದೆ. ಮೂರು ಬ್ಯಾಂಕ್‌ ಖಾತೆಯಿಂದ ಕಳೆದ ಅಕ್ಟೋಬರ್‌ 28 ರಿಂದ ಈ ಫೆಬ್ರವರಿ 22 ರವರೆಗೆ ವಿವಿಧ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಇದನ್ನೂ ಓದಿ: ಅನಂತ್‌ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!

Scam in Bagalkot tourism department 2

ಯಾವ ಖಾತೆಯಿಂದ ಎಷ್ಟು?
1071104000160063 ಖಾತೆ ಮೂಲಕ 1,35,96,500 ರೂ., 1071104000165228 ಮೂಲಕ 1,01,33,750 ರೂ., ಮೂರನೇ ಖಾತೆ 1071104000165501 ಯಿಂದ 10,43,749 ರೂ. ಹಣ ವರ್ಗಾವಣೆಯಾಗಿದೆ. ಒಂದು ಖಾತೆಯಿಂದ 28 ಬಾರಿ, ಮತ್ತೊಂದು ಖಾತೆಯಿಂದ 25 ಬಾರಿ, ಮೂರನೇ ಖಾತೆಯಿಂದ ಒಂದು ಬಾರಿ ಸೇರಿ ಒಟ್ಟು 54 ಬಾರಿ ಹಣ ವರ್ಗಾವಣೆಯಾಗಿದೆ.

ಪ್ರವಾಸೋದ್ಯಮ ಇಲಾಖೆ ಅನುಮತಿಯಿಲ್ಲದೆ, ಅಧಿಕಾರಿಗಳಿಗೆ ಗೊತ್ತಿಲ್ಲದಂತೆ ಇಲಾಖೆಗೆ ಸಂಬಂಧಿಸಿದ ಹಣವನ್ನು ಆರೋಪಿಗಳು ತಮಗೆ ಬೇಕಾದ ರೀತಿಯಲ್ಲಿ ವರ್ಗಾವಣೆ ಮಾಡಿದ್ದಾರೆ. ಇಲಾಖೆಯ ಹಣ ತೆಗೆದುಕೊಂಡು ಸರಕಾರಕ್ಕೆ ಮೋಸ ಮಾಡಿದ್ದಾರೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಇನ್ನು ಮುಂದೆ ಕ್ರೆಡಿಟ್‌ ಕಾರ್ಡ್‌ನಂತೆ ಯುಪಿಐ ಬಳಸಿ- ಇದು ಹೇಗೆ ಕೆಲಸ ಮಾಡುತ್ತೆ?

bagalkot sp amarnath reddy
ಬಾಗಲಕೋಟೆ ಎಸ್‌ಪಿ  ಅಮರನಾಥ ರೆಡ್ಡಿ

ಎಸ್‌ಪಿ ಹೇಳಿದ್ದೇನು?
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಬಾಗಲಕೋಟೆ ಎಸ್‌ಪಿ  ಅಮರನಾಥ ರೆಡ್ಡಿ, ಪ್ರವಾಸೋದ್ಯಮ ಇಲಾಖೆಯ ಖಾತೆಯಿಂದ ನಿರ್ಮಿತಿ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಗೂ ದುಡ್ಡು ಹೋಗಿದೆ. ಹಣ ವರ್ಗಾವಣೆ ಬಗ್ಗೆ ಐಡಿಬಿಐ ಬ್ಯಾಂಕ್ ಬಳಿಯೂ ದಾಖಲೆ ಇಲ್ಲ. ಯಾರು ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನುವುದು ತನಿಖೆ ನಂತರ ಗೊತ್ತಾಗಲಿದೆ. ಒಂದು ತಂಡ ರಚಿಸಿ ತನಿಖೆ ನಡೆಸಿದ್ದೇವೆ. ದಾಖಲೆ ಸಂಗ್ರಹಣೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ.

ಬ್ಯಾಂಕ್‌ನವರಿಗೆ ನೋಟಿಸ್‌ ನೀಡಲಾಗಿದ್ದು, ಎಷ್ಟು ಖಾತೆಗಳಿಗೆ ಹೋಗಿದೆ ಎನ್ನುವುದನ್ನು ಮಾಹಿತಿ ಕೇಳಿದ್ದೇವೆ. ಬೇರೆ ಬೇರೆ ಇಲಾಖೆಗಳ ಖಾತೆಗಳ ಬಗ್ಗೆಯೂ ಪರಿಶೀಲನೆ ಮಾಡಲಾಗುವುದು. ಯಾರಾದರೂ ದೂರು ನೀಡಿದರೆ ಖಂಡಿತ ತನಿಖೆ ನಡೆಸುತ್ತೇವೆ. ಪ್ರವಾಸೋದ್ಯಮ ಇಲಾಖೆಯಲ್ಲಿ 2021ರಿಂದ ಇಲ್ಲಿಯವರೆಗೂ ಬಂದ ಡಿಡಿಗಳ ಬಳಿಯೂ ಮಾಹಿತಿ ಪಡೆಯಲಿದ್ದೇವೆ. ಬ್ಯಾಂಕ್‌ನಿಂದ ವಿವರಣೆ ಬಂದ ಬಂದ ಮೇಲೆ ವೈಯಕ್ತಿಕವಾಗಿ ನೋಟಿಸ್ ನೀಡಲಿದ್ದೇವೆ. ಬೇರೆ ಖಾತೆಗಳಿಗೆ ಹೋಗಿದೆಯೋ, ಬೇರೆ ಇಲಾಖೆ ಖಾತೆಗಳಿಗೆ ಹೋಗಿದೆಯೋ ಎಂಬುದನ್ನು ಪರಿಶೀಲನೆ‌ ಮಾಡುತ್ತೇವೆ ಎಂದಿದ್ದಾರೆ.

 

TAGGED:bagalkotbankscamTourism Departmentvalmiki scamಅಕ್ರಮ ಹಣ ವರ್ಗಾವಣೆಪ್ರವಾಸೋದ್ಯಮ ಇಲಾಖೆಬಾಗಲಕೋಟೆಹಗರಣ
Share This Article
Facebook Whatsapp Whatsapp Telegram

Cinema news

Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows
Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows

You Might Also Like

Meitei Man Shot Dead
Crime

ಮಣಿಪುರ| ಕುಕಿ ಸಮುದಾಯದ ಪತ್ನಿ ಭೇಟಿಯಾಗಲು ಹೋಗಿದ್ದ ಮೈತೇಯಿ ವ್ಯಕ್ತಿಗೆ ಗುಂಡಿಕ್ಕಿ ಕೊಲೆ

Public TV
By Public TV
5 minutes ago
Popular Jeans
Bellary

ಬಳ್ಳಾರಿ ಜೀನ್ಸ್‌ ಪಾರ್ಕ್‌ ನಿರ್ಮಾಣಕ್ಕೆ ಮತ್ತಷ್ಟು ವೇಗ – KIADB ನಿಂದ 154 ಎಕ್ರೆ ಜಮೀನು ಸ್ವಾಧೀನ

Public TV
By Public TV
19 minutes ago
R Ashok
Bengaluru City

ಕಾಂಗ್ರೆಸ್ ಕರಾಳ ರೀತಿಯಲ್ಲಿ ಈ ಅಧಿವೇಶನವನ್ನ ನಡೆಸಿದೆ: ಆರ್ ಅಶೋಕ್

Public TV
By Public TV
19 minutes ago
Delhi Police
Latest

ಗಣರಾಜೋತ್ಸವ ಹಿನ್ನೆಲೆ ದೆಹಲಿಯಲ್ಲಿ ಹೈಅಲರ್ಟ್‌ – ಅಪರಾಧಿಗಳ ಸುಳಿವು ಪತ್ತೆಗಾಗಿ ಪೊಲೀಸರಿಗೆ AI ಸ್ಮಾರ್ಟ್‌ ಕನ್ನಡಕ

Public TV
By Public TV
43 minutes ago
Muslim Man Hindu Lover
Crime

ಉತ್ತರ ಪ್ರದೇಶದಲ್ಲಿ ಹಿಂದೂ ಯುವತಿ, ಮುಸ್ಲಿಂ ಯುವಕ ಪ್ರೇಮಿಗಳ ಬರ್ಬರ ಹತ್ಯೆ

Public TV
By Public TV
48 minutes ago
Siddaramaiah 2 1
Bengaluru City

ಸಂವಿಧಾನದ ಉಲ್ಲಂಘನೆಯಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ತೀವ್ರ ಆಕ್ಷೇಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?