Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇಸಿಗೆ ಮುನ್ನವೇ ಜೀವಜಲಕ್ಕಾಗಿ ಹಾಹಾಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೇಸಿಗೆ ಮುನ್ನವೇ ಜೀವಜಲಕ್ಕಾಗಿ ಹಾಹಾಕಾರ

Districts

ಬೇಸಿಗೆ ಮುನ್ನವೇ ಜೀವಜಲಕ್ಕಾಗಿ ಹಾಹಾಕಾರ

Public TV
Last updated: December 28, 2019 8:10 am
Public TV
Share
3 Min Read
kpl drinking water collage
SHARE

ಕೊಪ್ಪಳ: ಬೇಸಿಗೆ ಕಾಲದ ಮುನ್ನವೇ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಜಿಲ್ಲೆಯ ಗ್ರಾಮವೊಂದರಲ್ಲಿ ಕಳೆದ 15 ದಿನಗಳಿಂದ ನೀರು ಬಾರದ ಕಾರಣ ಗ್ರಾಮಸ್ಥರು ಹೊಲದಲ್ಲಿರುವ ಕೃಷಿಹೊಂಡಗಳ ನೀರನ್ನು ಕುಡಿದು ಬದುಕು ಸಾಗಿಸುತ್ತಿದ್ದಾರೆ.

ಜಿಲ್ಲೆಯ ಕುಕನೂರು ತಾಲೂಕಿನ ಭಟಪ್ಪನಹಳ್ಳಿ ಎಂಬ ಪುಟ್ಟ ಗ್ರಾಮದಲ್ಲಿ ಕಳೆದ 15 ದಿನಗಳ ಹಿಂದೆ ಬೋರ್ ವೇಲ್ ನೀರು ಸ್ಥಗಿತಗೊಂಡ ಕಾರಣ, ಗ್ರಾಮಸ್ಥರು ದೂರದಲ್ಲಿರುವ ಕೃಷಿ ಹೊಂಡಗಳಿಗೆ ಹೋಗಿ ನೀರು ತರುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಮಂಡಲಗಿರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಈ ಗ್ರಾಮದಲ್ಲಿ ಸುಮಾರು 300 ಕುಟುಂಬಗಳಿವೆ. ಜನತೆಗೆ ನೀರು ಪೂರೈಕೆ ಮಾಡಬೇಕಾದ ಗ್ರಾ.ಪಂಯವರು 15 ದಿನಗಳಾದರೂ ಮಷಿನ್ ದುರಸ್ತಿಗೊಳಿಸಿಲ್ಲ. ಪರಿಣಾಮ ಈ ಗ್ರಾಮಸ್ಥರು ಬೆಳಗ್ಗೆಯಿಂದ ಸಂಜೆ ತನಕ ಹೊಲದಲ್ಲಿ ನಿರ್ಮಿಸಿರುವ ರೈತರ ಕೃಷಿಹೊಂಡಗಳನ್ನು ಹುಡುಕಿಕೊಂಡು ಹೋಗಿ ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

kpl drinking water 3

ಮೈಲುಗಟ್ಟಲೇ ನಡೆದು ಹೋದರೆ ಮಾತ್ರ ನೀರು ಗ್ರಾಮಕ್ಕೆ ಪೂರೈಕೆಯಾಗುತ್ತಿದ್ದ ಪಂಪ್‍ಸೆಟ್ ಕಳೆದ 15 ದಿನಗಳ ಹಿಂದೆ ಕೈಕೊಟ್ಟಿದೆ. ಇಂದು ರಿಪೇರಿ ಮಾಡಿಸುತ್ತಾರೆ. ನಾಳೆ ರಿಪೇರಿ ಮಾಡಿಸುತ್ತಾರೆ ಎಂದು ಗ್ರಾಮಸ್ಥರು ದೊಡ್ಡ ಮನಸ್ಸು ಮಾಡಿ, ಮೈಲುಗಟ್ಟಲೇ ನಡೆದುಕೊಂಡು ಹೋಗಿ ಕೃಷಿ ಹೊಂಡಗಳಲ್ಲಿ ಸಂಗ್ರಹವಾಗಿರುವ ಮಳೆ ನೀರನ್ನೇ ಕುಡಿದು ಬಾಯಾರಿಕೆ ನೀಗಿಸಿಕೊಳ್ಳುತ್ತಿದ್ದಾರೆ. ಆದರೆ ಗ್ರಾ.ಪಂ.ಯವರು ಮಾತ್ರ ಇದುವರೆಗೂ ಮಷಿನ್ ರಿಪೇರಿ ಮಾಡಿಸಿಲ್ಲ ಎಂದು ಹೇಳಲಾಗುತ್ತಿದೆ. ಗ್ರಾಮದ ಮತ್ತೊಬ್ಬರು ಹೇಳುವ ಪ್ರಕಾರ, ಮಷಿನ್ ರಿಪೇರಿ ಮಾಡಿಸಿದ್ದಾರೆ. ಆದರೆ ಪೈಪ್‍ಲೈನ್ ಒಡೆದು ನೀರು ಸೋರಿಕೆಯಾಗುತ್ತಿದೆ. ಹೀಗಾಗಿ ನಮ್ಮ ಊರಿಗೆ ನೀರು ಪೂರೈಕೆ ಮಾಡುತ್ತಿಲ್ಲ ಎಂದು ಹೇಳುತ್ತಿದ್ದಾರೆ.

kpl drinking water 5

ವಿದ್ಯಾರ್ಥಿಗಳು ಶಾಲೆಗೆ ರಜೆ ಹಾಕಿ ನೀರು ತರಬೇಕು. ದೂರದಲ್ಲಿರುವ ಕೃಷಿಹೊಂಡಗಳಿಗೆ ಸುಡು ಬಿಸಿಲಿನಲ್ಲಿ ನಡೆದುಕೊಂಡು ಹೋಗಿ ತಲೆ ಮೇಲೆ ಕೊಡ ಹೊತ್ತುಕೊಂಡು ವಿದ್ಯಾರ್ಥಿಗಳು ನೀರು ತರುತ್ತಿರುವ ದೃಶ್ಯವಂತೂ ಪ್ರಜ್ಞಾವಂತರ ಕರಳು ಕಿತ್ತು ಬರುವುಂತಿದೆ. ತುಂಬಿದ ಕೊಡಗಳನ್ನು ಹೊತ್ತುಕೊಂಡು ಪುಟ್ಟಪುಟ್ಟ ಮಕ್ಕಳು ನಡುರಸ್ತೆಯಲ್ಲಿ ಭಾರವನ್ನು ತಾಳದೇ ಮುಖ ಕಿವಿಚಿಕೊಂಡು ಮನೆ ಕಡೆ ದಾವಿಸುತ್ತಿರುವಾಗ, ಜನಪ್ರತಿನಿಧಿಗಳ ಹಾಗೂ ಗ್ರಾ.ಪಂ. ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ನೀರಿನ ರಾಜಕೀಯಕ್ಕೆ ಹೆಸರಾದ ತಾಲೂಕು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಯಲಬುರ್ಗಾ ವಿಧಾನಸಭಾ ಕ್ಷೇತ್ರವು ನೀರು ಮತ್ತು ನೀರಾವರಿ ರಾಜಕೀಯಕ್ಕೆ ಹೆಸರಾಗಿದೆ. ಇಲ್ಲಿನ ರಾಜಕಾರಣಿಗಳು ಪ್ರತಿ ಚುನಾವಣೆಯಲ್ಲಿ ನೀರಾವರಿ ಮತ್ತು ಕುಡಿಯುವ ನೀರಿನ ಅಸ್ತಂಗಳನ್ನು ಬಳಕೆ ಮಾಡಿಕೊಂಡು ಅಧಿಕಾರಕ್ಕೆ ಬರುತ್ತಾರೆ. ಆದರೆ ಈ ಕ್ಷೇತ್ರದ ಜನರಿಗೆ ಮಾತ್ರ ಶಾಶ್ವತವಾಗಿ ನೀರಾವರಿ ಸೌಲಭ್ಯವೂ ಕಲ್ಪಿಸಿಲ್ಲ. ಶಾಶ್ವತವಾಗಿ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಿಲ್ಲ ಎನ್ನುವ ಆರೋಪಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

kpl drinking water 2

ಭರವಸೆಯಲ್ಲಿಯೇ ಬೆಂದು ಹೋಗುತ್ತಿರುವ ಜನ ಗ್ರಾ.ಪಂಯಿಂದ ಹಿಡಿದು ಜಿಲ್ಲಾ ಉಸ್ತುವಾರಿ ಸಚಿವರವರೆಗೂ ಜಿಲ್ಲೆಯ ಜನತೆಗೆ ಪ್ರತಿ ವರ್ಷ ಭರವಸೆಗಳನ್ನು ಕೊಟ್ಟು, ನಿಮ್ಮೂರಿನ ರೈತರಿಗೆ ನೀರಿವಾರಿ ಸೌಲಭ್ಯ ಕಲ್ಪಿಸ್ತಿವಿ. ನಿಮ್ಮೂರಿಗೆ ಶಾಶ್ವತವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುತ್ತೇವೆ. ಹಾಗೇ ಹೀಗೇ ಎಂದು ಕೇವಲ ಭರವಸೆಗಳನ್ನೇ ಕೊಟ್ಟು ಈ ಭಾಗದ ಜನರನ್ನು ಭರವಸೆಯಲ್ಲಿಯೇ ಬೆಂದು ಹೋಗುವುಂತೆ ಮಾಡಿದ್ದಾರೆ. ತುಂಗಭದ್ರಾ ಹಿನ್ನೀರಿನಿಂದ ಬನ್ನಿಕೊಪ್ಪ ಕುಡಿಯುವ ನೀರಿನ ಯೋಜನೆ ಹಳ್ಳ ಹಿಡಿದಿದೆ. ನಾರಾಯಣಪುರ ಜಲಾಶಯದಿಂದ ಈ ಗ್ರಾಮಗಳಿಗೆ ತಲುಪಬೇಕಾಗಿದ್ದ 762 ಕೋಟಿ ರೂ. ವೆಚ್ಚದ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. ಅಲ್ಲದೇ ಈ ಗ್ರಾಮದಲ್ಲಿ ಅಳವಡಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಯಾಗಿ ವರ್ಷ ಕಳೆದರೂ ಇದುವರೆಗೂ ಈ ಘಟಕವನ್ನು ರಿಪೇರಿ ಮಾಡಿಲ್ಲ ಎಂದು ಗ್ರಾಮಸ್ಥರಾದ ಮಲ್ಲಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

kpl drinking water

ಇನ್ನಾದರೂ ಸಂಬಂಧ ಪಟ್ಟ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕಿದೆ. ಕಾರಣ ಕಳೆದ ಮೂರು ತಿಂಗಳ ಹಿಂದೆ ಸುರಿದ ಮಳೆಯಿಂದ ಕೃಷಿ ಹೊಂಡಗಳಲ್ಲಿ ಸಂಗ್ರಹಗೊಂಡ ನೀರು ಕುಡಿಯಲು ಯೋಗ್ಯವಾಗಿರುವುದಿಲ್ಲ. 15 ದಿನಗಳಿಂದ ಇದೇ ನೀರನ್ನು ಕುಡಿಯುತ್ತಿರುವ ಈ ಗ್ರಾಮಸ್ಥರು, ಆರೋಗ್ಯದಲ್ಲಿ ಏರುಪೇರಾದರೆ ಜವಾಬ್ದಾರರು ಯಾರು ಎನ್ನುವ ಪ್ರಶ್ನೆಗೆ ಕೇವಲ ಗ್ರಾ.ಪಂ. ಮಾತ್ರವಲ್ಲ ಇಡೀ ಜಿಲ್ಲಾಡಳಿತವೇ ಉತ್ತರಿಸಬೇಕಾಗುತ್ತದೆ.

TAGGED:drinking waterkoppalaPublic TVsummer seasonvillagersಕುಡಿಯುವ ನೀರುಕೊಪ್ಪಳಗ್ರಾಮಸ್ಥರುಪಬ್ಲಿಕ್ ಟಿವಿಬೇಸಿಗೆ ಕಾಲ
Share This Article
Facebook Whatsapp Whatsapp Telegram

Cinema news

Bollywood Salman Khan
Most Eligible Bachelor ಸಲ್ಮಾನ್ ಖಾನ್ ಈಗ ಸೀನಿಯರ್ ಸಿಟಿಜನ್
Bollywood Cinema Latest Top Stories
Kabbin Jalle Lyrical Karikaada song released Kaada NatrajNiriksha Shetty K Venkatesh Athishay
ಕರಿಕಾಡ ಚಿತ್ರದ ಕಬ್ಬಿನ ಜಲ್ಲೆ ಸಾಂಗ್ ಎಲ್ಲೆಡೆ ಬಾರಿ ಸದ್ದು
Cinema Latest Sandalwood
Thalapathy Vijay 2
ಮಲೇಷಿಯಾದಲ್ಲಿ ಶನಿವಾರ ‘ಜನನಾಯಗನ್’ ಆಡಿಯೋ ಲಾಂಚ್‌
Cinema Latest South cinema
dhurandhar movie competes with toxic
ಟಾಕ್ಸಿಕ್‍ಗೆ ದುರಂಧರ್ ಎದುರಾಳಿ..!
Cinema Latest Sandalwood Top Stories

You Might Also Like

TTD Bengaluru
Bengaluru City

ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ – ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ

Public TV
By Public TV
25 minutes ago
Bangladeshi Singers Concert Called Off
Latest

ಬಾಂಗ್ಲಾದೇಶದ ಗಾಯಕನ ಸಂಗೀತ ಕಛೇರಿ ರದ್ದು; ಸ್ಥಳದಲ್ಲಿ ಗುಂಪು ದಾಳಿ – 25 ಮಂದಿಗೆ ಗಾಯ

Public TV
By Public TV
1 hour ago
ECONOMY NEW INDIA 2025
Latest

ರೌಂಡಪ್‌ 2025 – ಸದ್ದು ಮಾಡಿದ ಟಾಪ್‌ ಆರ್ಥಿಕ ಸುದ್ದಿಗಳು

Public TV
By Public TV
1 hour ago
Bengaluru Husband Kills Wife
Bengaluru City

ಕೆಲಸದ ವಿಚಾರವಾಗಿ ಜಗಳ – ಪತಿಯಿಂದಲೇ ಪತ್ನಿ ಕೊಲೆ

Public TV
By Public TV
2 hours ago
pinarayi vijayan d.k.shivakumar
Bengaluru City

ಚುನಾವಣೆ ವೇಳೆ ಪಿಣರಾಯಿ ರಾಜಕೀಯ ಗಿಮಿಕ್‌ ಮಾಡೋದು ಬೇಡ: ಡಿಕೆಶಿ ಕಿಡಿ

Public TV
By Public TV
2 hours ago
Israeli Soldier Palestinian Man
Latest

ರಸ್ತೆ ಬದಿ ನಮಾಜ್‌ ಮಾಡ್ತಿದ್ದ ಪ್ಯಾಲೆಸ್ತೀನ್‌ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆಸಿದ ಇಸ್ರೇಲಿ ಸೈನಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?