ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಶಾಲಾ ವಾಹನ ಅಪಘಾತ – ಓರ್ವ ಮಹಿಳೆ ಸಾವು

Public TV
2 Min Read
karwar

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಬನವಾಸಿ (Banavasi) ಮತ್ತು ಯಲ್ಲಾಪುರ (Yallapura) ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ಅಜಾಗರೂಕತೆಯಿಂದ ಶಾಲಾ ವಾಹನ ಅಪಘಾತಕ್ಕೀಡಾಗಿದ್ದು, ವೃದ್ಧೆಯೊಬ್ಬರು ಸಾವಪ್ಪಿದ್ದಾರೆ.

karwar 2

ಬನವಾಸಿ ಹೆದ್ದಾರಿಯಲ್ಲಿ ಶಾಲಾ ಬಸ್ ಪಲ್ಟಿ – ಮಹಿಳೆ ಸಾವು
ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವೃದ್ಧೆಯೊಬ್ಬರು ಮೃತಪಟ್ಟಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು 7 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಅಪಘಾತ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಬುಗುಡಿಕೊಪ್ಪದ ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ 766E ರಲ್ಲಿ ಈ ಘಟನೆ ನಡೆದಿದೆ.

karwar 3

ದುರಂತದಲ್ಲಿ ಕಸ್ತೂರಮ್ಮ (60) ಅವರು ಸಾವನ್ನಪ್ಪಿದ್ದು, ಗಾಯಾಳುಗಳನ್ನು ಬನವಾಸಿಯ ಪ್ರಾಥಮಿಕ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿಗೆ ರವಾನೆ ಮಾಡಲಾಗಿದೆ. ರಾಣಿ ಬೆನ್ನೂರಿನ ಪರಿಣಿತಿ ವಿದ್ಯಾ ಮಂದಿರದ ಶಾಲೆಯವರು, ರಾಣಿ ಬೆನ್ನೂರಿನ ಸಿದ್ಧಾರೂಢ ನಗರದಿಂದ ಶಿರಸಿಯತ್ತ ಮಕ್ಕಳನ್ನು ಪ್ರವಾಸಕ್ಕೆ ಕರೆತರುತ್ತಿದ್ದರು. ಈ ವೇಳೆ ಚಾಲಕನ ಅತಿವೇಗದ ಚಾಲನೆಯಿಂದಲೇ ಘಟನೆ ಸಂಭವಿಸಿದ್ದು, ಇದೀಗ ಈ ಸಂಬಂಧ ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ

karwar 4

ಮತ್ತೊಂದೆಡೆ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ 63ರ ಅರೆಬೈಲು ಘಟ್ಟದಲ್ಲಿ ಕೆಟ್ಟು ನಿಂತಿದ್ದ ಟ್ಯಾಂಕರ್‍ಗೆ ಶಾಲಾ ವಾಹ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ ಸುಮಾರು 15 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಗುಜರಾತ್ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ- ಟಿಕೆಟ್ ನಿರಾಕರಿಸಿದ್ದಕ್ಕೆ ಆಪ್ ಸೇರಿದ ಶಾಸಕ

ಹುಬ್ಬಳ್ಳಿಯ ಸೈಂಟ್ ಅಂಥೋನಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಹುಬ್ಬಳಿಯಿಂದ ಅಂಕೋಲಾ ಮಾರ್ಗವಾಗಿ ಸುಂಕಸಾಳದತ್ತ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಘಟ್ಟದಲ್ಲಿ ಓವರ್ ಟೇಕ್ ಮಾಡಲು ಹೋಗಿ ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿಹೊಡೆದಿದೆ. ಇದರ ಪರಿಣಾಮ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *