ಚಿಕ್ಕೋಡಿ(ಬೆಳಗಾವಿ): ಖಾಸಗಿ ಶಿಕ್ಷಣ ಸಂಸ್ಥೆಗಳ ಹಣದ ದಾಹಕ್ಕೆ ಕೊನೆಯೆ ಇಲ್ಲದಂತಾಗಿದ್ದು, ಶಾಲೆಯ ಫೀ ಕಟ್ಟಿಲ್ಲ ಎಂಬ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಮಕ್ಕಳನ್ನು ಹೊರಗೆ ಕೂರಿಸಿದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಚಿಕ್ಕೋಡಿ ಪಟ್ಟಣದ ಹೊರವಲಯದಲ್ಲಿರುವ ಸೇಂಟ್ ಫ್ರಾನ್ಸಿಸ್ ಶಾಲೆಯ ಪ್ರಾಂಶುಪಾಲ ಈ ರೀತಿ ಬೇಜವಾಬ್ದಾರಿ ತೋರಿದ್ದಾರೆ. ಅಲ್ಲದೆ ವರದಿ ಮಾಡಲು ತೆರಳಿದ್ದ ಮಾಧ್ಯಮದವರನ್ನೂ ಹಿಯಾಳಿಸಿದ್ದಾರೆ.
- Advertisement 2
- Advertisement 3
ಫೀ ಕಟ್ಟಿಲ್ಲ ಎಂಬ ಕಾರಣಕ್ಕೆ ಮೂವತ್ತಕ್ಕೂ ಹೆಚ್ಚು ಮಕ್ಕಳನ್ನು ಶಾಲಾ ಕೊಠಡಿಯ ಹೊರಗೆ ಕೂರಿಸಿ ಅವಮಾನ ಮಾಡಲಾಗಿದ್ದು, ವಿಷಯ ತಿಳಿದ ಪೋಷಕರು ಸ್ಥಳಕ್ಕೆ ತೆರಳಿ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟಾದರೂ ತಾನು ಮಾಡಿದ್ದೇ ಸರಿ ಎಂಬಂತೆ ಆಡಳಿತ ಮಂಡಳಿ ವರ್ತಿಸಿದ್ದು, ಆಡಳಿತ ಮಂಡಳಿ ಕ್ರಮಕ್ಕೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.
- Advertisement 4
ಸರ್ಕಾರದ ಹಾಗೂ ಅಧಿಕಾರಿಗಳ ಶಿಸ್ತು ಕ್ರಮದ ಭಯವೂ ಇಲ್ಲದೆ ಬೇಕಾಬಿಟ್ಟಿ ವರ್ತನೆ ತೋರಿದ್ದು, ಶಾಲೆಯ ಆಡಳಿತ ಮಂಡಳಿ ವಿರುದ್ಧ ಮಕ್ಕಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.