Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಸ್‌ಸಿಒ ಶೃಂಗಸಭೆ – ಮಂಗಳವಾರ ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಎಸ್‌ಸಿಒ ಶೃಂಗಸಭೆ – ಮಂಗಳವಾರ ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

Latest

ಎಸ್‌ಸಿಒ ಶೃಂಗಸಭೆ – ಮಂಗಳವಾರ ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

Public TV
Last updated: October 14, 2024 12:11 pm
Public TV
Share
2 Min Read
Jaishankar
SHARE

– ಪಾಕ್‌ ಪ್ರಧಾನಿಯೊಂದಿಗೆ ಭೋಜನಕೂಟದಲ್ಲಿ ಭಾಗಿ

ನವದೆಹಲಿ: ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಪಾಲ್ಗೊಳ್ಳಲು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ( S Jaishankar) ಮಂಗಳವಾರ (ಅ.15) ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಕಳೆದ 9 ವರ್ಷಗಳಲ್ಲಿ ಅಂದ್ರೆ 2015ರಿಂದ ಇದೇ ಮೊದಲಬಾರಿಗೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರು ಪಾಕ್‌ಗೆ ಪ್ರಯಾಣಿಸುತ್ತಿದ್ದಾರೆ ಎನ್ನಲಾಗಿದೆ.

ಚೀನಾದ ಪ್ರಧಾನಿ ಲಿ ಕ್ವಿಯಾಂಗ್, ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಮತ್ತು ಜೈಶಂಕರ್ ಭಾಗಿಯಾಗಲಿದ್ದಾರೆ. ಬುಧವಾರದ ಮುಖ್ಯ ಶೃಂಗಸಭೆಯ ಮೊದಲು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಆಯೋಜಿಸುವ ಸ್ವಾಗತ ಭೋಜನ ಕೂಟದಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಕೇಸ್‌ – ಮೂರನೇ ಆರೋಪಿ ಅರೆಸ್ಟ್‌

ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೂಚ್ ಮಾತನಾಡಿ, ಜೈಶಂಕರ್ ಅವರ ಪಾಕಿಸ್ತಾನ ಭೇಟಿಯು ಮಹತ್ವ ಪಡೆದುಕೊಳ್ಳುತ್ತದೆ. ಏಕೆಂದರೆ ಇದು ನವದೆಹಲಿಯ ಕಡೆಯಿಂದ ಪ್ರಮುಖ ನಿರ್ಧಾರವಾಗಿದೆ. ಪುಲ್ವಾಮಾ ದಾಳಿ, ಬಾಲಾಕೋಟ್‌ ಏರ್‌ಸ್ಟ್ರೈಕ್‌ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ತೀವ್ರವಾಗಿ ಹದಗೆಟ್ಟವು. ಭಾರತವು ಪಾಕಿಸ್ತಾನದೊಂದಿಗೆ ಸಾಮಾನ್ಯ ನೆರೆಯ ಸಂಬಂಧವನ್ನು ಬಯಸುತ್ತದೆ ಎಂದು ಹೇಳುತ್ತಾ ಬಂದಿದೆ. ಆದ್ದರಿಂದ ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಇಸ್ಲಾಮಾಬಾದ್‌ಗೆ ಇದೆ ಎಂದರು. ಇದನ್ನೂ ಓದಿ: ಟ್ರಂಪ್‌ಗಿಂತಲೂ ಕಮಲಾ ಹ್ಯಾರಿಸ್‌ಗೆ ಹೆಚ್ಚಿನ ಕೋಟ್ಯಧಿಪತಿಗಳ ಬೆಂಬಲ – ಇಲ್ಲಿದೆ ಬಿಲಿಯನೇರ್ಸ್‌ ಲಿಸ್ಟ್‌

ಎಸ್‌ಸಿಒ ಸದಸ್ಯ ರಾಷ್ಟ್ರಗಳ ಸರ್ಕಾರದ ಮುಖ್ಯಸ್ಥರ 23 ನೇ ಸಭೆಯು ಇಸ್ಲಾಮಾಬಾದ್‌ನಲ್ಲಿ ಅಕ್ಟೋಬರ್ 15 ಮತ್ತು 16 ರಂದು ನಡೆಯಲಿದ್ದು, ಅಧಿಕಾರಿಗಳು ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ಭಾರತದ ನಾಲ್ಕು ಸದಸ್ಯರ ಅಧಿಕೃತ ನಿಯೋಗವೂ ಪಾಕಿಸ್ತಾನಕ್ಕೆ ಆಗಮಿಸಿದೆ ಎಂದು ಮೂಲಗಳು ವರದಿ ಮಾಡಿದೆ. ಚೀನಾದ 15 ಸದಸ್ಯರು, ಕಿರ್ಗಿಸ್ತಾನದ 4 ಸದಸ್ಯರು ಮತ್ತು ಇರಾನ್‌ನ ಇಬ್ಬರು ಸದಸ್ಯರ ನಿಯೋಗವೂ ಇಸ್ಲಾಮಾಬಾದ್ ತಲುಪಿದೆ. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಕೇಸ್‌ – ಕೃತ್ಯದ ಬಳಿಕ ಭದ್ರತಾ ಸಿಬ್ಬಂದಿ ಮೇಲೆ ಖಾರದ ಪುಡಿ ಎರಚಿ ಪರಾರಿಯಾಗಿದ್ದ ಆರೋಪಿಗಳು

ಇಸ್ಲಾಮಾಬಾದ್ ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲೀಸ್ (ಐಜಿಪಿ) ನಾಸಿರ್ ಅಲಿ ರಿಜ್ವಿ ಅವರು ಮಾತನಾಡಿ, ಫೆಡರಲ್ ರಾಜಧಾನಿಯಲ್ಲಿ ಶೃಂಗ ಸಭೆಗಾಗಿ ಭಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ. ಪಾಕಿಸ್ತಾನ ಸೇನೆ, ಗುಪ್ತಚರ ಸಂಸ್ಥೆಗಳು, ಫ್ರಾಂಟಿಯರ್ ಕಾರ್ಪ್ಸ್ (ಎಫ್‌ಸಿ) ಮತ್ತು ರೇಂಜರ್‌ಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವುದರೊಂದಿಗೆ ಶೋಧ ಮತ್ತು ಮಾಹಿತಿ ಆಧಾರಿತ ಕಾರ್ಯಾಚರಣೆಗಳು ನಡೆಯುತ್ತಿವೆ. ಭದ್ರತೆಗಾಗಿ 9 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯರನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿ – ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ

9 ವರ್ಷಗಳಲ್ಲಿ ಇದೇ ಮೊದಲು:
ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನ ಎಸ್‌ಸಿಒ ಶೃಂಗಸಭೆಗೆ ಆಹ್ವಾನಿಸಿತ್ತು. ಆದರೆ ಡಿಸೆಂಬರ್ 2015 ರಿಂದ ಯಾವುದೇ ಭಾರತೀಯ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಭೇಟಿ ನೀಡಿಲ್ಲ. ದಿವಂಗತ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 2015 ರಲ್ಲಿ ಅಫ್ಘಾನಿಸ್ತಾನದ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಲು ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದರು. ಇದನ್ನೂ ಓದಿ: ಗುಜರಾತ್‌ನಲ್ಲಿ 5,000 ಕೋಟಿ ಮೌಲ್ಯದ ಕೊಕೇನ್ ಸೀಜ್

TAGGED:Islamabadnarendra modipakistans.jaishankarShanghai Cooperation Organisationಎಸ್. ಜೈಶಂಕರ್ನರೇಂದ್ರ ಮೋದಿಪಾಕಿಸ್ತಾನಶಾಂಘೈ ಸಹಕಾರ ಸಂಸ್ಥೆ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

congress mlas surjewala
Bengaluru City

ಸುರ್ಜೇವಾಲಾ ವಾರ್ನಿಂಗ್‌ಗೂ ಡೋಂಟ್‌ಕೇರ್ – ಕಾಂಗ್ರೆಸ್ ಶಾಸಕರ ಫಾರಿನ್ ಟೂರ್ ಫಿಕ್ಸ್

Public TV
By Public TV
49 minutes ago
DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
1 hour ago
male madappa devotees
Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
By Public TV
1 hour ago
RCB 3
Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
By Public TV
2 hours ago
manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
2 hours ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?