ಬೆಂಗಳೂರು: ಚಲಿಸುತ್ತಿದ್ದ ಕ್ಯಾಂಟರ್ಗೆ ಹಿಂಬದಿಯಿಂದ ಸ್ಕೂಟರ್ವೊಂದು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.
ಅಸ್ಸಾಂ ಮೂಲದ ಕುಮಾರ್ ಲಿಂಬೂ ಹಾಗೂ ಸುನಿಲ್ ಮೃತ ಯುವಕರು. ತಡರಾತ್ರಿ 12ರ ಸುಮಾರಿಗೆ ಲಗ್ಗೆರೆ ಕಡೆಯಿಂದ ಗೊರಗುಂಟೆ ಪಾಳ್ಯದ ಕಡೆಗೆ ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಈ ಇಬ್ಬರು ಯುವಕರು ತೆರಳುತ್ತಿದ್ದರು.
ರಾಜ್ ಕುಮಾರ್ ಸಮಾಧಿ ಬಳಿಯ ರಸ್ತೆಯಲ್ಲಿ ಮಂದಗತಿಯಲ್ಲಿ ಲೋಡೆಡ್ ಕ್ಯಾಂಟರ್ವೊಂದು ಸಾಗುತ್ತಿತ್ತು. ಈ ವೇಳೆ ವೇಗವಾಗಿ ಬಂದ ಸ್ಕೂಟರ್ ಕ್ಯಾಂಟರ್ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಮರಿ ಸಾವನ್ನಪ್ಪಿದ್ದಕ್ಕೆ ಕಣ್ಣೀರಿಟ್ಟ ತಾಯಿ ಆನೆ
ಅಪಘಾತದಲ್ಲಿ ಕುಮಾರ್ ಲಿಂಬು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಸುನಿಲ್ಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸುನಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧಿಸಿ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆಹಾರ ಅರಸಿ ನಾಡಿಗೆ ಬಂದ ಆನೆ ವಿದ್ಯುತ್ ಶಾಕಿಗೆ ಬಲಿ