Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮತಾಂತರ ನಿಷೇಧ ಸರ್ಕಾರಿ ಪ್ರಾಯೋಜಿತ ಭಯೋತ್ಪಾದನಾ ಮಸೂದೆಯನ್ನು ಹಿಂಪಡೆಯಿರಿ: SDPI

Public TV
Last updated: December 25, 2021 11:15 pm
Public TV
Share
3 Min Read
SDPI PROTEST
SHARE

ಕೊಪ್ಪಳ: ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೊಳಿಸಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಯು ಸಂವಿಧಾನದ ಆರ್ಟಿಕಲ್ 25 ಪ್ರತಿಪಾದಿಸುವ, ಭಾರತೀಯ ಜನತೆಯ ಧಾರ್ಮಿಕ ಹಕ್ಕು ಮತ್ತು ಸ್ವಾತಂತ್ರ್ಯದ ಸ್ಪಷ್ಟ ಉಲ್ಲಂಘನೆಯಾಗಿದೆ ಹಾಗೂ ಪ್ರತಿಯೊಬ್ಬ ಭಾರತೀಯನ ಧಾರ್ಮಿಕ ಸ್ವಾತಂತ್ರ್ಯವನ್ನು ಅತಿಕ್ರಮಿಸುವ ಹುನ್ನಾರವಾಗಿದೆ ಎಂದು ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ – ಕೊಪ್ಪಳ ಜಿಲ್ಲಾ ಅಧ್ಯಕ್ಷರು ಹುಜಾರ್ ಆಹೆಮದ್ ಆರೋಪಿಸಿದ್ದಾರೆ.

Belagavi Suvarna Soudha VidhanaSabhe 2

ಈ ಬಗ್ಗೆ ಪತಿಭಟನೆ ನಡೆಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎಸ್‍ಡಿಪಿಐ, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಎನ್ನುವ ಆಕರ್ಷಕ ಹಣೆ ಪಟ್ಟಿ ಹೊಂದಿರುವ ಸದರಿ ಮಸೂದೆಯು, ಅಪ್ರಾಪ್ತ, ಅಸ್ವಸ್ಥ ಚಿತ್ತ, ಮಹಿಳೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರನ್ನು ಮತಾಂತರ ಮಾಡಿದರೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎನ್ನುವ ಮೂಲಕ ದಲಿತ ಸಮುದಾಯವನ್ನು ಮಾನಸಿಕ ಅಸ್ವಸ್ಥರು, ಎನ್ನುವ ಮೂಲಕ ತುಂಬಾ ಅವಮಾನಕರವಾಗಿ ಬಿಂಬಿಸಲಾಗಿದೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ಕಾನೂನು ಹೋರಾಟಕ್ಕೆ SDPI ನಿರ್ಧಾರ

SDPI PROTEST 1

ಅಕ್ರಮ ಮತಾಂತರ ನಡೆದಿದೆ ಎಂಬ ಆರೋಪವನ್ನು ಮಾಡಿ ಮತಾಂತರಗೊಂಡವರ ಬಂಧುಗಳು, ಸ್ನೇಹಿತರು ಹಾಗೂ ಪರಿಚಿತರ ಪೈಕಿ ಯಾರು ಬೇಕಾದರು ದೂರು ನೀಡಬಹುದು ಮತ್ತು ಆರೋಪ ಮಾಡಿದವರ ಮೇಲೆ ಅದನ್ನು ಸಾಬೀತು ಪಡಿಸುವ ಹೊಣೆಯೂ ಇರುವುದಿಲ್ಲ. ತಾನು ನಿರ್ದೂಷಿ ಎಂದು ಸಾಬೀತುಪಡಿಸುವ ಹೊಣೆ ಆರೋಪಕ್ಕೆ ಗುರಿಯಾದವರದೇ ಆಗಿರುತ್ತದೆ ಎನ್ನುವ ಮೂಲಕ ವೈಯಕ್ತಿಕ ದ್ವೇಷ, ಷಡ್ಯಂತ್ರ ಮತ್ತು ಅನ್ಯ ಕೋಮಿನವರ ನಾಶಕ್ಕೆ ಹಾಗೂ ಅವರನ್ನು ದುರುದ್ದೇಶಪೂರ್ವಕವಾಗಿ ತೊಂದರೆಗೆ ಸಿಲುಕಿಸುವ ಕೋಮುವಾದಿ ಧೋರಣೆಗೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ

ಕೋಮು ಆಧಾರಿತ ಗಲಭೆಗಳಿಗೆ ಮತ್ತು ಅಶಾಂತಿಯ ವಾತಾವರಣಕ್ಕೆ ರಾಜ್ಯವನ್ನು ದೂಡಿ, ಇದನ್ನೇ ಬಂಡವಾಳ ಮಾಡಿಕೊಂಡು ಚುನಾವಣೆಯಲ್ಲಿ ರಾಜಕೀಯ ಲಾಭಗಳಿಸುವುದು.ದಲಿತ, ಆದಿವಾಸಿ, ಅಲೆಮಾರಿ ಸಮುದಾಯಗಳು ಜಾತಿ ತಾರತಮ್ಯದಿಂದ ಮುಕ್ತಿ ಪಡೆಯದೆ ಮತ್ತದೇ ಜಾತಿವಾದದ ಕಪಿ ಮುಷ್ಟಿಯಲ್ಲಿ ನರಳಿ ಸಾಯುವಂತೆ ಮಾಡುವುದು. ಧರ್ಮ ನಿರಪೇಕ್ಷತೆಯನ್ನು ಪ್ರೋತ್ಸಾಹಿಸುವ ಅಂತರ್ ಧರ್ಮೀಯ ಮದುವೆಗಳನ್ನು ನಿರ್ಬಂಧಿಸುವುದು. ಮಹಿಳೆಯರ ಹಕ್ಕುಗಳನ್ನು ಕಸಿಯುವುದು. ಧಾರ್ಮಿಕ ಅಲ್ಪಸಂಖ್ಯಾತರ ಸಂಸ್ಥೆಗಳ ಮೇಲೆ ದಾಳಿಗೆ ಪ್ರಚೋಧಿಸುವುದು, ಸದರಿ ಕಾಯ್ದೆಯ ಮೂಲಕ ಕಾನೂನನ್ನು ದುರ್ಬಳಕೆ ಮಾಡಿಕೊಂಡು ತೊಂದರೆ ಮಾಡುವುದು. ಅವರ ಆಸ್ತಿಗಳನ್ನು ಲಪಟಾಯಿಸಿ, ಆ ಮೂಲಕ ಅವರ ಸೇವಾ ಚಟುವಟಿಕೆಗಳನ್ನು ನಿಲ್ಲಿಸುವಂತೆ ಮಾಡುವುದು. ಮಾನವ ಹಕ್ಕುಗಳ ಪ್ರತಿಪಾದಕರು, ಚಳುವಳಿಗರಾರರು, ಹೋರಾಟಗಾರರು ಸಾಹಿತಿಗಳನ್ನು ದಿಕ್ಕು ತಪ್ಪಿಸಿ, ಅವರ ಆದ್ಯತೆಗಳ ದಾರಿ ಬದಲಿಸಿ, ಭಾವನಾತ್ಮಕ ಇಂತಹ ಜಟಾಪಟಿಗಳಲ್ಲೇ ಮುಳುಗಿಸಿ ಅಗತ್ಯವಾದ ವಿಚಾರಗಳ ಸುತ್ತ ಹೋರಾಟಗಳು ನಡೆಯದಂತೆ ಈ ಕಾಯ್ದೆಯ ಮೂಲಕ ಹುನ್ನಾರ ನಡೆಸಲಾಗುತ್ತಿದೆ.

ಧಾರ್ಮಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನೂ ಅವಿರತವಾಗಿ ನಡೆಸಿಕೊಂಡು ಬರುತ್ತಿರುವ ಹಲವು ಧಾರ್ಮಿಕ ಸಂಸ್ಥೆಗಳ ಮೇಲೆ ಈ ರೀತಿಯ ಭಯೋತ್ಪಾದನಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಈ ಸೇವಾ ಸಂಸ್ಥೆಗಳು ನಾಡಿನ ಶೋಷಿತ ಸಮುದಾಯಗಳಿಗೆ ನೀಡುತ್ತಿದ್ದ ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತಿತರ ಸೇವೆಗಳನ್ನು ತಡೆಗಟ್ಟಿ ಶೋಷಣೆ ಮಾಡಲು ಹೊರಟಿದೆ. ಸದರಿ, ಮತಾಂತರ ನಿಷೇಧ ಕಾಯ್ದೆಯ ಮೂಲಕ ಸರ್ಕಾರವು, ಸಮಾಜದಲ್ಲಿ ಅಕ್ಷರಶಃ ಆತಂಕ, ಭಯ, ದಾಳಿಯ ವಾತಾವರಣ ಸೃಷ್ಟಿಸಿ ಧಾರ್ಮಿಕ ಹಕ್ಕಿನ ಸ್ವಾತಂತ್ರ್ಯವನ್ನು ಧಮನಿಸಿ ತನ್ನ ಕೋಮುವಾದಿ ಅಜೆಂಡಾವನ್ನು ಮೆರೆಯಲು ಹೊರಟಿದೆ. ಆದ್ದರಿಂದ ಸಂವಿಧಾನದ ಆಶಯಗಳನ್ನು ಕಾಪಾಡಬೇಕಾದ ಮಹತ್ವದ ಅಧಿಕಾರ ಹೊಂದಿರುವ ರಾಜ್ಯಪಾಲರು, ಯಾವ ಕಾರಣಕ್ಕೂ ಈ ಮತಾಂತರ ನಿಷೇದ ಕಾಯ್ದೆ ಎಂಬ ಈ ಸರ್ಕಾರಿ ಪ್ರಾಯೋಜಿತ ಭಯೋತ್ಪಾದಕ ಮಸೂದೆಗೆ ಅನುಮತಿ ನೀಡಬಾರದೆಂದು ಎಸ್‍ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಲೀಮ್ ಮನಿಯಾರ್ ಒತ್ತಾಯಿಸಿದ್ದಾರೆ.

TAGGED:Anti-conversion BillbjpcongressSDPIಎಸ್‍ಡಿಪಿಐಧಾರ್ಮಿಕ ಸ್ವಾತಂತ್ರ್ಯಮತಾಂತರ ನಿಷೇಧ
Share This Article
Facebook Whatsapp Whatsapp Telegram

Cinema news

Sherlyn Chopra
ಸೌಂದರ್ಯವೇ ʻಎದೆʼಗೆ ಭಾರವಾದಾಗ…. ಸ್ತನ ಕಸಿ ತೆಗೆಸಿದ್ದೇಕೆ ಶೆರ್ಲಿನ್‌ ಚೋಪ್ರಾ? ಸ್ತನ ಕಸಿಯಿಂದೇನಾಗುತ್ತದೆ?
Bollywood Cinema Health Latest National Top Stories
Vijay Sethupathi and Puri Jagannadh
ವಿಜಯ್ ಸೇತುಪತಿ ಹೊಸ ಸಿನಿಮಾದ ಶೂಟಿಂಗ್ ಮುಕ್ತಾಯ: ಪುರಿ ನಿರ್ದೇಶನದ ಸಿನಿಮಾ
Cinema Latest South cinema
Risha Gowda
ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲಬೇಕು – ರಿಷಾ ಗೌಡ
Cinema Karnataka Latest Top Stories TV Shows
sumalatha
ಚಿತ್ರರಂಗದಲ್ಲಿ ಲೀಡರ್‌ಶಿಪ್ ಬೇಕು: ಮಾಜಿ ಸಂಸದೆ ಸುಮಲತಾ
Cinema Latest Sandalwood Top Stories

You Might Also Like

lokayukta raid davanagere
Bengaluru City

ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌ – ರಾಜ್ಯದ 10 ಕಡೆ ದಾಳಿ

Public TV
By Public TV
27 minutes ago
ayodhya ram mandir pm modi
Ayodhya Ram Mandir

ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ

Public TV
By Public TV
56 minutes ago
Dowry DEATH
Crime

ವರದಕ್ಷಿಣೆಗಾಗಿ ಪತ್ನಿ ಮೇಲೆ GBA ಮಾರ್ಷಲ್ ದರ್ಪ ಆರೋಪ – ಮಹಿಳೆ ನೇಣಿಗೆ ಶರಣು

Public TV
By Public TV
1 hour ago
Govind Karajol
Districts

ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ ಜೋರು: ಗೋವಿಂದ ಕಾರಜೋಳ

Public TV
By Public TV
9 hours ago
Ethiopia Volcano
Latest

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ – ಭಾರತದಲ್ಲಿ ವಿಮಾನ ಸಂಚಾರ ವ್ಯತ್ಯಯ

Public TV
By Public TV
9 hours ago
Basavaraj Rayareddy
Districts

ಲಿಂಗಾಯತ ಕೋಟಾದಲ್ಲಿ ನಾನ್ಯಾಕೆ ಸಿಎಂ ಆಗ್ಬಾರ್ದು: ರಾಯರೆಡ್ಡಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?