ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಶುದ್ಧೀಕರಣ ಹಿನ್ನೆಲೆಯಲ್ಲಿ ನಗರದ ವಿವಿಧ ದೇವಸ್ಥಾನಗಳ ಸುತ್ತಮುತ್ತ 144 ನಿಷೇಧಾಜ್ಞೆ ಜಾರಿ ಮಾಡಿ ಎಂದು ನಗರ ಪೊಲೀಸ್ ಆಯುಕ್ತ ವೈ.ಎಸ್ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ನಗರದ ಶ್ರೀ ರಾಮ ಮಂದಿರ, ಶ್ರೀ ಶರಣಬಸವೇಶ್ವರ ದೇವಸ್ಥಾನ ಮತ್ತು ಶ್ರೀ ವಿಶ್ವರಾಧ್ಯ ದೇವಸ್ಥಾನಗಳ ಸುತ್ತಲೂ ನಿಷೇಧಾಜ್ಞೆ ವಿಧಿಸಲಾಗಿದೆ. ನಗರದ ವಿವಿಧ ದೇವಸ್ಥಾನಗಳಿಂದ ಶಿವಲಿಂಗ ಶುದ್ಧೀಕರಣದ ಕಾರ್ಯಕ್ಕೆ ಅನೇಕ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ತೆರಳುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ಇದನ್ನೂ ಓದಿ: ಪ್ರಮೋದ್ ಮುತಾಲಿಕ್, ಚೈತ್ರಾ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿದ ಡಿಸಿ
ಇನ್ನೂ ಇದಕ್ಕೂ ಮುನ್ನ ಆಳಂದ ಪಟ್ಟಣದ ದರ್ಗಾದಲ್ಲಿನ ಶಿವಲಿಂಗ ಶುದ್ದೀಕರಣ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಬೆಳಗ್ಗೆಯಿಂದ ರಾತ್ರಿವರೆಗೆ ಮಧ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ಪ್ರಭಾರಿ ಡಿಸಿ ಡಾ. ದಿಲಿಸ್ ಸಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕಲಬುರಗಿಗೆ ಬರುವಾಗ ಚೈತ್ರಾ ವಶಕ್ಕೆ – ಯಾದಗಿರಿ ಗಡಿ ದಾಟಿಸಿ ಬಿಟ್ಟ ಪೊಲೀಸರು