ಚಂಡೀಗಢ: ಕಾಂಗ್ರೆಸ್ (Congress) ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ (Bharat Jodo Yatra) ವೇಳೆ ಭದ್ರತಾ ಲೋಪವಾಗಿರುವ (Security Lapse) ಘಟನೆ ಮಂಗಳವಾರ ನಡೆದಿದೆ.
ಪಂಜಾಬ್ನ (Punjab) ಹೋಶಿಯಾರ್ಪುರದಲ್ಲಿ (Hoshiarpur) ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು (Rahul Gandhi) ಅಪ್ಪಿಕೊಳ್ಳಲು ವ್ಯಕ್ತಿಯೊಬ್ಬ ಅವರತ್ತ ಓಡಿರುವ ಘಟನೆ ವರದಿಯಾಗಿದೆ. ಆದರೆ ತಮ್ಮ ಸುತ್ತಲೂ ಸಾಗುತ್ತಿದ್ದ ಕಾಂಗ್ರೆಸ್ನ ಇತರ ಕಾರ್ಯಕರ್ತರು ಆತನನ್ನು ತಕ್ಷಣವೇ ತಡೆದಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಜೋಡೋ ಪಾದಯಾತ್ರೆ ದೆಹಲಿಯಲ್ಲಿ ಸಾಗುತ್ತಿದ್ದ ಸಂದರ್ಭ ರಾಗಾ ಅವರಿಗೆ ಭದ್ರತೆ ಒದಗಿಸುವಲ್ಲಿ ದೆಹಲಿ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಆದರೆ ರಾಹುಲ್ ಅವರೇ 2020 ರಿಂದ 113 ಬಾರಿ ಭದ್ರತಾ ನಿಯಮಾವಳಿಗಳನ್ನು ಉಲ್ಲಂಘಿಸಿರುವುದಾಗಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ತಿರುಗೇಟು ನೀಡಿತ್ತು. ಇದನ್ನೂ ಓದಿ: ಬುದ್ಗಾಮ್ ಕೋರ್ಟ್ ಸಂಕೀರ್ಣದ ಬಳಿ ಎನ್ಕೌಂಟರ್ – ಇಬ್ಬರು ಉಗ್ರರ ಹತ್ಯೆ
Security breach under the AAP govt. This is how AAP is providing security to Rahul Gandhi Ji. pic.twitter.com/kyTV6fMHxr
— Shantanu (@shaandelhite) January 17, 2023
ಭಾರತ್ ಜೋಡೋ ಯಾತ್ರೆ ಮಂಗಳವಾರ ಬೆಳಗ್ಗೆ ಹೋಶಿಯಾರ್ಪುರದ ತಾಂಡಾದಿAದ ಪುನರಾರಂಭವಾಯಿತು. ಪಕ್ಷದ ಪಂಜಾಬ್ ಮುಖ್ಯಸ್ಥ ಅಮರೀಂದರ್ ಸಿಂಗ್ ರಾಜಾ ವಾರಿಂಗ್, ಹರೀಶ್ ಚೌಧರಿ, ಹಾಗೂ ರಾಜ್ ಕುಮಾರ್ ಚಬ್ಬೇವಾಲ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ – ಬ್ಯಾರಿಕೇಡ್ ಹಾರಿ ಕಾರಿನತ್ತ ನುಗ್ಗಿದ ಬಾಲಕ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k