ಬೆಳಗಾವಿ: ಸಂಸತ್ ಸ್ಮೋಕ್ ಬಾಂಬ್ (Smoke Bomb) ಪ್ರಕರಣ ನಮಗೆ ಎಚ್ಚರಿಕೆ ಗಂಟೆ ಎಂದು ವಿಧಾನಸಭಾ ಸ್ಪೀಕರ್ ಯುಟಿ ಖಾದರ್ (UT Khader) ಹೇಳಿದ್ದಾರೆ.
ಯಾವಾಗ ಏನಾಗಬಹುದು ಎಂದು ಊಹೆ ಮಾಡಲು ಸಾಧ್ಯವಿಲ್ಲ. ಜನಸಾಮಾನ್ಯರು ಸಹಕಾರ ಕೊಡಬೇಕು. ಜನರಿಗೆ ಪಾಸ್ (Pass) ಕೊಡುವಾಗ ಅವರ ನೈಜತೆ ನೋಡಿಕೊಂಡು ಪಾಸ್ ಕೊಡಲು ಸೂಚಿಸಲಾಗಿದೆ ಎಂದರು. ಇದನ್ನೂ ಓದಿ: ಸಂಸತ್ನಲ್ಲಿ ಸ್ಮೋಕ್ ಬಾಂಬ್ ಎಸೆದಿದ್ದ ಮನೋರಂಜನ್ ಯಾರು?, ಈತನ ಹಿನ್ನೆಲೆಯೇನು?
ವಿದ್ಯಾರ್ಥಿಗಳಿಗೆ, ಸತ್ಪ್ರಜೆಗಳಿಗೆ ತೊಂದರೆ ಆಗದಂತೆ ಪಾಸ್ ವಿತರಣೆಗೆ ಸೂಚಿಸಲಾಗಿದೆ. ಹೆಚ್ಚು ತಪಾಸಣೆ ಮೂಲಕ ಸುವರ್ಣಸೌಧಕ್ಕೆ (Suvarna Soudha) ಪ್ರವೇಶ ನೀಡಲಾಗಿದೆ. ಜನ ಸಾಮಾನ್ಯರು ಸಹಕರಿಸಬೇಕು ಎಂದು ಹೇಳಿದರು. ಇದನ್ನೂ ಓದಿ: 45 ನಿಮಿಷಗಳ ಪಾಸ್ ಪಡೆದು 2 ಗಂಟೆ ಗ್ಯಾಲರಿಯಲ್ಲಿ ಕುಳಿತಿದ್ರು!
ಸಂಸತ್ ಮೇಲೆ ದಾಳಿ ನಡೆದ ಬೆನ್ನಲ್ಲೇ ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದ್ದು ಪಾಸ್ ವಿತರಣೆ ವ್ಯವಸ್ಥೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ.