ರಾಯಚೂರು: ಗುರುರಾಯರ ಆರಾಧನೆಯ ಕೊನೆಯ ದಿನವಾದ ಇಂದು ಮಂತ್ರಾಲಯದಲ್ಲಿ ಉತ್ತರಾರಾಧನೆ ಅದ್ಧೂರಿಯಾಗಿ ನಡೆಯಲಿದೆ.
ಬೆಳಗ್ಗೆ 10 ಗಂಟೆ ವೇಳೆಗೆ ಮಹಾರಥೋತ್ಸವ ಜರುಗಲಿದೆ. ಮಠದ ಬೀದಿಯಲ್ಲಿ ಮೆರವಣಿಗೆ ನಡೆಯಲಿದ್ದು, ದೇಶದ ಮೂಲೆ ಮೂಲೆಯಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ.
- Advertisement 2
ಮಹಾರಥೋತ್ಸವದ ವೇಳೆ ರಥಕ್ಕೆ ಹೆಲಿಕ್ಯಾಪ್ಟರ್ ಮೂಲಕ ಪುಪ್ಪವೃಷ್ಠಿ ನಡೆಯಲಿದೆ. ಪ್ರಹಲ್ಲಾದರಾಜರಾಗಿ ರಾಯರು ಇಂದು ಭಕ್ತರಿಗೆ ಬಹಿರ್ಮುಖವಾಗಿ ದರ್ಶನ ಕೊಡುತ್ತಾರೆ ಅನ್ನೋ ನಂಬಿಕೆಯಿದೆ. ರಥೋತ್ಸವಕ್ಕೂ ಮುನ್ನ ಪ್ರಹ್ಲಾದರಾಯರಿಗೆ ಶ್ರೀಗಳು ಅಡ್ಡ ಮಲಗಿ ಸಮಸ್ಕಾರ ಹಾಕುವ ಮೂಲಕ ಪ್ರಾರ್ಥನೆ ಸಲ್ಲಿಸಲಿದ್ದಾರೆ.
- Advertisement 3
ಮಹಾ ರಥೋತ್ಸವದ ಮೂಲಕ ಮೂರು ದಿನಗಳ ಆರಾಧನಾ ಮಹೋತ್ಸವಕ್ಕೆ ಇಂದು ವಿದ್ಯುಕ್ತ ತೆರೆ ಬೀಳಲಿದೆ. ಆದರೆ ಸಪ್ತರಾತ್ರೋತ್ಸವ ಅಂಗವಾಗಿ ಇನ್ನೂ ಎರಡು ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮಗಳು ಮಾತ್ರ ನಡೆಯುತ್ತವೆ.