ಧಾರವಾಡ: ಸೀಗೆ ಹುಣ್ಣಿಮೆ (Seege Hunnime) ಬಂದರೆ ಸಾಕು ರೈತರ ಕುಟುಂಬ ಎಲ್ಲ ಹೊಲಕ್ಕೆ ಹೋಗಿ ಹೊಲಕ್ಕೆ ಪೂಜೆ ಮಾಡಿ ನಮಿಸುತ್ತಾರೆ. ಅದೇ ರೀತಿ ಇಂದು ಸೀಗೆ ಹುಣ್ಣಿಮೆ ಇರುವ ಕಾರಣ ಧಾರವಾಡ (Dharwada) ಜಿಲ್ಲೆಯ ಅಣ್ಣಿಗೇರಿ ತಾಲೂಕಿ ರೈತರೊಬ್ಬರು ಪುನೀತ್ ರಾಜ್ಕುಮಾರ್ (Puneeth Rajkumar) ಭಾವಚಿತ್ರ ಇಟ್ಟು ಹೊಲದಲ್ಲಿ ಪೂಜೆ ಮಾಡಿದ್ದಾರೆ.
ಅಣ್ಣಿಗೇರಿ ಪಟ್ಟಣದ ಅಶೋಕ್ ಕುರಿ ಸೀಗೆ ಹುಣ್ಣಿಮೆ ಹಿನ್ನೆಲೆ ಪುನೀತ್ ರಾಜ್ಕುಮಾರ್ ಭಾವಚಿತ್ರ ಇಟ್ಟು ಹೊಲಕ್ಕೆ ಪೂಜೆ ಮಾಡಿದ್ದಾರೆ. ಅಶೋಕ್ ಕುರಿ ಅವರ ಹೊಲದಲ್ಲಿ ಇರುವ ಬನ್ನಿ ಮರದ ಕಳಗೆ ಉತ್ತರದ ಕರ್ನಾಟಕ ಶೈಲಿಯ ಅಡುಗೆ ಮಾಡಿ ಎಡೆ ಇಟ್ಟು ಅದರ ನಡುವೆ ಪುನೀತ್ ಭಾವಚಿತ್ರ ಇಟ್ಟು ಪೂಜಿಸಿದ್ದಾರೆ. ಇದನ್ನೂ ಓದಿ: ಗಂಧದ ಗುಡಿಯಲ್ಲಿ ಚಂದದ ನೋಟ: ನೀವು ಇರಬೇಕಿತ್ತು ಎಂದು ಕಣ್ಣೀರಾಕಿದ ಫ್ಯಾನ್ಸ್
ಇನ್ನೊಂದೆಡೆ ಇಂದು ಪುನೀತ್ ರಾಜ್ಕುಮಾರ್ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ (Gandhada Gudi) ಟ್ರೇಲರ್ (Trailer) ಬಿಡುಗಡೆ ಆಗಿದೆ. ಅಪ್ಪು ಈ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಬಗ್ಗೆ ಅಷ್ಟೊಂದು ಕನಸು ಯಾಕೆ ಕಂಡಿದ್ದರು ಎನ್ನುವುದಕ್ಕೆ ಟ್ರೈಲರ್ನಲ್ಲಿ ತೋರಿಸಿದ ಒಂದೊಂದು ಫ್ರೇಮೂ ಸಾಕ್ಷಿಯಾಗಿವೆ. ಗಂಧದ ಗುಡಿಯಲ್ಲಿ ಏನಿಲ್ಲ, ಎಲ್ಲವೂ ಇದೆ. ಬೆಟ್ಟ, ಗುಡ್ಡ, ನದಿ, ಹಳ್ಳ, ಕೊಳ್ಳ, ಅರಣ್ಯ, ಕಾಡು ಪ್ರಾಣಿಗಳು, ಕಾಡಂಚಿನ ಜನರು, ದೇವರು, ದೈವ ಎಲ್ಲವನ್ನೂ ಒಂದೇ ಉಸಿರಿಗೆ ಹಿಡಿದಿಟ್ಟಿದ್ದಾರೆ ಪುನೀತ್ ರಾಜ್ಕುಮಾರ್. ರಾತ್ರಿ ಅವರು ಕಾಡಿನೊಳಗೆ ನುಗ್ಗಿದಾಗ ನಾವೇ ಭಯಪಡುವಷ್ಟು ಸುಂದರವಾಗಿ ಸೆರೆ ಹಿಡಿದಿದ್ದಾರೆ ಆ ರಾತ್ರಿಯನ್ನು. ಸಮುದ್ರದಾಳಕ್ಕೆ ಅಪ್ಪು ಜಿಗಿದಾಗ ಇಲ್ಲಿ ನಾವೇ ಒದ್ದೆಯಾಗುವಂತೆ ಸಿನಿಮಾಟೋಗ್ರಫಿ ಇದೆ. ಇದನ್ನೂ ಓದಿ: `ಗಂಧದಗುಡಿ’ ಟ್ರೈಲರ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Live Tv
[brid partner=56869869 player=32851 video=960834 autoplay=true]