Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಕ್ಕಳನ್ನು ಪಾಕ್‌ಗೆ ಕರೆದೊಯ್ಯಲು ಸೀಮಾ ಮೊದಲ ಪತಿ ನಿರ್ಧಾರ – ಕಾನೂನು ಹೋರಾಟಕ್ಕೆ ಭಾರತೀಯ ವಕೀಲರ ನೇಮಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಕ್ಕಳನ್ನು ಪಾಕ್‌ಗೆ ಕರೆದೊಯ್ಯಲು ಸೀಮಾ ಮೊದಲ ಪತಿ ನಿರ್ಧಾರ – ಕಾನೂನು ಹೋರಾಟಕ್ಕೆ ಭಾರತೀಯ ವಕೀಲರ ನೇಮಕ

Latest

ಮಕ್ಕಳನ್ನು ಪಾಕ್‌ಗೆ ಕರೆದೊಯ್ಯಲು ಸೀಮಾ ಮೊದಲ ಪತಿ ನಿರ್ಧಾರ – ಕಾನೂನು ಹೋರಾಟಕ್ಕೆ ಭಾರತೀಯ ವಕೀಲರ ನೇಮಕ

Public TV
Last updated: February 17, 2024 11:30 am
Public TV
Share
2 Min Read
Seema Haider
SHARE

ಇಸ್ಲಾಮಾಬಾದ್‌/ಲಕ್ನೋ: ಪಬ್‌ಜಿ (PUBG) ಪ್ರೇಮಿಗಾಗಿ ವೀಸಾ ಇಲ್ಲದೇ ಭಾರತಕ್ಕೆ ಪ್ರವೇಶಿಸಿದ್ದ ಪಾಕಿಸ್ತಾನಿ ಮಹಿಳೆ (Pakistani Woman) ಸೀಮಾ ಹೈದರ್‌ ಮೊದಲ ಪತಿ ಗುಲಾಮ್‌ ಹೈದರ್‌, ತನ್ನ ಮಕ್ಕಳನ್ನು ಭಾರತದಿಂದ ವಾಪಸ್‌ ಕರೆದುಕೊಂಡು ಹೋಗಲು ನಿರ್ಧಾರ ಮಾಡಿದ್ದಾರೆ.

ತನ್ನ ಅಪ್ರಾಪ್ತ ಮಕ್ಕಳನ್ನು ಭಾರತದಿಂದ ವಾಪಸ್‌ ಪಾಕಿಸ್ತಾನಕ್ಕೆ ಕರೆದುಕೊಂಡು ಹೋಗಲು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಅದಕ್ಕಾಗಿ ಭಾರತೀಯ ವಕೀಲನನ್ನು ನೇಮಿಸಿಕೊಂಡಿದ್ದಾರೆ ಎಂದು ಪಾಕ್‌ ವಕೀಲ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ಅನ್ಸಾರ್ ಬರ್ನಿ ತಿಳಿಸಿದ್ದಾರೆ.

PUBG Love Story 2

ಅಲಿ ಮೊಮಿನ್ ಎಂಬ ಭಾರತೀಯ ವಕೀಲರನ್ನು ನೇಮಿಸಿಕೊಂಡಿದ್ದು, ಭಾರತದಲ್ಲಿ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಪವರ್ ಆಫ್ ಅಟಾರ್ನಿ ಕಳುಹಿಸಲಾಗಿದೆ ಎಂದು ಬರ್ನಿ ಹೇಳಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ ಭಾರತದಲ್ಲೇ ಇರಲು ಅವಕಾಶ ಕೊಡಿ – ರಾಷ್ಟ್ರಪತಿಗೆ ಸೀಮಾ ಹೈದರ್‌ ಪತ್ರ

SEEMA HAIDER

ಗುಲಾಮ್‌ ಹೈದರ್‌ ಮಕ್ಕಳು ಇನ್ನೂ ಅಪ್ರಾಪ್ತ ವಯಸ್ಸಿನವರು ಆಗಿರುವುದರಿಂದ ಹಾಗೂ ಅಂತಾರಾಷ್ಟ್ರೀಯ ಕಾನೂನುಗಳ ಪ್ರಕಾರ ಧಾರ್ಮಿಕ ಮತಾಂತರ ನಿಷೇಧ ಇರೋದ್ರಿಂದ ಮಕ್ಕಳನ್ನು ಕರೆತರಲು ಮುಂದಾಗಿದ್ದಾರೆ. ಅಲ್ಲದೇ ಸೀಮಾ ನೋಯ್ಡಾದಲ್ಲಿ ನೆಲೆಸಿದ್ದರೂ ಅವರಿನ್ನೂ ಪಾಕಿಸ್ತಾನಿ ಪ್ರಜೆಯೇ ಆಗಿರುವುದರಿಂದ ಮೊದಲ ಪತಿ ಗುಲಾಮ್‌ ಹೈದರ್‌ ಮಕ್ಕಳ ಮೇಲೆ ಎಲ್ಲಾ ಹಕ್ಕುಗಳನ್ನು ಹೊಂದಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ. ಇದನ್ನೂ ಓದಿ: ಬೇಗ ಬಂದುಬಿಡು ಸೀಮಾ, ಹೊಸ ಜೀವನ ಶುರು ಮಾಡೋಣ – ಸೌದಿಯಲ್ಲಿ ಮೊದಲ ಪತಿಯ ಗೋಳಾಟ

bangladesh women 1

ಸೀಮಾ ಹೇಳಿದ್ದೇನು?
ತಾನು ಎಂದೂ ಕಾಣದ ಪ್ರೀತಿಯನ್ನು ನನ್ನ ಪತಿ ಸಚಿನ್‌ ಮೀನಾ ಹಾಗೂ ಅವರ ತಂದೆ-ತಾಯಿಯಿಂದ ಕಂಡಿದ್ದೇನೆ. ನಾನು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ. ನನ್ನ ನಾಲ್ವರು ಮಕ್ಕಳೊಂದಿಗೆ ಭಾರತದಲ್ಲೇ ಉಳಿಯಲು ಅವಕಾಶ ಕೊಡಿ ಎಂದು ಈ ಹಿಂದೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ಪತ್ರ ಬರೆದಿದ್ದರು. ಅಲ್ಲದೇ ಪಾಕಿಸ್ತಾನಕ್ಕೆ ಹಿಂತಿರುಗುವ ಬಯಕೆ ನನಗಿಲ್ಲ. ನಾನು ವಾಪಸ್‌ ಹೋದರೂ ನನ್ನನ್ನು ಕೊಲ್ಲುತ್ತಾರೆ ಎಂದು ಹೇಳಿಕೊಂಡಿದ್ದರು.

ಈ ಬೆನ್ನಲ್ಲೇ ಸೌದಿಯಲ್ಲಿ ಕೆಲಸ ಮಾಡುತ್ತಿದ್ದ ಸೀಮಾ ಪತಿ, ನಾನು ನಿನ್ನನ್ನ ಎಷ್ಟು ಪ್ರೀತಿಸುತ್ತೇನೆ ಅನ್ನೋದು ನಿನಗೇ ಚೆನ್ನಾಗಿ ಗೊತ್ತು. ಈಗಲೂ ಅಷ್ಟೇ ಪ್ರೀತಿ (Love) ಮಾಡ್ತೀನಿ ಸೀಮಾ, ದಯವಿಟ್ಟು ಹಿಂತಿರುಗಿ ಬಂದುಬಿಡು, ನಿನಗೆ ಏನಾದ್ರೂ ಆದ್ರೆ ಯಾರು ನೋಡಿಕೊಳ್ತಾರೆ? ಮಕ್ಕಳ ಜವಾಬ್ದಾರಿ ಯಾರು ತೆಗೆದುಕೊಳ್ತಾರೆ? ವಾಪಸ್‌ ಬಂದುಬಿಡು ನಾವಿಬ್ಬರು ಹೊಸ ಜೀವನ ಶುರು ಮಾಡೋಣ ಎಂದು ಕೋರಿದ್ದರು. ತನ್ನ ಪತ್ನಿ-ಮಕ್ಕಳನ್ನು ವಾಪಸ್‌ ಕಳುಹಿಸಿಕೊಡುವಂತೆ ಭಾರತ ಸರ್ಕಾರಕ್ಕೂ ಮನವಿ ಮಾಡಿದ್ದರು. ಆದರೀಗ ಸೀಮಾ ಬರದಿದ್ದರೂ ಚಿಂತೆಯಿಲ್ಲ. ತನ್ನ ಮಕ್ಕಳನ್ನು ಪಾಕಿಸ್ತಾನಕ್ಕೆ ಹಿಂದಿರುಗಿಸುವಂತೆ ಕೇಳಿಕೊಂಡಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

ಪಬ್‌ಜೀ ಪ್ರೇಮಕಥೆ ಶುರುವಾಗಿದ್ದೇ ಥ್ರಿಲ್ಲಿಂಗ್:
ಸೀಮಾ ಹಾಗೂ ಸಚಿನ್ ಲವ್‌ಸ್ಟೋರಿ ಬಾಲಿವುಡ್ ಸಿನಿಮಾದಷ್ಟೇ ಥ್ರಿಲ್ಲಿಂಗ್ ಆಗಿದೆ. ಸಚಿನ್ ಮೀನಾ ಮೂಲತಃ ಉತ್ತರಪ್ರದೇಶದವನಾಗಿದ್ದು, 2019ರಲ್ಲಿ ಆನ್‌ಲೈನ್ ಗೇಮ್ ಪಬ್‌ಜೀ ಆಡುತ್ತಿದ್ದ. ಈ ವೇಳೆ ಇವರಿಬ್ಬರ ಪರಿಚಯವಾಗಿ, ಸ್ನೇಹ ಪ್ರೀತಿಯಾಗಿ ಮಾರ್ಪಟ್ಟಿತ್ತು. ಬಳಿಕ ಸೀಮಾ ಹೈದರ್ ಆತನೊಂದಿಗೆ ನೋಯ್ಡಾದಲ್ಲಿ ವಾಸಿಸುವ ಸಲುವಾಗಿ ಪಾಕಿಸ್ತಾನದಿಂದ ತನ್ನ ನಾಲ್ವರು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಬಂದಿದ್ದಳು. ಇದನ್ನೂ ಓದಿ: NRIಗಳ ನಡುವಿನ ವಿವಾಹಗಳನ್ನು ಭಾರತದಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು: ಕಾನೂನು ಆಯೋಗ ಶಿಫಾರಸು

TAGGED:indiapakistanPakistani womanseema haideruttar pradeshಜಾಮೀನುನೋಯ್ಡನ್ಯಾಯಾಲಯಪಾಕಿಸ್ತಾನಮಹಿಳೆ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

two people die after drinking spirit one in critical condition two detained in koppal
Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
By Public TV
56 minutes ago
Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
1 hour ago
Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
2 hours ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
2 hours ago
Nagalakshmi Choudhary
Davanagere

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Public TV
By Public TV
3 hours ago
bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?