ಭೋಪಾಲ್: ಟೋಲ್ ಪ್ಲಾಜಾ ಬಳಿ ಶಾಜಾದಪುರದ ಬಿಜೆಪಿ ಜಿಲ್ಲಾಧ್ಯಕ್ಷ ಅಂಬರಂ ಕರಡ ಗೂಂಡಾಗಿರಿ ಮೆರೆದಿದ್ದು, ಅವರ ಬೆಂಬಲಿಗರು ಟೋಲ್ ಪ್ಲಾಜಾದ ನೌಕರರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸೆಹೋರ್ನ ಪಟೇರಿಯಾ ಗೋಯಲ್ ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾದ ಪ್ರಕರಣ ಇದಾಗಿದ್ದು, ಬಿಜೆಪಿ ಕಾರ್ಯಕರ್ತರು ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಜಿಲ್ಲಾಧ್ಯಕ್ಷರು ಸ್ಥಳದಲ್ಲೇ ಇದ್ದು, ಜಗಳ ನಿಲ್ಲಿಸುವ ಬದಲು ಪ್ರಚಾರ ಮಾಡುತ್ತಿರುವಂತಿದೆ ಎಂದು ದೂರು ಕೇಳಿಬರುತ್ತಿದೆ. ಸ್ಥಳೀಯ ವ್ಯಕ್ತಿಯೊಬ್ಬರು ಸಿಬ್ಬಂದಿ ಮೇಲೆ ಹಲ್ಲೆ ಎಸಗುತ್ತಿರುವ ದೃಶ್ಯಾವಳಿಗಳನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರ ದಬ್ಬಾಳಿಕೆ ಮುಂದೆ ಟೋಲ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.