ರಾಯಚೂರು: ಸೆಲ್ಫಿ (Selfie) ಕ್ರೇಜ್ನಿಂದ ಕಾಲುಜಾರಿ ನೀರಿಗೆ ಬಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು (Student) ಶವವಾಗಿ ಪತ್ತೆಯಾದ ಘಟನೆ ರಾಯಚೂರು (Raichur) ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ಕಲಮಲಾ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆ ಹೈಡ್ರಲ್ ಪ್ರಾಜೆಕ್ಟ್ನಲ್ಲಿ ಈ ಘಟನೆ ನಡೆದಿದೆ. ರಾಯಚೂರಿನ ಬೆಸ್ಟ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್(16) ಮತ್ತು ವೈಭವ (16) ಮೃತರು. ಪಿಕ್ನಿಕ್ಗಾಗಿ ಬಂದಿದ್ದ ವೇಳೆ ವಿದ್ಯಾರ್ಥಿಗಳು ಸೆಲ್ಫಿ ತೆಗೆಯುವಾಗ ಕಾಲುವೆಗೆ ಬಿದ್ದಿದ್ದಾರೆ. ಅದಾದ ಬಳಿಕ ನಾಪತ್ತೆ ಆಗಿದ್ದರು. ಇದನ್ನೂ ಓದಿ: ಇಂದಿನಿಂದ ಬೆಂಗಳೂರಲ್ಲಿ ಮತ್ತೆ ಆಪರೇಷನ್ ಬುಲ್ಡೋಜರ್ – ದೊಡ್ಡ ಕಟ್ಟಡಗಳು, ವಿಲ್ಲಾಗಳನ್ನು ಕೆಡವುತ್ತಾ BBMP?
ನಿನ್ನೆ ಸಂಜೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಇಂದು ಎನ್.ಆರ್. ಶೆಟ್ಟಿಯ ಮುಚ್ಚಿರುವ ಹೈಡ್ರಲ್ ಪ್ರಾಜೆಕ್ಟ್ನಲ್ಲಿ ಶವವಾಗಿ ಪತ್ತೆ ಆಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಜಮೀರ್ ಸಿಎಂ ಆಗ್ತಾರೆ ಎಂದ ಚರ್ಚ್ ಫಾದರ್