ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಐವರನ್ನು ಹಾವೇರಿ ನಗರದ ಸಿಇಎನ್ ಠಾಣೆ ಪೊಲೀಸರು ಬಂಧಿಸಿ, ಅವರ ಬಳಿ ಇದ್ದ ಕೆಲವು ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ನಗರದ ಮಲ್ಲಿಕಾರ್ಜುನ್ ಅಲಿಯಾಸ್ ಗನ್ ಮಲ್ಲಿಕ್, ಮಹಮ್ಮದ್ ಅಬರಾರ್ ಪಠಾಣ್, ಸಮೀರ್ ಅಲಿಯಾಸ್ ಗೇಲ್ ಕಣವಿ, ಸೈಮನ್ ಬಿಸ್ತಿ ಹಾಗೂ ವಿಜಯಪುರದ ಮಹಮ್ಮದ್ ಇಸಾಕ್ ಅಲಮೇಲ್ ಬಂಧಿತ ಆರೋಪಿಗಳು. ಬಂಧಿತರಿಂದ 4 ಕೆ.ಜಿ ಗಾಂಜಾ, 2 ಬೈಕ್ಗಳು, 5 ಮೊಬೈಲ್ ಫೋನ್ಗಳು, 2 ಬ್ಯಾಗ್ ಮತ್ತು 3 ಕೈಚೀಲಗಳು ಹಾಗೂ ಎರಡೂವರೆ ಸಾವಿರ ರೂ. ನಗದು ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಗುಜರಾತ್ನ ಏಕತಾ ಪ್ರತಿಮೆ ಬಳಿ ಭೂಕಂಪನ
ಸಿಇಎನ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಪಾಟೀಲ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಜಿಲ್ಲೆಯ ಬಂಕಾಪುರ ಟೋಲ್ ಗೇಟ್ ಬಳಿ ಆರೋಪಿಗಳು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನರೇಂದ್ರ ಮೋದಿ ಶ್ರೀ ಕೃಷ್ಣನ ಅವತಾರದಲ್ಲಿದ್ದಾರೆ: ಶ್ರೀರಾಮುಲು