ನಿನ್ನೆಯಷ್ಟೇ ಕಾಂತಾರ (Kantara) ಸಿನಿಮಾವನ್ನು ವೀಕ್ಷಿಸಿರುವ ಕಂಗನಾ ರಣಾವತ್, ಈ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅಲ್ಲದೇ, ಆಸ್ಕರ್ (Oscar) ಪ್ರಶಸ್ತಿಗಾಗಿ ಭಾರತದಿಂದ ಈ ಚಿತ್ರವನ್ನು ನೇರವಾಗಿ ಆಯ್ಕೆ ಮಾಡಿ ಎಂದು ಸರಕಾರದ ಗಮನ ಸೆಳೆದಿದ್ದಾರೆ. ಇಂತಹ ಚಿತ್ರಗಳೇ ಭಾರತದಿಂದ ಆಸ್ಕರ್ ಗಾಗಿ ಕಳುಹಿಸಬೇಕು. ಈ ಚಿತ್ರಕ್ಕೆ ಗೆಲ್ಲುವಂತಹ ಎಲ್ಲ ಅರ್ಹತೆಗಳೂ ಇವೆ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ರಿಷಬ್ ಶೆಟ್ಟಿ (Rishabh Shetty) ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾವನ್ನು ನೋಡುವುದಾಗಿ ಈ ಹಿಂದೆ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಹೇಳಿದ್ದರು. ಈ ಸಿನಿಮಾವನ್ನು ವೀಕ್ಷಿಸಲು ಕಾತರದಿಂದ ಕಾಯುತ್ತಿದ್ದೇನೆ ಎಂದು ಹೇಳಿದ್ದರು. ಅದರಂತೆ ನಿನ್ನೆ ಸಿನಿಮಾ ನೋಡಿದ್ದಾರೆ. ಥಿಯೇಟರ್ ನಿಂದ ಆಚೆ ಬಂದು ಭಾವುಕರಾಗಿಯೇ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: ರಿಷಬ್ ಹೇಳಿದ ಹಿಂದೂ ಪದ ಒಪ್ಪಲ್ಲ, ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ: ಸಮರ್ಥಿಸಿದ ಚೇತನ್
ಕುಟುಂಬ ಸಮೇತರಾಗಿ ನಾನು ಕಾಂತಾರ ಸಿನಿಮಾವನ್ನು ನೋಡಿದೆ. ಥಿಯೇಟರ್ ನಿಂದ ಆಚೆ ಬಂದ ಮೇಲೂ ಇನ್ನೂ ನಡುಗುತ್ತಲೇ ಇದ್ದೇನೆ. ಚಿತ್ರಕಥೆ, ಅದನ್ನು ತೋರಿಸಿದ ರೀತಿ, ರಿಷಬ್ ನಟನೆಯನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ. ಅದ್ಭುತವಾದ ಸಿನಿಮಾವನ್ನು ನೋಡಿದ ತೃಪ್ತಿ ನನಗಿದೆ. ಈ ಅನುಭವದಿಂದ ಆಚೆ ಬರಲು ನನಗೆ ಒಂದು ವಾರವಾದರೂ ಬೇಕು. ಆ ರೀತಿಯಲ್ಲಿ ಸಿನಿಮಾ ಮೂಡಿ ಬಂದಿದೆ ಎಂದು ಹೇಳಿದ್ದಾರೆ.