ಹಿರಿಯ ಸಾಹಿತಿ ಡಾ. ಸುಮತೀಂದ್ರ ನಾಡಿಗ ನಿಧನ

Public TV
1 Min Read
SUMATHINDRA NADIG

ಬೆಂಗಳೂರು: ಕನ್ನಡದ ಪ್ರಮುಖ ಕವಿ ಮತ್ತು ವಿಮರ್ಶಕರಾಗಿ ಪ್ರಸಿದ್ಧರಾಗಿದ್ದ ಡಾ. ಸುಮತೀಂದ್ರ ನಾಡಿಗರವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.

83 ವರ್ಷದ ಡಾ. ಸುಮತೀಂದ್ರ ನಾಡಿಗ್ ರವರು ಕಳೆದ ಮೂರು ದಿನಗಳ ಹಿಂದೆ ಕಿಡ್ನಿ ಹಾಗೂ ಉಸಿರಾಟದ ಸಮಸ್ಯೆಯಿಂದಾಗಿ ನಗರದ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಕುಟುಂಬಸ್ಥರು ನಗರದ ಸಾರಕ್ಕಿ ಸಿಗ್ನಲ್ ಬಳಿ ಇರುವ ಸುಮತೀಂದ್ರ ನಾಡಿಗ ಸಮುದಾಯ ಭವನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

ಡಾ. ಸುಮತೀಂದ್ರ ನಾಡಿಗರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸದವರು. ಇವರು 1935 ಮೇ 4ರಂದು ಜನಿಸಿದ್ದರು. ಇಂಗ್ಲಿಷ್ ಮತ್ತು ಕನ್ನಡ ಸಾಹಿತ್ಯಗಳ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಅಮೆರಿಕದ ಫಿಲೆಡೆಲ್ಫಿಯಾ ವಿಶ್ವವಿದ್ಯಾಲಯಗಳಿಂದ ಇಂಗ್ಲಿಷ್ ಎಂ.ಎ. ಪದವಿಯನ್ನು ಪಡೆದುಕೊಂಡಿದ್ದರು. 1985ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ `ಬೇಂದ್ರೆಯವರ ಕಾವ್ಯದ ವಿಭಿನ್ನ ನೆಲೆಗಳು’ ಎನ್ನುವ ಕಥಾಸಂಕಲದಿಂದಾಗಿ ಗೌರವ ಡಾಕ್ಟರೇಟನ್ನು ಸಹ ಪಡೆದಿದ್ದರು. ಇವರು ದಾ.ರಾ.ಬೇಂದ್ರೆ, ಗೋಪಾಲಕೃಷ್ಣ ಅಡಿಗ ಮತ್ತು ಕೆ.ಎಸ್.ನರಸಿಂಹಸ್ವಾಮಿಯವರ ಕಾವ್ಯದ ಬಗ್ಗೆ ವಿಶೇಷವಾದ ಅಧ್ಯಯನ ನಡೆಸಿದ್ದರು. ಅಲ್ಲದೇ ಕನ್ನಡದ ಹಿರಿಯ ಪ್ರಮುಖ ಕವಿ ಹಾಗೂ ಸಾಹಿತಿಗಳಾಗಿ ಗುರುತಿಸಿಕೊಂಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *