ಹಿರಿಯ ವಿಮರ್ಶಕ, ಸಾಹಿತಿ ಗಿರಡ್ಡಿ ಗೋವಿಂದರಾಜ್ ವಿಧಿವಶ

Public TV
0 Min Read
DWD giraddy

ಧಾರವಾಡ: ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿ ಬಿದ್ದಿದೆ. ಹಿರಿಯ ವಿಮರ್ಶಕ, ಸಾಹಿತಿ ಗಿರಡ್ಡಿ ಗೋವಿಂದರಾಜ್(79) ಧಾರವಾಡದ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಹಿರಿಯ ಕವಿ ನಾಡೋಜ ಚನ್ನವೀರ ಕಣವಿ, ಸಚಿವ ವಿನಯ ಕುಲಕರ್ಣಿ ಸೇರಿದಂತೆ ಹಲವು ಗಣ್ಯರು ಗಿರಡ್ಡಿ ಗೋವಿಂದರಾಜ್‍ರ ಅಂತಿಮ ದರ್ಶನ ಪಡೆದ್ರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಗಿರಡ್ಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಗಿರಡ್ಡಿ ಅವರ ಹುಟ್ಟುರಾದ ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿಗೆ ತೆಗೆದುಕೊಂಡು ಹೋಗಿ ಅಲ್ಲಿಯೇ ಅವರ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

vlcsnap 2018 05 12 07h10m17s631

Share This Article
Leave a Comment

Leave a Reply

Your email address will not be published. Required fields are marked *