ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಭ್ರಷ್ಟಾಚಾರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಒಂದೆಡೆ ಲೋಕಾಯುಕ್ತ ತನಿಖೆ (Lokayukta Investigation) ನಡೆಯುತ್ತಿದೆ. ಈ ನಡುವೆ ಬದಲಿ ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಇಲಾಖಾ ಹಂತದಲ್ಲಿ ತನಿಖೆ ನಡೆಸಲಾಗಿದ್ದು, ಸಲ್ಲಿದ್ದಲದೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಮಿತಿಯ ತನಿಖಾ ವರದಿಯನ್ನಾಧಿರಿ ಸರ್ಕಾರ ಅಧೀನ ಕಾರ್ಯದರ್ಶಿ ಕೆ.ಲತಾ ಅವರು ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರಿಗೆ ನೋಟಿಸ್ ನೀಡಿದ್ದಾರೆ.
- Advertisement
ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಮಿತಿಯ ನೇತೃತ್ವದಲ್ಲಿ ಇಲಾಖೆ ಮಟ್ಟದಲ್ಲಿ ತನಿಖೆ ನಡೆಸಲಾಗಿತ್ತು. ಬಳಿಕ ಆ ವರದಿಯನ್ನ ಇಲಾಖೆಗೆ ಸಲ್ಲಿಸಲಾಗಿತ್ತು. ಈ ವರದಿಯಲ್ಲಿ 8 ಪ್ರಕರಣಗಳಲ್ಲಿ ಬದಲಿ ನಿವೇಶನ ಹಂಚಿಕೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಎಂಬುದು ಸಾಕ್ಷಿ ಸಮೇತ ಸಾಭೀತಾಗಿದೆ. ಇದರಿಂದ ಮುಡಾಗೆ ಹಾಗೂ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ನಷ್ಟ ಉಂಟಾಗಿದೆ, ದಿನೇಶ್ ಕುಮಾರ್ ಅವರು ಮುಡಾ ಆಯುಕ್ತರಾಗಿದ್ದ ಸಂದರ್ಭದಲ್ಲಿ ಈ ನಷ್ಟ ಉಂಟಾಗಿದೆ ಎಂಬ ಅಂಶಗಳನ್ನ ಉಲ್ಲೇಖ ಮಾಡಲಾಗಿದೆ. ವರಧಿಯನ್ನಾಧರಿಸಿ ಸರ್ಕಾರದ ಅಧೀನ ಕಾರ್ಯದರ್ಶಿಗಳು ದಿನೇಶ್ ಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
- Advertisement
ನೋಟಿಸ್ ಕೊಟ್ಟಿರುವ ಸರ್ಕಾರ ಅಧೀನ ಕಾರ್ಯದರ್ಶಿ ಕೆ.ಲತಾ, ವರದಿಯಲ್ಲಿ ಉಲ್ಲೇಖವಾಗಿರುವ ಎಲ್ಲಾ ಹಂತದ ಅಧಿಕಾರಿಗಳ ಸಂಪೂರ್ಣ ಮಾಹಿತಿ ಕೊಡಬೇಕು. ಸರ್ಕಾರಕ್ಕೆ ಉಂಟಾದ ಆರ್ಥಿಕ ನಷ್ಟದ ಬಗ್ಗೆ ಅಂದಾಜು ವಿವರ ಸಲ್ಲಿಸಬೇಕು. ಆ ಎಲ್ಲಾ ಕಡತಗಳ ದೃಢೀಕೃತ ಆದೇಶ ಪ್ರತಿಗಳನ್ನ ನೀಡಬೇಕೆಂದು ನೋಟೀಸ್ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಗುಲಾಬ್ ಜಾಮೂನ್ ಅಂತ ನಂಬರ್ ಸೇವ್ ಮಾಡಿಕೊಂಡಿದ್ದ ಶ್ವೇತಾ – ವರ್ತೂರ್ ಪ್ರಕಾಶ್ಗೆ ಬಂಧನ ಭೀತಿ?
ಈ ವಿಚಾರದಲ್ಲಿ ಯಾವುದೇ ಒಬ್ಬ ನೌಕರನನ್ನ ಪ್ರಕರಣದಿಂದ ಹೊರಗುಳಿಯಲು ಆಸ್ಪದ ಕೊಟ್ಟಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸುತ್ತೇವೆಂದು ಇಂದಿನ ಆಯುಕ್ತರಿಗೆ ಎಚ್ಚರಿಕೆ ಸಹ ಕೊಟ್ಟಿದ್ದಾರೆ. ಈ ಕುರಿತು ಇಂದಿನ ಆಯುಕ್ತರಿಗೆ ಸರ್ಕಾರದ ಅಧೀನ ಕಾರ್ಯದರ್ಶಿ ಬರೆದಿರುವ ಸುತ್ತೋಲೆ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಸಿರಿಯಾದಲ್ಲಿ ಬಿಕ್ಕಟ್ಟು – ಅಲ್ಲೋಲ ಕಲ್ಲೋಲ ಎಬ್ಬಿಸಿದೆ ಆಕೆಯ ಒಂದು ವೀಡಿಯೋ; ದೊಡ್ಡಣ್ಣನ ಕುತಂತ್ರದಿಂದ ಹೀಗಾಯ್ತಾ?