Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

Bengaluru City

ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

Public TV
Last updated: December 19, 2021 3:59 pm
Public TV
Share
4 Min Read
congresss bjp flag
SHARE

ಬೆಂಗಳೂರು: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿದೆ.

Belagavi MES 3 1

ಕುಂದಾನಗರಿ ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮುಖದ ಭಾಗ, ಮೂಗು ಮತ್ತು ಕತ್ತಿಯನ್ನು ಕಿಡಿಗೇಡಿಗಳು ಶನಿವಾರದ ಮುಂಜಾವಿನಲ್ಲಿ ವಿರೂಪಗೊಳಿಸಿದ್ದರು. ರಾಯಣ್ಣ ಹಿಡಿದಿದ್ದ ಕಠಾರಿಯನ್ನು ರಸ್ತೆಯ ಬದಿಗೆ ಎಸೆದಿದ್ದರು. ಜೊತೆಗೆ ಬಸ್ ಹಾಗೂ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿ, ಹೋಟೆಲ್‍ವೊಂದರ ಮುಂದೆ ಇದ್ದ ಕನ್ನಡ ನಾಮಫಲಕವನ್ನು ಕೆಳಕ್ಕುರುಳಿಸಿದ್ದರು. ಇದರಿಂದ ಸ್ಥಳೀಯರು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಮೂಲಕ ಹಿಂಸಾಚಾರ ಕೃತ್ಯವೆಸಗಿದ ಎಂಇಎಸ್ ಪುಂಡರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಕ್ರೋಶಹೊರಹಾಕಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

Belgavi MES 2

ಇದೀಗ ಈ ಘಟನೆ ಸಂಬಂಧ ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ಕೆಂಡಕಾರಿದೆ. ರಾಜ್ಯ ಸರ್ಕಾರದ ವಿರುದ್ಧ ವಿವಿಧ ಆಯಾಮಗಳಲ್ಲಿ ಕಾಂಗ್ರೆಸ್ ಅಪಪ್ರಚಾರದ ಸಂಚು ನಡೆಸುವುದಕ್ಕಾಗಿಯೇ ಕಾಂಗ್ರೆಸ್ ಬೆಳಗಾವಿ ಅಧಿವೇಶನದ ಸಮಯ ಬಳಸಿಕೊಳ್ಳುತ್ತಿಯೇ? ಹೌದು, ಮೊದಲ ದಿನದಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿ ಹಾಗೂ ಘಟನಾವಳಿಗಳು ಇದನ್ನೇ ಹೇಳುತ್ತಿವೆ ಎಂದು ಹರಿಹಾಯ್ದಿದೆ.

ರಾಜ್ಯ ಸರ್ಕಾರದ ವಿರುದ್ಧ ವಿವಿಧ ಆಯಾಮಗಳಲ್ಲಿ ಅಪಪ್ರಚಾರದ ಸಂಚು ನಡೆಸುವುದಕ್ಕಾಗಿಯೇ @INCKarnataka ಬೆಳಗಾವಿ ಅಧಿವೇಶನದ ಸಮಯ ಬಳಸಿಕೊಳ್ಳುತ್ತಿದೆಯೇ?

ಹೌದು, ಮೊದಲ‌‌‌ ದಿನದಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿ ಹಾಗೂ ಘಟನಾವಳಿಗಳು ಇದನ್ನೇ ಹೇಳುತ್ತಿವೆ.#ನಾಡದ್ರೋಹಿಕಾಂಗ್ರೆಸ್

— BJP Karnataka (@BJP4Karnataka) December 19, 2021

ಕೆಂಪುಕೋಟೆಗೆ ಖಲಿಸ್ತಾನಿಗಳು, ನಗರ ನಕ್ಸಲರು ದಾಳಿ ನಡೆಸಿದ ರೀತಿ ಬೆಳಗಾವಿ ಅಧಿವೇಶನಕ್ಕೆ ಟ್ರ್ಯಾಕ್ಟರ್ ಮೂಲಕ ಪ್ರವೇಶಿಸಲು ಕಾಂಗ್ರೆಸ್ಸಿಗರು ಯತ್ನಿಸಿದರು. ಒಂದೊಮ್ಮೆ ನಾಡದ್ರೋಹಿ ಕಾಂಗ್ರೆಸ್ ಪ್ರಯತ್ನ ಸಫಲವಾಗಿ, ಕಾಂಗ್ರೆಸ್ ಕಾರ್ಯಕರ್ತರ ಮುಖವಾಡ ಧರಿಸಿ ಸಮಾಜ ವಿಘಟಕರು ಗುಂಪಿನಲ್ಲಿ ಸೇರಿಸಿದ್ದರೆ ಅಧಿವೇಶನದ ಕತೆ ಏನಾಗುತ್ತಿತ್ತು? ಎಂದು ಪ್ರಶ್ನಿಸಿದೆ.

ಕೆಂಪುಕೋಟೆಗೆ ಖಲಿಸ್ತಾನಿಗಳು, ನಗರ ನಕ್ಸಲರು ದಾಳಿ ನಡೆಸಿದ ರೀತಿ ಬೆಳಗಾವಿ ಅಧಿವೇಶನಕ್ಕೆ ಟ್ರ್ಯಾಕ್ಟರ್ ಮೂಲಕ ಪ್ರವೇಶಿಸಲು ಕಾಂಗ್ರೆಸ್ಸಿಗರು ಯತ್ನಿಸಿದರು.

ಒಂದೊಮ್ಮೆ #ನಾಡದ್ರೋಹಿಕಾಂಗ್ರೆಸ್ ಪ್ರಯತ್ನ ಸಫಲವಾಗಿ, ಕಾಂಗ್ರೆಸ್ ಕಾರ್ಯಕರ್ತರ ಮುಖವಾಡ ಧರಿಸಿ ಸಮಾಜ ವಿಘಟಕರು ಗುಂಪಿನಲ್ಲಿ ಸೇರಿಸಿದ್ದರೆ ಅಧಿವೇಶನದ ಕತೆ ಏನಾಗುತ್ತಿತ್ತು?

— BJP Karnataka (@BJP4Karnataka) December 19, 2021

ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಬೆಳಗಾವಿಯಲ್ಲಿ ಅಧಿವೇಶನ ಆಯೋಜಿಸಲಾಗಿತ್ತು. ಆದರೆ ನಾಡದ್ರೋಹಿ ಕಾಂಗ್ರೆಸ್ ಒಂದು ದಿನವೂ ಕಲಾಪ ನಡೆಯುವುದಕ್ಕೂ ಅವಕಾಶ ನೀಡಲಿಲ್ಲ. ಪ್ರಶ್ನೋತ್ತರ ಕಲಾಪವನ್ನೂ ತಮ್ಮ ಪ್ರತಿಷ್ಠೆಗೆ ಬಲಿ ಪಡೆಯಲು ಮುಂದಾದರು. ಉತ್ತರ ಕರ್ನಾಟಕದ ಬಗ್ಗೆ ನಿಮಗಿರುವ ಬದ್ಧತೆಯೇ ಪ್ರಶ್ನಾರ್ಹವಾಗಿದೆ ಎಂದಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ದಾಂಧಲೆ – ರಾತ್ರಿ ಏನೇನು ಮಾಡಿದ್ದಾರೆ?

ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಬೆಳಗಾವಿಯಲ್ಲಿ ಅಧಿವೇಶನ ಆಯೋಜಿಸಲಾಗಿತ್ತು.

ಆದರೆ #ನಾಡದ್ರೋಹಿಕಾಂಗ್ರೆಸ್ ಒಂದು ದಿನವೂ ಕಲಾಪ ನಡೆಯುವುದಕ್ಕೂ ಅವಕಾಶ ನೀಡಲಿಲ್ಲ. ಪ್ರಶ್ನೋತ್ತರ ಕಲಾಪವನ್ನೂ ತಮ್ಮ ಪ್ರತಿಷ್ಠೆಗೆ ಬಲಿ ಪಡೆಯಲು ಮುಂದಾದರು.

ಉತ್ತರ ಕರ್ನಾಟಕದ ಬಗ್ಗೆ ನಿಮಗಿರುವ ಬದ್ಧತೆಯೇ ಪ್ರಶ್ನಾರ್ಹವಾಗಿದೆ.

— BJP Karnataka (@BJP4Karnataka) December 19, 2021

ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು, ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶವಾಗಿದೆ ಎಂದು ಆಕ್ರೋಶ ಹೊರಹಾಕಿದೆ.

bjp tweet

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ, ನಿಮ್ಮ ಹೋರಾಟಕ್ಕೆ ಜನ ಬೆಂಬಲ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸುತ್ತಿದ್ದೀರಾ? ಭಾಷೆ ಹಾಗೂ ಸ್ವಾತಂತ್ರ್ಯ ವೀರರಿಗೆ ಅಪಮಾನ ಮಾಡುವ ಷಡ್ಯಂತ್ರ ರೂಪುಗೊಂಡಿದ್ದು ಕಾಂಗ್ರೆಸ್ ವಾರ್ ರೂಮಿನಲ್ಲೇ? ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

ಕೆಪಿಸಿಸಿ ಅಧ್ಯಕ್ಷ @DKShivakumar ಅವರೇ,

ನಿಮ್ಮ ಹೋರಾಟಕ್ಕೆ ಜನ ಬೆಂಬಲ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸುತ್ತಿದ್ದೀರಾ?

ಭಾಷೆ ಹಾಗೂ ಸ್ವಾತಂತ್ರ್ಯ ವೀರರಿಗೆ ಅಪಮಾನ ಮಾಡುವ ಷಡ್ಯಂತ್ರ ರೂಪುಗೊಂಡಿದ್ದು ಕಾಂಗ್ರೆಸ್ ವಾರ್ ರೂಮಿನಲ್ಲೇ?#ನಾಡದ್ರೋಹಿಕಾಂಗ್ರೆಸ್

— BJP Karnataka (@BJP4Karnataka) December 19, 2021

ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಸಿದ್ದರಾಮಯ್ಯ ಅವರು ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ ಎಚ್ಚರಿಕೆ ನೀಡಿದೆ.

ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು @INCKarnataka ಹವಣಿಸುತ್ತಿದೆ.

ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ “ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ” ಎಂದು @siddaramaiah ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ.#ನಾಡದ್ರೋಹಿಕಾಂಗ್ರೆಸ್

— BJP Karnataka (@BJP4Karnataka) December 19, 2021

TAGGED:bengalurubjp tweetcongressDK Shivakumarsiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿ ಟ್ವೀಟ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
2 minutes ago
England vs Nepal
Cricket

T20 World Cup: ಕ್ರಿಕೆಟ್‌ ಶಿಶು ನೇಪಾಳ ವಿರುದ್ಧ ಕ್ರಿಕೆಟ್‌ ಜನಕ ಇಂಗ್ಲೆಂಡ್‌ಗೆ 4 ರನ್‌ಗಳ ಜಯ

Public TV
By Public TV
20 minutes ago
Crime News husband cheats wife in hassan
Crime

ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಕೈಕೊಟ್ಟ ಪತಿ -‌ ಮಹಿಳೆಯ ರೂಮ್‌ಗೆ ನುಗ್ಗಿ ಕುಟುಂಬಸ್ಥರಿಂದ ದಾಂಧಲೆ

Public TV
By Public TV
40 minutes ago
Namma Metro Purple Line
Bengaluru City

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ – ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ

Public TV
By Public TV
51 minutes ago
entrepreneur Dhruv Dutt Sharma
Crime

500 ಕೋಟಿ ರೂ. ವಂಚನೆ ಕೇಸ್‌; 32ನೇ ಅವೆನ್ಯೂ ಸಿಇಒ ಬಂಧನ

Public TV
By Public TV
1 hour ago
Namma Metro Greenline
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಭೀತಿ – ಪೊಲೀಸರ ಮೊರೆ ಹೋದ ಬಿಎಂಆರ್‌ಸಿಎಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?