Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಯಣ್ಣರ ಪ್ರತಿಮೆಗೆ ಕೈ ಇಟ್ಟವರ ಮೇಲೆ ಕರುಣೆ ಯಾಕೆ?: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಯಣ್ಣರ ಪ್ರತಿಮೆಗೆ ಕೈ ಇಟ್ಟವರ ಮೇಲೆ ಕರುಣೆ ಯಾಕೆ?: ಹೆಚ್‍ಡಿಕೆ

Bengaluru City

ರಾಯಣ್ಣರ ಪ್ರತಿಮೆಗೆ ಕೈ ಇಟ್ಟವರ ಮೇಲೆ ಕರುಣೆ ಯಾಕೆ?: ಹೆಚ್‍ಡಿಕೆ

Public TV
Last updated: December 21, 2021 1:56 pm
Public TV
Share
4 Min Read
KUMARASWAMY
SHARE

ಬೆಂಗಳೂರು: ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಮ್ಮ ರಾಯಣ್ಣರ ಪ್ರತಿಮೆ ಮೇಲೆ ಕೈ ಇಟ್ಟವರ ಮೇಲೆ ಕರುಣೆ ಯಾಕೆ? ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮುಖದ ಭಾಗ, ಮೂಗು ಮತ್ತು ಕತ್ತಿಯನ್ನು ಕಿಡಿಗೇಡಿಗಳು ಶನಿವಾರದ ಮುಂಜಾವಿನಲ್ಲಿ ವಿರೂಪಗೊಳಿಸಿದ್ದರು. ರಾಯಣ್ಣ ಹಿಡಿದಿದ್ದ ಕಠಾರಿಯನ್ನು ರಸ್ತೆಯ ಬದಿಗೆ ಎಸೆದಿದ್ದರು. ಸದ್ಯ ಈ ಕುರಿತಂತೆ ರಾಷ್ಟ್ರೀಯ ಪಕ್ಷಗಳ ವಿರುದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡುವ ಮೂಲಕ ಹರಿಹಾಯ್ದಿದ್ದಾರೆ.ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

 

ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿ ನಡೆದ ವಿಕೃತಿ ಬಗ್ಗೆ, ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣ ಅವರಿಗಾದ ಅಪಚಾರದ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ಬದ್ಧತೆ ಬಗ್ಗೆ ಈಗ ಪ್ರಶ್ನೆ ಉಂಟಾಗಿದೆ ಎಂದಿದ್ದಾರೆ.

ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿ ನಡೆದ ವಿಕೃತಿ ಬಗ್ಗೆ, #ಕನ್ನಡಿಗರಹೆಮ್ಮೆ ಸಂಗೊಳ್ಳಿ ರಾಯಣ್ಣ ಅವರಿಗಾದ ಅಪಚಾರದ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ಬದ್ಧತೆ ಬಗ್ಗೆ ಈಗ ಪ್ರಶ್ನೆ ಉಂಟಾಗಿದೆ. 1/7

— H D Kumaraswamy (@hd_kumaraswamy) December 21, 2021

ಮಾತೆತ್ತಿದರೆ ರಾಷ್ಟ್ರದ ಸಮಗ್ರತೆಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕವು 30 ರಾಜ್ಯಗಳಲ್ಲಿ ಒಂದು ರಾಜ್ಯವಷ್ಟೆ. ಕನ್ನಡವು ದೇಶ ಭಾಷೆಗಳಲ್ಲಿ ಒಂದು ಭಾಷೆ ಮಾತ್ರ. ಆದರೆ ನಮಗೆ ಕರ್ನಾಟಕವೇ ಕರ್ಮಭೂಮಿ. ಕನ್ನಡವೇ ತಾಯಿ. ನಾವು ಕನ್ನಡಮ್ಮನ ಕರುಳಬಳ್ಳಿಗಳು ಎಂದು ಹೇಳಿದ್ದಾರೆ.

ಮಾತೆತ್ತಿದರೆ ರಾಷ್ಟ್ರದ ಸಮಗ್ರತೆಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕವು 30 ರಾಜ್ಯಗಳಲ್ಲಿ ಒಂದು ರಾಜ್ಯವಷ್ಟೆ. ಕನ್ನಡವು ದೇಶ ಭಾಷೆಗಳಲ್ಲಿ ಒಂದು ಭಾಷೆ ಮಾತ್ರ. ಆದರೆ ನಮಗೆ ಕರ್ನಾಟಕವೇ ಕರ್ಮಭೂಮಿ. ಕನ್ನಡವೇ ತಾಯಿ. ನಾವು ಕನ್ನಡಮ್ಮನ ಕರುಳಬಳ್ಳಿಗಳು. 2/7

— H D Kumaraswamy (@hd_kumaraswamy) December 21, 2021

ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕ ಕೇವಲ ಚುನಾವಣೆ ಬಂದಾಗ ವೋಟ್ ಮಾಡುವ ಮತಯಂತ್ರ ಹಾಗೂ ತೆರಿಗೆ ರೂಪದಲ್ಲಿ ಕೇಂದ್ರದ ಖಜಾನೆ ತುಂಬುವ ಅಕ್ಷಯ ಪಾತ್ರೆ. ಆದರೆ ನಮಗೆ ನೆರೆ, ಬರ ಬಂದಾಗ ಅವರ ಮುಂದೆಯೇ ಭಿಕ್ಷೆಗೆ ನಿಲ್ಲಬೇಕು! ಇದೆಂಥಾ ವಿಪರ್ಯಾಸ? ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದೇಶದಲ್ಲಿ 200 ಗಡಿ ದಾಟಿದ ಓಮಿಕ್ರಾನ್ ಸೋಂಕಿತರ ಸಂಖ್ಯೆ – ನಾಲ್ಕನೇ ಸ್ಥಾನದಲ್ಲಿ ಕರ್ನಾಟಕ

ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕ ಕೇವಲ ಚುನಾವಣೆ ಬಂದಾಗ ವೋಟ್ ಮಾಡುವ ಮತಯಂತ್ರ ಹಾಗೂ ತೆರಿಗೆ ರೂಪದಲ್ಲಿ ಕೇಂದ್ರದ ಖಜಾನೆ ತುಂಬುವ ಅಕ್ಷಯ ಪಾತ್ರೆ. ಆದರೆ; ನಮಗೆ ನೆರೆ, ಬರ ಬಂದಾಗ ಅವರ ಮುಂದೆಯೇ ಭಿಕ್ಷೆಗೆ ನಿಲ್ಲಬೇಕು! ಇದೆಂಥಾ ವಿಪರ್ಯಾಸ? 3/7

— H D Kumaraswamy (@hd_kumaraswamy) December 21, 2021

ಗಡಿ, ಭಾಷೆ, ಜಲದ ಪ್ರಶ್ನೆ ಬಂದಾಗ ಆ ಪಕ್ಷಗಳ ಆದ್ಯತೆ ಕನ್ನಡ-ಕರ್ನಾಟಕ ಅಲ್ಲ. ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಬಂದವರನ್ನು ಸಹಿಸಿಕೊಳ್ಳುತ್ತಿದ್ದೇವೆ. ಕನ್ನಡಿಗರ ತೆರಿಗೆ ಹಣದಲ್ಲಿ ಜಾರಿ ಮಾಡಿದ ಯೋಜನೆ, ರಸ್ತೆ, ಸೇತುವೆಗಳಿಗೆ ಮಹಾರಾಷ್ಟ್ರದಲ್ಲಿ ಹುಟ್ಟಿದವರ ಹೆಸರಿಟ್ಟು ಔದಾರ್ಯ ತೋರುತ್ತಿದ್ದೇವೆ. ಇದು ಇನ್ನೆಷ್ಟು ದಿನ? ಎಂದು ಪ್ರಶ್ನಿಸಿದ್ದಾರೆ.

ಗಡಿ, ಭಾಷೆ, ಜಲದ ಪ್ರಶ್ನೆ ಬಂದಾಗ ಆ ಪಕ್ಷಗಳ ಆದ್ಯತೆ ಕನ್ನಡ-ಕರ್ನಾಟಕ ಅಲ್ಲ. ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಬಂದವರನ್ನು ಸಹಿಸಿಕೊಳ್ಳುತ್ತಿದ್ದೇವೆ. ಕನ್ನಡಿಗರ ತೆರಿಗೆ ಹಣದಲ್ಲಿ ಜಾರಿ ಮಾಡಿದ ಯೋಜನೆ, ರಸ್ತೆ, ಸೇತುವೆಗಳಿಗೆ ಮಹಾರಾಷ್ಟ್ರದಲ್ಲಿ ಹುಟ್ಟಿದವರ ಹೆಸರಿಟ್ಟು ಔದಾರ್ಯ ತೋರುತ್ತಿದ್ದೆವೆ. ಇದು ಇನ್ನೆಷ್ಟು ದಿನ? 4/7

— H D Kumaraswamy (@hd_kumaraswamy) December 21, 2021

ಬೆಳಗಾವಿಯ ಒಂದು ಹಳ್ಳಿಯಲ್ಲಿ ಹುಟ್ಟಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ, ಅದೇ ಬ್ರಿಟಿಷರು ಬಿಗಿದ ನೇಣು ಹಗ್ಗಕ್ಕೆ ಕೊರಳು ಕೊಟ್ಟ ಸಂಗೊಳ್ಳಿ ರಾಯಣ್ಣ ಅವರನ್ನು ಅಪಮಾನಿಸುತ್ತಾರೆ. ಅದೇ ಮೊಘಲರ ವಿರುದ್ಧ ಹೋರಾಡಿದ ಶಿವಾಜಿಯನ್ನು ಕೊಂಡಾಡುತ್ತಾರೆ. ಇದೆಂಥಾ ದೇಶಪ್ರೇಮ? ರಾಷ್ಟ್ರಪ್ರೇಮದಲ್ಲೂ ಬೇಧ ಭಾವವೇ? ಎಂದು ಕಿಡಿಕಾರಿದ್ದಾರೆ.  ಇದನ್ನೂ ಓದಿ:  ಶಾಸಕರೊಬ್ಬರ ಸಂತೃಪ್ತಿಗೆ ಡಿಕೆಶಿ ಎಂಇಎಸ್ ಪರ ಬ್ಯಾಟಿಂಗ್: ಸಚಿವ ಈಶ್ವರಪ್ಪ

ಬೆಳಗಾವಿಯ ಒಂದು ಹಳ್ಳಿಯಲ್ಲಿ ಹುಟ್ಟಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ, ಅದೇ ಬ್ರಿಟಿಷರು ಬಿಗಿದ ನೇಣು ಹಗ್ಗಕ್ಕೆ ಕೊರಳು ಕೊಟ್ಟ ಸಂಗೊಳ್ಳಿ ರಾಯಣ್ಣ ಅವರನ್ನು ಅಪಮಾನಿಸುತ್ತಾರೆ. ಅದೇ ಮೊಘಲರ ವಿರುದ್ಧ ಹೋರಾಡಿದ ಶಿವಾಜಿಯನ್ನು ಕೊಂಡಾಡುತ್ತಾರೆ. ಇದೆಂಥಾ ದೇಶಪ್ರೇಮ? ರಾಷ್ಟ್ರಪ್ರೇಮದಲ್ಲೂ ಬೇಧ ಭಾವವೇ? 5/7

— H D Kumaraswamy (@hd_kumaraswamy) December 21, 2021

2006ರಲ್ಲಿ ಶಿವಸೇನೆ-ಎಂಇಎಸ್ ಗಡಿತಂಟೆ ಮಾಡಿದಾಗ, ಆಗ ಕೇಂದ್ರದಲ್ಲಿ ಗೃಹಮಂತ್ರಿಯಾಗಿದ್ದ ಅದೇ ರಾಜ್ಯದ ನಾಯಕರು ಬೆಳಗಾವಿ ಮೇಲೆ ಕಣ್ಣು ಹಾಕಿದಾಗ, ಅಲ್ಲಿ ವಿಧಾನಕಲಾಪ ನಡೆಯಿತು. ಸುವರ್ಣಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆಯೂ ಆಯಿತು. ಇದು ಕನ್ನಡದ ಒಂದು ಸಣ್ಣ ಪಕ್ಷಕ್ಕೆ ಇದ್ದ ಬದ್ಧತೆ. ಈ ಎದೆಗಾರಿಕೆ ರಾಷ್ಟ್ರೀಯ ಪಕ್ಷಗಳಿಗೆ ಏಕಿಲ್ಲ? ಎಂದಿದ್ದಾರೆ.

2006ರಲ್ಲಿ ಶಿವಸೇನೆ-ಎಂಇಎಸ್ ಗಡಿತಂಟೆ ಮಾಡಿದಾಗ, ಆಗ ಕೇಂದ್ರದಲ್ಲಿ ಗೃಹಮಂತ್ರಿಯಾಗಿದ್ದ ಅದೇ ರಾಜ್ಯದ ನಾಯಕರು ಬೆಳಗಾವಿ ಮೇಲೆ ಕಣ್ಣು ಹಾಕಿದಾಗ, ಅಲ್ಲಿ ವಿಧಾನಕಲಾಪ ನಡೆಯಿತು. ಸುವರ್ಣಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆಯೂ ಆಯಿತು. ಇದು ಕನ್ನಡದ ಒಂದು ಸಣ್ಣ ಪಕ್ಷಕ್ಕೆ ಇದ್ದ ಬದ್ಧತೆ. ಈ ಎದೆಗಾರಿಕೆ ರಾಷ್ಟ್ರೀಯ ಪಕ್ಷಗಳಿಗೆ ಏಕಿಲ್ಲ? 6/7

— H D Kumaraswamy (@hd_kumaraswamy) December 21, 2021

ನಮ್ಮ ರಾಯಣ್ಣರ ಪ್ರತಿಮೆ ಮೇಲೆ ಕೈ ಇಟ್ಟವರ ಮೇಲೆ ಕರುಣೆ ಯಾಕೆ? ಎಂಇಎಸ್ ಬಗ್ಗೆ ಎರಡು ನಾಲಗೆಯಲ್ಲಿ ಮಾತನಾಡುವ ಕೈಚಳಕದ ಮರ್ಮವೇನು? ಮಸೂದೆಗಳನ್ನು ಇಟ್ಟುಕೊಂಡು ಕನ್ನಡದ ಆಸ್ಮಿತೆಯ ಮೇಲಾದ ದಾಳಿಯನ್ನು ವಿಷಯಾಂತರ ಮಾಡುವ ಹುನ್ನಾರ ಏಕೆ? ಕನ್ನಡಿಗರ ಹೆಮ್ಮೆ ಸಂಗೊಳ್ಳಿರಾಯಣ್ಣ ಎಂದು ಟ್ವೀಟ್ ಮಾಡಿದ್ದಾರೆ.

ನಮ್ಮ ರಾಯಣ್ಣರ ಪ್ರತಿಮೆ ಮೇಲೆ ʼಕೈʼ ಇಟ್ಟವರ ಮೇಲೆ ಕರುಣೆ ಯಾಕೆ? ಎಂಇಎಸ್ ಬಗ್ಗೆ ಎರಡು ನಾಲಗೆಯಲ್ಲಿ ಮಾತನಾಡುವ ʼಕೈಚಳಕʼದ ಮರ್ಮವೇನು? ಮಸೂದೆಗಳನ್ನು ಇಟ್ಟುಕೊಂಡು ಕನ್ನಡದ ಆಸ್ಮಿತೆಯ ಮೇಲಾದ ದಾಳಿಯನ್ನು ʼವಿಷಯಾಂತರʼ ಮಾಡುವ ಹುನ್ನಾರ ಏಕೆ? 7/7#ಕನ್ನಡಿಗರಹೆಮ್ಮೆಸಂಗೊಳ್ಳಿರಾಯಣ್ಣ

— H D Kumaraswamy (@hd_kumaraswamy) December 21, 2021

TAGGED:bengaluruh d kumaraswamySangolli Rayannastatuetweetಕುಮಾರಸ್ವಾಮಿಟ್ವೀಟ್ಪ್ರತಿಮೆಬೆಂಗಳೂರುಸಂಗೊಳ್ಳಿ ರಾಯಣ್ಣ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
12 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
20 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
22 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
39 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
44 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?