Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

Bengaluru City

ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

Public TV
Last updated: August 1, 2024 10:34 am
Public TV
Share
2 Min Read
SURESH KUMAR 2 1
SHARE

ಬೆಂಗಳೂರು: ಡಾ. ಶಿವರಾಮ ಕಾರಂತ ಬಡಾವಣೆಯ (Shivaram Karanth Layout) ನಿವೇಶನ ಹಂಚಿಕೆ ಕುರಿತು ಮಾಜಿ ಸಚಿವ ಸುರೇಶ್ ಕುಮಾರ್ (Suresh Kumar) ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಪತ್ರ ಬರೆದಿದ್ದಾರೆ. ಮೊದಲು ಹಲವು ಬಿಡಿಎ (BDA) ಬಡಾವಣೆಗಳ ಹಂಚಿಕೆದಾದರ ಕುಂದುಕೊರತೆಗಳನ್ನು ಸರಿಪಡಿಸುವಂತೆ ಡಿಸಿಎಂ ಡಿಕೆಶಿವಕುಮಾರ್‌ಗೆ ಆಗ್ರಹ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?
ಬನಶಂಕರಿ ಆರನೇ ಹಂತ ಬಡಾವಣೆಯಲ್ಲಿ, ಬಿಡಿಎ ಅರಣ್ಯ ಪ್ರದೇಶದಲ್ಲಿ (ತುರಹಳ್ಳಿ ಅರಣ್ಯ ಪ್ರದೇಶ) ಮತ್ತು ಅರಣ್ಯ ಬಫರ್ ವಲಯದಲ್ಲಿ 2003 – 2004 ರಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಿದ್ದರ ಫಲವಾಗಿ ಇಂದು 1500 ಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ತಮ್ಮ ಮನೆಗಳನ್ನು ನಿರ್ಮಿಸಲು ಸಾಧ್ಯವಾಗಿರುವುದಿಲ್ಲ. 20 ವರ್ಷ ಕಳೆದು ಹೋಗಿದ್ದರೂ ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಹಾಗೂ ಅರಣ್ಯ ಇಲಾಖೆಗಳು ಒಟ್ಟಿಗೆ ಕುಳಿತು ಚರ್ಚಿಸಿ ಪ್ರಸ್ತುತ ಭೂಮಿಯ ಮಾಲೀಕತ್ವದ ಬಗ್ಗೆ ಒಂದು ಒಪ್ಪಂದಕ್ಕೆ ಬರಲು ಸಾಧ್ಯವಾಗದೇ ಇರುವುದು ನಿಜಕ್ಕೂ ವಿಷಾದನೀಯ. ಬಿಡಿಎಯಿಂದ ನಿವೇಶನ ಪಡೆದು 20 ವರ್ಷಗಳು ಆದರೂ ತಮ್ಮ ನಿವೇಶನದಲ್ಲಿ ಒಂದು ಗೂಡು ಕಟ್ಟಿಕೊಳ್ಳುವ ಈ ಎಲ್ಲಾ ಸಂತ್ರಸ್ತ ಹಂಚಿಕೆದಾರರ ಆಸೆಗೆ ಕಣ್ಣೀರು ಎರಚುವಂತೆ ಮಾಡಿದೆ ಬಿಡಿಎ ಉದಾಸೀನ – ಬೇಜಾವ್ದಾರಿ ಮನಸ್ಥಿತಿ. ಇದನ್ನೂ ಓದಿ: Wayanad landslides – ಕಂಬನಿ… ಖಾಲಿಯಾಗಿದೆ…!

bengaluru development authority bda

 

ಹಾಗೆಯೇ ಸ್ವಾಧೀನತೆಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಅನೇಕ ದಾವೆಗಳು ಬಾಕಿ ಇರುವುದರಿಂದ ಬನಶಂಕರಿ ಆರನೇ ಹಂತ, ಅರ್ಕಾವತಿ ಲೇಔಟ್, ವಿಶ್ವೇಶ್ವರಯ್ಯ ಲೇಔಟ್ ಹಾಗೂ ಅಂಜನಾಪುರ ದಂತಹ ಕೆಲವು ಬಿಡಿಎ ನಿರ್ಮಿತ ಬಡಾವಣೆಗಳಲ್ಲಿನ ಸುಮಾರು ಐದು ಸಾವಿರಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ಜಮೀನಿನ ನೈಜ ಸ್ವಾಧೀನದಲ್ಲಿಲ್ಲದ ಕಾರಣ ಮನೆಗಳನ್ನು ಕಟ್ಟಿಕೊಳ್ಳಲು ಸಾಧ್ಯವಾಗದೇ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಅವರ ಪರಿಸ್ಥಿತಿ, ಸಂಕಟ ಹೇಳತೀರದು. ಅಲ್ಲದೆ ಇಲ್ಲಿನ ಕೆಲವು ಲೇಔಟ್ ಗಳಲ್ಲಿ ಭೂ ಸ್ವಾಧೀನಕ್ಕೆ ಒಳಪಟ್ಟ ಅನೇಕ ಜಮೀನುಗಳ ಮಾಲೀಕರು ತಮ್ಮ ಭೂಮಿಗೆ ಬದಲಾಗಿ ಪರಿಹಾರದ ರೂಪದಲ್ಲಿ ಬಿಡಿಎ ನೀಡುವ ನಿವೇಶನಗಳ ಪರಿಹಾರದ ಮಂಜೂರಾತಿಗಾಗಿ ಅನೇಕ ಸಮಯದಿಂದ ಎದುರು ನೋಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಮೊದಲಿಗೆ ಬನಶಂಕರಿ ಆರನೇ ಹಂತ, ಅರ್ಕಾವತಿ ಲೇಔಟ್, ವಿಶ್ವೇಶ್ವರಯ್ಯ ಲೇಔಟ್ ಮತ್ತು ಅಂಜನಾಪುರ ದಂತಹ ಬಡಾವಣೆಗಳಲ್ಲಿ ನಿವೇಶನ ಹಂಚಿಕೆಯಾಗಿ ಬಿಡಿಎಗೆ ಹಣ ಪಾವತಿ ಮಾಡಿ ನಿವೇಶನ ನೋಂದಣಿ ಮಾಡಿಕೊಂಡರೂ ನಾನಾ ಕಾರಣಗಳಿಂದ ನಿವೇಶನ ಸ್ವಾಧೀನ ಸಿಗಲು ಸಾಧ್ಯವಾಗದೇ ಇರುವ ಅರ್ಜಿದಾರರ ಮತ್ತು ಭೂ ಮಾಲೀಕರ ಪರಿಪಾಟಲುಗಳನ್ನು ಗಮನದಲ್ಲಿರಿಸಿಕೊಳ್ಳಬೇಕು. ಇವರ ಕುಂದು ಕೊರತೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಡಾ. ಶಿವರಾಮ ಕಾರಂತ ಬಡಾವಣೆಯಲ್ಲಿ ಲಭ್ಯವಿರುವ ನಿವೇಶನಗಳನ್ನು ಸಾರ್ವಜನಿಕರಿಂದ ಹಂಚಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸುವ ಮುನ್ನ ಮೊದಲಿಗೆ ಈ ಸಂತ್ರಸ್ತರಿಗೆ ಪರ್ಯಾಯ ನಿವೇಶನ ನೀಡಬೇಕಾಗಿರುವುದು ಸಮಂಜಸ. ಇದನ್ನೂ ಓದಿ: ಇಂದಿನಿಂದ 130 Kmph ವೇಗಕ್ಕಿಂತ ಜಾಸ್ತಿ ಸ್ಪೀಡ್‌ ಹೋದರೆ ದಂಡದ ಜೊತೆ ಜೈಲು!

dk shivakumar 2

ಇವರಿಗೆ ಮೊದಲಿಗೆ ನ್ಯಾಯಯುತವಾಗಿ ನಿವೇಶನ ಒದಗಿಸಬೇಕೆಂಬುದು ನನ್ನ ಆಗ್ರಹ ಪೂರ್ವಕ ಬೇಡಿಕೆ ಕೂಡ ಆಗಿದೆ. ಬಿಡಿಎ ಪರ್ಯಾಯ ನಿವೇಶನಗಳನ್ನು ಒದಗಿಸುವ ಮೊದಲು ಈ ಎಲ್ಲಾ ಭೂಬಾಧಿತ ನಿವೇಶನ ಹಂಚಿಕೆದಾರದಿಂದ ಅರ್ಜಿಗಳನ್ನು ಆಹ್ವಾನಿಸಿ, ಇದಕ್ಕಾಗಿ ವ್ಯಾಪಕ ಪ್ರಚಾರವನ್ನು ನೀಡಿ ಅಗತ್ಯ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ.

ಇದರಿಂದ ಬಿಡಿಎಗೆ ಹಂಚಿಕೆದಾರರ ಕುಂದುಕೊರತೆಗಳನ್ನು ಪರಿಹರಿಸಲು ಸಹಾಯವಾಗುತ್ತದೆ. ಜೊತೆಗೆ ಹಂಚಿಕೆದಾರರಿಂದ ಭವಿಷ್ಯದಲ್ಲಿ ನ್ಯಾಯಾಲಯದಲ್ಲಿ ದಾವೆಗಳನ್ನು ಹೂಡುವುದನ್ನು ಪೂರ್ಣವಾಗಿ ನಿಲ್ಲಿಸಬಹುದು ಮತ್ತು ಈಗಾಗಲೇ ದಾಖಲಾಗಿರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಬಹುದು. ಹಂಚಿಕೆದಾರರ ಶಾಪದಿಂದಲೂ ಬಿಡಿಎ ವಿಮುಕ್ತಿಗೊಳ್ಳಬಹುದು.

TAGGED:BDAbengaluruDK Shivakumarshivaram karanth layoutsuresh kumarಡಿಕೆ ಶಿವಕುಮಾರ್ಬಿಡಿಎಬೆಂಗಳೂರುಶಿವರಾಮ ಕಾರಂತ ಲೇಔಟ್‌ಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Jailer
ತಲೈವಾ ನಟನೆಯ ಜೈಲರ್-2 ಸಿನಿಮಾಗೆ ವಿದ್ಯಾ ಬಾಲನ್ ಎಂಟ್ರಿ!
Bollywood Cinema Latest South cinema Top Stories
Samantha Ruth Prabhu Raj Nidimoru
ಮದ್ವೆ ಬಳಿಕ ಕಾಣಿಸಿಕೊಂಡ ಸಮಂತಾ-ರಾಜ್ ನಿಡಿಮೋರು..!
Cinema Latest Top Stories
Miraj
ʻದೇವರು ರುಜು ಮಾಡಿದನುʼ ಚಿತ್ರದ ಸಾಂಗ್ ರಿಲೀಸ್ – ವಿರಾಜ್ ಬಿಂದಾಸ್ ಕುಣಿತ
Cinema Latest Sandalwood
gilli rajat
ರಜತ್‌ ಆಚೆ ಕಳಿಸಿಯೇ ನಾನು ಆಚೆ ಹೋಗೋದು: ಸುದೀಪ್‌ ಎದುರೇ ಗಿಲ್ಲಿ ಸವಾಲ್‌
Cinema Latest Top Stories TV Shows

You Might Also Like

Shamanuru
Bengaluru City

ಶಾಮನೂರು ಅಂತ್ಯಕ್ರಿಯೆಗೆ ಸ್ಥಳ ನಿಗದಿ – ಸೋಮವಾರ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

Public TV
By Public TV
2 hours ago
Shamanur Shivashankarappa
Bengaluru City

ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ

Public TV
By Public TV
2 hours ago
Team India 3
Cricket

ಧರ್ಮಶಾಲಾದಲ್ಲಿ ಟೀಂ ಇಂಡಿಯಾ ದರ್ಬಾರ್‌ – ಆಫ್ರಿಕಾ ವಿರುದ್ಧ 7 ವಿಕೆಟ್‌ಗಳ ಜಯ, ಸರಣಿ 2-1 ಮುನ್ನಡೆ

Public TV
By Public TV
3 hours ago
Nitin Nabin
Latest

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ

Public TV
By Public TV
3 hours ago
Davangere DC office
Davanagere

ಶಾಮನೂರು ನಿಧನ – ಸೋಮವಾರ ದಾವಣಗೆರೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Public TV
By Public TV
3 hours ago
Shamanur Shivashankarappa 2
Bengaluru City

ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪ ನಿಧನ – ಸಿದ್ರಾಮಯ್ಯ, ದೇವೇಗೌಡ, ರಾಹುಲ್‌ ಗಾಂಧಿ ಸೇರಿ ಗಣ್ಯರಿಂದ ಸಂತಾಪ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?