Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

Bengaluru City

ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

Public TV
Last updated: August 1, 2024 10:34 am
Public TV
Share
2 Min Read
SURESH KUMAR 2 1
SHARE

ಬೆಂಗಳೂರು: ಡಾ. ಶಿವರಾಮ ಕಾರಂತ ಬಡಾವಣೆಯ (Shivaram Karanth Layout) ನಿವೇಶನ ಹಂಚಿಕೆ ಕುರಿತು ಮಾಜಿ ಸಚಿವ ಸುರೇಶ್ ಕುಮಾರ್ (Suresh Kumar) ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಪತ್ರ ಬರೆದಿದ್ದಾರೆ. ಮೊದಲು ಹಲವು ಬಿಡಿಎ (BDA) ಬಡಾವಣೆಗಳ ಹಂಚಿಕೆದಾದರ ಕುಂದುಕೊರತೆಗಳನ್ನು ಸರಿಪಡಿಸುವಂತೆ ಡಿಸಿಎಂ ಡಿಕೆಶಿವಕುಮಾರ್‌ಗೆ ಆಗ್ರಹ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?
ಬನಶಂಕರಿ ಆರನೇ ಹಂತ ಬಡಾವಣೆಯಲ್ಲಿ, ಬಿಡಿಎ ಅರಣ್ಯ ಪ್ರದೇಶದಲ್ಲಿ (ತುರಹಳ್ಳಿ ಅರಣ್ಯ ಪ್ರದೇಶ) ಮತ್ತು ಅರಣ್ಯ ಬಫರ್ ವಲಯದಲ್ಲಿ 2003 – 2004 ರಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಿದ್ದರ ಫಲವಾಗಿ ಇಂದು 1500 ಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ತಮ್ಮ ಮನೆಗಳನ್ನು ನಿರ್ಮಿಸಲು ಸಾಧ್ಯವಾಗಿರುವುದಿಲ್ಲ. 20 ವರ್ಷ ಕಳೆದು ಹೋಗಿದ್ದರೂ ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಹಾಗೂ ಅರಣ್ಯ ಇಲಾಖೆಗಳು ಒಟ್ಟಿಗೆ ಕುಳಿತು ಚರ್ಚಿಸಿ ಪ್ರಸ್ತುತ ಭೂಮಿಯ ಮಾಲೀಕತ್ವದ ಬಗ್ಗೆ ಒಂದು ಒಪ್ಪಂದಕ್ಕೆ ಬರಲು ಸಾಧ್ಯವಾಗದೇ ಇರುವುದು ನಿಜಕ್ಕೂ ವಿಷಾದನೀಯ. ಬಿಡಿಎಯಿಂದ ನಿವೇಶನ ಪಡೆದು 20 ವರ್ಷಗಳು ಆದರೂ ತಮ್ಮ ನಿವೇಶನದಲ್ಲಿ ಒಂದು ಗೂಡು ಕಟ್ಟಿಕೊಳ್ಳುವ ಈ ಎಲ್ಲಾ ಸಂತ್ರಸ್ತ ಹಂಚಿಕೆದಾರರ ಆಸೆಗೆ ಕಣ್ಣೀರು ಎರಚುವಂತೆ ಮಾಡಿದೆ ಬಿಡಿಎ ಉದಾಸೀನ – ಬೇಜಾವ್ದಾರಿ ಮನಸ್ಥಿತಿ. ಇದನ್ನೂ ಓದಿ: Wayanad landslides – ಕಂಬನಿ… ಖಾಲಿಯಾಗಿದೆ…!

bengaluru development authority bda

 

ಹಾಗೆಯೇ ಸ್ವಾಧೀನತೆಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಅನೇಕ ದಾವೆಗಳು ಬಾಕಿ ಇರುವುದರಿಂದ ಬನಶಂಕರಿ ಆರನೇ ಹಂತ, ಅರ್ಕಾವತಿ ಲೇಔಟ್, ವಿಶ್ವೇಶ್ವರಯ್ಯ ಲೇಔಟ್ ಹಾಗೂ ಅಂಜನಾಪುರ ದಂತಹ ಕೆಲವು ಬಿಡಿಎ ನಿರ್ಮಿತ ಬಡಾವಣೆಗಳಲ್ಲಿನ ಸುಮಾರು ಐದು ಸಾವಿರಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ಜಮೀನಿನ ನೈಜ ಸ್ವಾಧೀನದಲ್ಲಿಲ್ಲದ ಕಾರಣ ಮನೆಗಳನ್ನು ಕಟ್ಟಿಕೊಳ್ಳಲು ಸಾಧ್ಯವಾಗದೇ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಅವರ ಪರಿಸ್ಥಿತಿ, ಸಂಕಟ ಹೇಳತೀರದು. ಅಲ್ಲದೆ ಇಲ್ಲಿನ ಕೆಲವು ಲೇಔಟ್ ಗಳಲ್ಲಿ ಭೂ ಸ್ವಾಧೀನಕ್ಕೆ ಒಳಪಟ್ಟ ಅನೇಕ ಜಮೀನುಗಳ ಮಾಲೀಕರು ತಮ್ಮ ಭೂಮಿಗೆ ಬದಲಾಗಿ ಪರಿಹಾರದ ರೂಪದಲ್ಲಿ ಬಿಡಿಎ ನೀಡುವ ನಿವೇಶನಗಳ ಪರಿಹಾರದ ಮಂಜೂರಾತಿಗಾಗಿ ಅನೇಕ ಸಮಯದಿಂದ ಎದುರು ನೋಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಮೊದಲಿಗೆ ಬನಶಂಕರಿ ಆರನೇ ಹಂತ, ಅರ್ಕಾವತಿ ಲೇಔಟ್, ವಿಶ್ವೇಶ್ವರಯ್ಯ ಲೇಔಟ್ ಮತ್ತು ಅಂಜನಾಪುರ ದಂತಹ ಬಡಾವಣೆಗಳಲ್ಲಿ ನಿವೇಶನ ಹಂಚಿಕೆಯಾಗಿ ಬಿಡಿಎಗೆ ಹಣ ಪಾವತಿ ಮಾಡಿ ನಿವೇಶನ ನೋಂದಣಿ ಮಾಡಿಕೊಂಡರೂ ನಾನಾ ಕಾರಣಗಳಿಂದ ನಿವೇಶನ ಸ್ವಾಧೀನ ಸಿಗಲು ಸಾಧ್ಯವಾಗದೇ ಇರುವ ಅರ್ಜಿದಾರರ ಮತ್ತು ಭೂ ಮಾಲೀಕರ ಪರಿಪಾಟಲುಗಳನ್ನು ಗಮನದಲ್ಲಿರಿಸಿಕೊಳ್ಳಬೇಕು. ಇವರ ಕುಂದು ಕೊರತೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಡಾ. ಶಿವರಾಮ ಕಾರಂತ ಬಡಾವಣೆಯಲ್ಲಿ ಲಭ್ಯವಿರುವ ನಿವೇಶನಗಳನ್ನು ಸಾರ್ವಜನಿಕರಿಂದ ಹಂಚಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸುವ ಮುನ್ನ ಮೊದಲಿಗೆ ಈ ಸಂತ್ರಸ್ತರಿಗೆ ಪರ್ಯಾಯ ನಿವೇಶನ ನೀಡಬೇಕಾಗಿರುವುದು ಸಮಂಜಸ. ಇದನ್ನೂ ಓದಿ: ಇಂದಿನಿಂದ 130 Kmph ವೇಗಕ್ಕಿಂತ ಜಾಸ್ತಿ ಸ್ಪೀಡ್‌ ಹೋದರೆ ದಂಡದ ಜೊತೆ ಜೈಲು!

dk shivakumar 2

ಇವರಿಗೆ ಮೊದಲಿಗೆ ನ್ಯಾಯಯುತವಾಗಿ ನಿವೇಶನ ಒದಗಿಸಬೇಕೆಂಬುದು ನನ್ನ ಆಗ್ರಹ ಪೂರ್ವಕ ಬೇಡಿಕೆ ಕೂಡ ಆಗಿದೆ. ಬಿಡಿಎ ಪರ್ಯಾಯ ನಿವೇಶನಗಳನ್ನು ಒದಗಿಸುವ ಮೊದಲು ಈ ಎಲ್ಲಾ ಭೂಬಾಧಿತ ನಿವೇಶನ ಹಂಚಿಕೆದಾರದಿಂದ ಅರ್ಜಿಗಳನ್ನು ಆಹ್ವಾನಿಸಿ, ಇದಕ್ಕಾಗಿ ವ್ಯಾಪಕ ಪ್ರಚಾರವನ್ನು ನೀಡಿ ಅಗತ್ಯ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ.

ಇದರಿಂದ ಬಿಡಿಎಗೆ ಹಂಚಿಕೆದಾರರ ಕುಂದುಕೊರತೆಗಳನ್ನು ಪರಿಹರಿಸಲು ಸಹಾಯವಾಗುತ್ತದೆ. ಜೊತೆಗೆ ಹಂಚಿಕೆದಾರರಿಂದ ಭವಿಷ್ಯದಲ್ಲಿ ನ್ಯಾಯಾಲಯದಲ್ಲಿ ದಾವೆಗಳನ್ನು ಹೂಡುವುದನ್ನು ಪೂರ್ಣವಾಗಿ ನಿಲ್ಲಿಸಬಹುದು ಮತ್ತು ಈಗಾಗಲೇ ದಾಖಲಾಗಿರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಬಹುದು. ಹಂಚಿಕೆದಾರರ ಶಾಪದಿಂದಲೂ ಬಿಡಿಎ ವಿಮುಕ್ತಿಗೊಳ್ಳಬಹುದು.

TAGGED:BDAbengaluruDK Shivakumarshivaram karanth layoutsuresh kumarಡಿಕೆ ಶಿವಕುಮಾರ್ಬಿಡಿಎಬೆಂಗಳೂರುಶಿವರಾಮ ಕಾರಂತ ಲೇಔಟ್‌ಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
60 minutes ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
1 hour ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
2 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
3 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
3 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?