ಎರಡು ಬಸ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲಿಯೇ 3 ಕನ್ನಡಿಗರು ಸೇರಿ 7 ಜನರ ಸಾವು!

Public TV
1 Min Read
ACCIDENT SALEM

ಚೆನ್ನೈ: ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದು ಕರ್ನಾಟಕ ಮೂಲದ ಮೂವರು ಸೇರಿ ಒಟ್ಟು 7 ಮಂದಿ ಮೃತಪಟ್ಟ ಘಟನೆ ಸೇಲಂ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಮಿಂಗಮ್ ಬಳಿ ನಡೆದಿದೆ.

ಇಂದು ಬೆಳಗಿನ ಜಾವ ಘಟನೆ ನಡೆದಿದ್ದು, ಧರ್ಮಾಪುರಿಯಿಂದ ಬರುತ್ತಿದ್ದ ಬಸ್ ಚಾಲಕನು ರಸ್ತೆ ಮಧ್ಯದಲ್ಲಿ ನಿಂತಿದ್ದ ಲಾರಿಯನ್ನು ತಪ್ಪಿಸಲು ಮುಂದಾಗಿದ್ದ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಎದುರಿಗೆ ಬರುತ್ತಿದ್ದ (ಕೇರಳದ ಪಲಕ್ಕಡ್ ಕಡೆಗೆ ಹೊರಟಿದ್ದ) ಓಮಿನಿ ಬಸ್ಸಿಗೆ ಡಿಕ್ಕಿ ಹೊಡೆದಿದೆ.

ವೇಗವಾಗಿದ್ದ ಎರಡೂ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಓಮಿನಿ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಅದರಲ್ಲಿದ್ದ ಕೆಲವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅವರ ದೇಹಗಳು ಗುರುತು ಸಿಗದಂತಾಗಿದೆ. ಅಪಘಾತದಲ್ಲಿ 11 ಮಹಿಳೆಯರು ಸೇರಿದಂತೆ 37 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರನ್ನು ಮೋಹನ್ ಕುಮಾರಂಗಳಂ ಸರ್ಕಾರಿ ವೈದ್ಯಕೀಯ ಆಸ್ಪತ್ರೆಗೆ ಹಾಗೂ ಉಳಿದವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಈ ಕುರಿತು ಸುರಮಂಗಲಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *